ರೈಲ್ವೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ


Team Udayavani, Oct 2, 2020, 7:05 PM IST

ರೈಲ್ವೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ವಿಜಯಪುರ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ರೈಲ್ವೆ ಖಾಸಗೀಕರಣಕ್ಕೆ ಮುಂದಾಗಿದ್ದು, ಕೂಡಲೇ ಇಂಥ ನಡೆಯಿಂದ ಹಿಂದೆ ಸರಿಯುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಆನ್‌ಲೈನ್‌ ಮೂಲಕ ಬೇಡಿಕೆ ಭಿತ್ತಿಪತ್ರ ಪ್ರದರ್ಶನ ನಡೆಸಲಾಯಿತು.

ಗುರುವಾರ ಆನ್‌ಲೈನ್‌ ಮೂಲಕ ರೈಲ್ವೆ ಖಾಸಗೀಕರಣ ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಪ್ರಮುಖರು, ಕೇಂದ್ರ ಬಿಜೆಪಿ ಸರ್ಕಾರ ಭಾರತೀಯ ರೈಲ್ವೆ ಸೇರಿದಂತೆ ಸಾರ್ವಜನಿಕಉದ್ದಿಮೆಗಳ ಖಾಸಗೀಕರಣ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಂತಹ ಜನ ವಿರೋ ಧಿ- ಕಾರ್ಪೊರೇಟ್‌ ಪರ ಕ್ರಮ ವಿರೋಧಿ ಸಿ, ವಲಸೆ ಕಾರ್ಮಿಕರು ಹಾಗೂ ಸ್ಕೀಂ ಕಾರ್ಯಕರ್ತೆಯರು ಸೇರಿದಂತೆ ವಿವಿಧ ವಲಯಗಳ ದುಡಿಯುವ ಜನರ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿಎಐಯುಟಿಯುಸಿ ಅ.1ರಿಂದ 7ರ ವರೆಗೆ ಅಖೀಲ ಭಾರತ ಪ್ರತಿಭಟನಾ ಸಪ್ತಾಹ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಿತ್ತಿಪತ್ರದ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರ ವಹಿಕೊಂಡ ನಂತರ ಕಾರ್ಮಿಕ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್‌ ಮಡಿಲಿಗೆ ಹಾಕಿ ಲಕ್ಷಾಂತರ ಉದ್ಯೋಗ ನಾಶ ಮಾಡಿದೆ. ದಿಢೀರ್‌ ಲಾಕ್‌ಡೌನ್‌ ಹೇರಿಕೆ ಪರಿಣಾಮ ಕಟ್ಟಡ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರ ಬುದುಕು ಚೇತರಿಕೆ ಕಂಡಿಲ್ಲ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಕಾರ್ಪೊರೇಟ್‌ ಮನೆತನಗಳ ಒತ್ತಡಕ್ಕೆ ಮಣಿದು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆ

ಖಾಸಗೀಕರಣಗೊಳಿಸಿ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ವಾಗ್ಧಾಳಿ ನಡೆಸಿದರು. ಭಾರತೀಯ ರೈಲ್ವೆ ಖಾಸಗೀಕರಣಗೊಳ್ಳಲು ಬಿಡಬಾರದು, 109 ರೂಟ್‌ಗಳಲ್ಲಿ 151 ಖಾಸಗಿ ರೈಲುಗಳನ್ನು ಓಡಿಸುವ ಯೋಜನೆ ಕೈ ಬಿಡಬೇಕು, ಯಾವುದೇ ಕಾರಣಕ್ಕೂ ರೈಲ್ವೆ ಜಮೀನು,

ಕಾಲೋನಿಗಳು, ಆಸ್ಪತ್ರೆಗಳು, ವರ್ಕ್‌ಶಾಪ್‌, ಇತರೆ ರೈಲ್ವೆ ಸಂಸ್ಥೆ ಮುಚ್ಚುವ, ಮಾರಾಟ ಮಾಡುವ ನಿರ್ಧಾರದಿಂದ ಹಿಂದೆ ಸರಿಯಬೇಕು. ರೈಲ್ವೆ ಉತ್ಪಾದಕ 7 ಘಟಕಗಳನ್ನು ಕಾರ್ಪೊರೇಟ್‌ ಮನೆತನಗಳಿಗೆ ಮಾರುವುದನ್ನು ತಡೆಗಟ್ಟಬೇಕು. ಉದ್ಯೋಗ ಕಡಿತದ ಬದಲು ಖಾಲಿಯಿರುವ ಹುದ್ದೆ ಭರ್ತಿ ಮಾಡಬೇಕು,55 ವರ್ಷ ವಯಸ್ಸು ಅಥವಾ 30 ವರ್ಷಗಳ ಸೇವೆ ಹೆಸರಲ್ಲಿ ಯಾವುದೇ ನೌಕರರನ್ನು ಸೇವೆಯಿಂದ ವಿಮುಕ್ತಿಗೊಳಿಸುವ ನಡೆಯಿಂದ ಸರ್ಕಾರ ಹಿಂದೆ ಸರಿಯಬೇಕು. ನಿವೃತ್ತ ಎಲ್ಲ ನೌಕರರಿಗೂ ಹಳೆ ಪಿಂಚಣಿ ಸ್ಕೀಂ ಅನುಸಾರ ಪಿಂಚಣಿ ನೀಡಬೇಕು, ರೈಲ್ವೆ ಪ್ರಯಾಣ ದರ ಮತ್ತು ಸರಕು ಸಾಗಾಣಿಕೆ ದರ ಏರಿಸಬಾರದು, ವಿವೇಕದೇವರಾಯ್‌ ಸಮಿತಿ ಶಿಫಾರಸು ರದ್ದುಗೊಳಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ಎಚ್‌.ಟಿ. ಮಲ್ಲಿಕಾರ್ಜುನ, ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ, ಕಾರ್ಮಿಕರಾದ ಕಾಶಿಬಾಯಿ ಜನಗೊಂಡ, ಮಹಾದೇವಿ ಧರ್ಮಶೆಟ್ಟಿ, ಭಾರತಿ ದೇವಕತೆ, ಶಶಿಕಲಾ ಮ್ಯಾಗೇರಿ, ಲಕ್ಷ್ಮೀ ಲಕ್ಷಟ್ಟಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.