ವಿಶ್ವಕ್ಕೆ ಸಂಖ್ಯಾಶಾಸ್ತ್ರಜ್ಞ ನೋಬಿಸ್ ಕೊಡುಗೆ ಅನನ್ಯ: ಡಾ| ಔದ್ರಾಮ್
Team Udayavani, Jul 5, 2020, 9:55 AM IST
ವಿಜಯಪುರ: ಜಗತ್ತಿನಲ್ಲಿ ಸಂಖ್ಯಾಶಾಸ್ತ್ರದ ಮಹತ್ವದ ಮನವರಿಕೆ ಮಾಡಿಕೊಟ್ಟ ಮೊದಲಿಗ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ| ಪಿ.ಸಿ. ಮಹಾಲೋನೋಬಿಸ್, ಪಂಚವಾರ್ಷಿಕ ಯೋಜನೆಗಳ ನಿರೂಪಣೆಯಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಖ್ಯಾಶಾಸ್ತ್ರಜ್ಞ ಪ್ರೊ| ಪಿ.ಸಿ. ಮಹಾಲ್ ನೋಬಿಸ್ ಜನ್ಮದಿನ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ನಿತ್ಯದ ಜೀವನದಲ್ಲಿ ನೋಬಿಸ್ ನೀಡಿದ ಕೊಡುಗೆ ಸ್ಮರಿಸಬೇಕು. ಪ್ರಸಕ್ತ ಸಂದರ್ಭದಲ್ಲಿ ಯಾವುದೇ ದೇಶ ತನ್ನ ಯೋಜನೆ ರೂಪಿಸಲು ಅಂಕಿ-ಅಂಶಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬುದನ್ನು ಮನವರಿಕೆ ಮಾಡಿಕೊಟ್ಟವರು ನೋಬಿಸ್ ಎಂದು ವಿಶ್ಲೇಷಿಸಿದರು.
ಲಿಂಗ ಸಮಾನತೆ ಕುರಿತು ತಿಳಿಸಿ ಸ್ತ್ರೀ-ಪುರುಷರು ಸಮಾನರು. ಗಂಡು, ಹೆಣ್ಣು ಎಂಬ ಭೇದವಿಲ್ಲದೆ ಸಮಾನ ಶಿಕ್ಷಣ ಪಡೆಯಬೇಕು. ವಾಯುಮಾಲಿನ್ಯ, ಜಲಮಾಲಿನ್ಯದ ಜೊತೆಗೆ ಆರೋಗ್ಯ ಮತ್ತು ಮನಸ್ಸಿನ ಮಾಲಿನ್ಯ ತೊಡೆದು ಹಾಕಬೇಕು. ಹಿರಿಯರನ್ನು ಹಿರಿಯರಾಗಿ ಕಾಣದೇ ವೃದ್ಧಾಶ್ರಮಗಳಲ್ಲಿ ಕಳುಹಿಸುತ್ತಿರುವುದು ಖೇದಕರ ಹಾಗೂ ಆತಂಕದ ಸಂಗತಿ. ನಾವು ನಿಸರ್ಗವನ್ನು ಕಾಪಾಡಿದರೆ ನಿಸರ್ಗ ನಮ್ಮನ್ನು ಕಾಪಾಡುತ್ತದೆ ಎಂಬ ನೈಜತೆಯನ್ನು ಎಲ್ಲರೂ ಅರಿಯಬೇಕು ಎಂದರು.
ಈ ವೇಳೆ ಸುಸ್ಥಿರ ಅಭಿವೃದ್ಧಿಯ 17 ಗುರಿಗಳ ಪ್ರಚಾರ ಪರಿಕರಗಳನ್ನು ಬಿಡುಗಡೆ ಮಾಡಲಾಯಿತು. ಜಿಪಂ ಮುಖ್ಯ ಯೋಜನಾಧಿಕಾರಿ ಎನ್.ಕೆ. ಗೋಠೆ, ಜಿಪಂ ವಿಜಯಪುರ ಕಚೇರಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ. ಅಲ್ಲಾಪುರ ಸಹಾಯಕ ಯೋಜನಾ ನಿರ್ದೇಶಕ ಸಿ.ಬಿ. ಕುಂಬಾರ, ಎಸ್.ಬಿ. ಆರ್ಟ್ಸ್ ಮತ್ತು ಕೆಸಿಪಿ ಸೈನ್ಸ್ ಕಾಲೇಜಿನ ಉಪನ್ಯಾಸಕ ಆರ್.ಆರ್. ಬಿರಾದಾರ, ಜಿಪಂ ಕೌಶಲಾಭಿವೃದ್ಧಿ ಅಧಿಕಾರಿಗಳು ಇದ್ದರು. ಎ.ಬಿ. ಮನಿಯಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!