ಹೊಸ ಆಂಬ್ಯುಲೆನ್ಸ್‌ಗಳಿಗೆ ಪ್ರಸ್ತಾವನೆ


Team Udayavani, Dec 16, 2018, 12:26 PM IST

vij-1.jpg

ವಿಜಯಪುರ: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ 1 ಬೈಕ್‌ ಆಂಬ್ಯುಲೆನ್ಸ್‌ ಸೇವೆ, 108 ಆರೋಗ್ಯ ರಕ್ಷಾ ಕವಚ ಯೋಜನೆಯ 28 ಆಂಬ್ಯುಲೆನ್ಸ್‌ ವಾಹನಗಳಿದ್ದು, ಪ್ರಸಕ್ತ ವರ್ಷದಲ್ಲಿ ಈ ಆಂಬ್ಯುಲೆನ್ಸ್‌ಗಳನ್ನು ಬದಲಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಿರುವ ಆಂಬ್ಯುಲೆನ್ಸ್‌ಗಳು ಸುಭದ್ರವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಬದಲಾವಣೆ ಅಗತ್ಯ ಮನಗಂಡು ಪ್ರಸ್ತಾವನೆ ಸಲ್ಲಿಸಲಾಗಿದೆ. ಮತ್ತೂಂದೆಡೆ ಜಿಲ್ಲಾ ಸರ್ಕಾರಿ ಆಸ್ಪತ್ರೆ ವ್ಯಾಪ್ತಿಯಲ್ಲಿ ನಗುಮಗು ಸೇರಿದಂತೆ 4 ಆಂಬ್ಯುಲೆನ್ಸ್‌ಗಳಿವೆ, ಬಹುತೇಕ ವಾಹನಗಳಲ್ಲಿ ತುರ್ತು ಅಗತ್ಯ ಸಂದರ್ಭದಲ್ಲಿ ಬೇಕಾದ ವೆಂಟಿಲೇಟರ್‌ ವ್ಯವಸ್ಥೆ ಇದೆ. ಜಿಲ್ಲೆಯ ಮಮದಾಪುರ, ಅಥರ್ಗಾ ಹಾಗೂ ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೊಸದಾಗಿ ಆಂಬ್ಯುಲೆನ್ಸ್‌ ಸೇವೆಗೆ ಹಾಗೂ ಕಲಕೇರಿ ಆಂಬ್ಯುಲೆನ್ಸ್‌ ಬದಲಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಹೊರತಾಗಿ ತಾಳಿಕೋಟೆ ನಗುಮಗು ಆಂಬ್ಯುಲೆನ್ಸ್‌ ಅಪಘಾತದಿಂದ ಮೂಲೆ ಸೇರಿದೆ.

ಖಾಸಗಿ ಆಸ್ಪತ್ರೆಗಳ ಧನದಾಹದ ಮಧ್ಯೆ ಬಡವರ ಪಾಲಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆ ವರದಾನ ಎನಿಸಿದೆ. ಹಲವು ಆಧುನಿಕ ತಂತ್ರಜ್ಞಾನದ ಸೌಲಭ್ಯಗಳ ಸಹಿತ ಸರ್ಕಾರಿ ಆರೋಗ್ಯ ಸೇವೆ ನೀಡುವ ಜಿಲ್ಲಾ ಆಸ್ಪತ್ರೆಯ ಗುಣಮಟ್ಟದ ಸೇವೆಗಾಗಿ 2013ರಲ್ಲಿ ಇಂಡಿಯನ್‌ ಹೆಲ್ತ್‌ಕೇರ್‌ ಪ್ರಶಸ್ತಿ, 2016 ಹಾಗೂ 2017ರಲ್ಲಿ ಎರಡು ಬಾರಿ ಕಾಯಕಲ್ಪ ಪ್ರಶಸ್ತಿ ದೊರಕಿದ್ದರೆ, ಕಳೆದ ವರ್ಷವೇ ರಾಷ್ಟ್ರೀಯ ಸೇವಾ ಖಾತ್ರಿ ಪ್ರಶಸ್ತಿ ಪಡೆದಿದೆ. ಎಚ್‌ಐವಿ ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸುವಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕಾಗಿ 2009 ಕೆಸೆಪ್ಸ್‌ ನೀಡಿದ್ದ ಪ್ರಶಸ್ತಿ ಈ ಬಾರಿಯೂ
ದೊರೆತಿದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭಿಸಿದ್ದು, 100 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದ 20 ಹಾಸಿಗಳೂ ಇವೆ. ಗರ್ಭಿಣಿಯರ ಸುರಕ್ಷಿತ ಹೆರಿಗೆ ಹಾಗೂ ಮಕ್ಕಳ ಆರೈಕೆಗಾಗಿ ಸ್ತ್ರೀರೋಗ, ಮಕ್ಕಳ ತಜ್ಞರು ಹಾಗೂ ಅನೆಸ್ತೇಸಿಯಾ ಸೇರಿದಂತೆ 14 ತಜ್ಞ ವೈದ್ಯರು ಸೇರಿ 36 ಸಿಬ್ಬಂದಿ ನಿರಂತರ ಸೇವೆ ನೀಡುತ್ತಿದ್ದಾರೆ. ಪರಿಣಾಮ ಸಾರ್ವಜನಿಕ ಮನ್ನಣೆಗೆ ಪಾತ್ರವಾಗಿದೆ. ಪರಿಣಾಮವೇ ಮಾಸಿಕ ಸರಾಸರಿ ಸುಮಾರು 1000 ಸುರಕ್ಷಿತ ಹೆರಿಗೆ ನಡೆಯುತ್ತಿವೆ. ಇನ್ನೂ 15 ವೈದ್ಯ-ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಕೋರಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ರಾಜ್ಯ-ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿ ಸಂದಿರುವುದೇ ಇಲ್ಲಿ ಹಲವು ಆಧುನಿಕ ತಂತ್ರಜ್ಞಾನದ ಸುಧಾರಿತ ವೈದ್ಯಕೀಯ ಸೌಲಭ್ಯ ದೊರೆಯುತ್ತಿರುವುದಕ್ಕೆ ಜೀವಂತ ಸಾಕ್ಷಿ. ಭವಿಷ್ಯದಲ್ಲೂ ರಾಜ್ಯದಲ್ಲೇ ವಿಜಯಪುರ ಜಿಲ್ಲೆಯನ್ನು ಸರ್ಕಾರಿ ಆರೋಗ್ಯ ಸೇವೆಯಲ್ಲಿ ಪ್ರಥಮ ಸ್ಥಾನದಲ್ಲೇ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. 
ಡಾ| ಶರಣಪ್ಪ ಕಟ್ಟಿ, ಶಸ್ತ್ರ ಚಿಕಿತ್ಸಕರು, ಜಿಲ್ಲಾ ಸರ್ಕಾರಿ ಆಸ್ಪತ್ರೆ, ವಿಜಯಪುರ

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.