Vijayapura; ಡೋಣಿ ನದಿ ಹೂಳೆತ್ತಲು ಕೇಂದ್ರಕ್ಕೆ ಪ್ರಸ್ತಾವನೆ: ಎಂ.ಬಿ.ಪಾಟೀಲ
Team Udayavani, Oct 17, 2023, 2:42 PM IST
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಸುವ ಡೋಣಿ ನದಿ ಹೂಳೆತ್ತುವ ಕುರಿತು ಕೇಂದ್ರದಿಂದ ಅನುಜಂಟಿ ಪಡೆಯಲು ಸಮಗ್ರ ಯೋಜನಾ ವರದಿ ಸಿದ್ದಪಡಿಸಲಾಗಿದೆ. ಬಿಹಾರದ ಕೋಸಿ ನದಿ ಮಾದರಿಯಲ್ಲಿ ಕೇಂದ್ರದಿಂದ ನೆರವು ಪಡೆಯುವ ಕುರಿತು ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಕೈಗಾರಿಕೆ ಖಾತೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯಕ್ಕಿಂತ ಕೇಂದ್ರ ಸರ್ಕಾರದ ಪಾತ್ರ ಮಹತ್ವದ್ದಾಗಿದೆ. ಈ ಹಿಂದೆ ಬಿಹಾರದ ಕೋಸಿ ನದಿ ಪ್ರವಾಹ ನಿಗ್ರಹಕ್ಕೆ 4000 ರೂ. ವೆಚ್ಚವನ್ನು ಕೇಂದ್ರವೇ ಭರಿಸಿದೆ. ಹೀಗಾಗಿ ಕರ್ನಾಟಕದ ಉತ್ತರ ಭಾಗದಲ್ಲಿ ಕೋಸಿ ನದಿ ಮಾದರಿಯಲ್ಲೇ ಡೋಣಿ ನದಿ ಪ್ರವಾಹ ನಿಗ್ರಹಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು.
ಡೋಣಿ ನದಿಯಲ್ಲಿರುವ ತಿರುವುಗಳನ್ನು ನೇರ ಮಾಡುವುದು, ಕಳೆಯ ಕಟ್ಟಡಗಳನ್ನು ತೆರವು ಮಾಡಿ, ಹೊಸ ಕಟ್ಟಡಗಳನ್ನು ನಿರ್ಮಿಸಿವುದು, ಜಾಲಿ ಕಂಟಿಯನ್ನು ತೆರವು ಮಾಡುವಂಥ ಕೆಲಸ ಆಗಬೇಕಿದೆ. ಈ ಎಲ್ಲ ಅಂಶಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಕೋಸಿ ನದಿ ಯೋಜನೆ ಮಾದರಿಯಲ್ಲಿ ನೆರವು ನೀಡುವಂತೆ ಕೋರುತ್ತೇವೆ. ರಾಜ್ಯ ಸರ್ಕಾರ ಶೇ.10-20 ರಷ್ಟು ವೆಚ್ವವನ್ನು ಭರಿಸಲು ಸಿದ್ಧವಿದೆ ಎಂದರು.
ಡೋಣಿ ನದಿ ಹೂಳು ಎತ್ತುವ ಕುರಿತ ಯೋಜನೆಗೆ ಈಗಾಗಲೇ 2004 ರಲ್ಲಿ ಸಿದ್ಧಪಡಿಸಿದ ಸಮಗ್ರ ಯೋಜನಾ ವರದಿಯಲ್ಲಿ 2400 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿತ್ತು. ಇಷ್ಟೊಂದು ಹಣವನ್ನು ರಾಜ್ಯ ಸರ್ಕಾರ ಭರಿಸಲು ಸಾಧ್ಯವಿಲ್ಲ. ಸದರಿ ವರದಿಯಲ್ಲಿ ಆರ್ಥಿಕ ಉಳಿತಾಯಕ್ಕೆ ಅನಗತ್ಯ ವೆಚ್ಚ ಕಡಿತ ಮಾಡಿ, ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ