ಎಂಇಎಸ್ ವಿರುದ್ಧ ಪ್ರತಿಭಟನೆ
Team Udayavani, Dec 16, 2021, 5:43 PM IST
ಮುದ್ದೇಬಿಹಾಳ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಸಂಘಟನೆಯವರು ಕರ್ನಾಟಕದ ನಾಡಧ್ವಜ ಸುಟ್ಟು ಹಾಕಿದ್ದನ್ನು ಖಂಡಿಸಿ ಬಿ.ವೈ. ವಿಜಯೇಂದ್ರ ಯುವ ಬ್ರಿಗೇಡ್ನ ವಿಜಯಪುರ ಜಿಲ್ಲೆ ಮತ್ತು ಮುದ್ದೇಬಿಹಾಳ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಸಮಾಜ ಸೇವಕ ಮಹಾಂತೇಶ ಬೂದಿಹಾಳಮಠ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರು ಇದುವರೆಗೂ ಬೇರೆ ರಾಜ್ಯದ ಭಾಷೆಗಳ ಮೇಲೆ ಗದಾ ಪ್ರಹಾರ ಮಾಡಿಲ್ಲ. ಆದರೆ ಬೇರೆ ರಾಜ್ಯದವರು ಕನ್ನಡದ ಬಗ್ಗೆ, ಕನ್ನಡದ ಧ್ವಜದ ಬಗ್ಗೆ ಅವಮಾನಕರ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಎಂಇಎಸ್ನವರು ಕನ್ನಡದ ಧ್ವಜವನ್ನು ಸುಟ್ಟು ನಮ್ಮ ಭಾಷೆಯನ್ನು ಅವಮಾನಿಸಿರುವುದಕ್ಕೆ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿದರು.
ಬ್ರಿಗೇಡ್ನ ಜಿಲ್ಲಾಧ್ಯಕ್ಷ ವಿಲಾಸ ಮೇಲ್ಮನಿ, ಕಿರುತೆರೆ ಹಾಸ್ಯ ಕಲಾವಿದ ಮುನೀರ್ ಅವಟಿಗೇರ, ವಿವಿಧ ಕನ್ನಡಪರ ಮತ್ತು ರೈತ ಪರ ಸಂಘಟನಗಳ ಮುಖಂಡರಾದ ರಮೇಶ ಕರಡ್ಡಿ, ಬಸವರಾಜ ಮೇಟಿ, ಮಹಾದೇವ ಬಿರಾದಾರ, ವಾಸಿಂ ದೇಸಾಯಿ, ಸೊಹೇಲ್ ಬೇಪಾರಿ, ಚನ್ನಬಸವರಾಜ ಅಂಗಡಿ, ಸಾಗರ ವಾಲೀಕಾರ, ರಶೀದ ನದಾಫ್, ಬಸು ಮದರಿ, ಗುರುಮಠ ಸೇರಿ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ