ಹತ್ಯಾಚಾರ ಖಂಡಿಸಿ ಪ್ರತಿಭಟನೆ
Team Udayavani, Oct 8, 2018, 12:48 PM IST
ವಿಜಯಪುರ: ಚಿಮ್ಮಲಗಿ ಗ್ರಾಮದ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲಿನ ಹತ್ಯಾಚಾರ ಕೃತ್ಯದ ಆರೋಪಿಗಳನ್ನು ಬಂಧಿ ಸುವಂತೆ ಆಗ್ರಹಿಸಿ ಬಂಜಾರ ಸಮಾಜದ ಮುಖಂಡರು ಹಾಗೂ ವಿವಿಧ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಪಂ ಮಾಜಿ ಅಧ್ಯಕ್ಷ ಅರ್ಜುನ ರಾಠೊಡ ಮಾತನಾಡಿ, ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ, ಕೊಲೆ ನಡೆದಿರುವುದು ಅತ್ಯಂತ ಅಮಾನವೀಯ ಸಂಗತಿ. ಏನೂ ಅರಿಯದ ಮುಗª ಬಾಲಕಿ ಮೇಲೆ ಕಾಮುಕರು ತಮ್ಮ ಅಟ್ಟಹಾಸ ಮೆರೆದು ರಾಕ್ಷಸರಂತೆ ವರ್ತಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.
ಈ ಹಿನ್ನೆಲೆ ಕೂಡಲೇ ಪೈಶಾಚಿಕ ಕೃತ್ಯವೆಸಗಿದ ನಿರ್ದಯಿ, ಹೃದಯಹೀನರನ್ನು ತಕ್ಷಣ ಬಂಧಿಸಬೇಕು. ಕೂಡಲೇ ಈ ವಿಷಯವನ್ನು ಸಮಗ್ರ ತನಿಖೆಗೊಳಪಡಿಸಬೇಕು. ಪಾಪಿಗಳಿಗೆ ಕಠಿಣ ಶಿಕ್ಷೆ ಕೊಡಿಬೇಕು. ಸಂತ್ರಸ್ತ ಬಾಲಕಿ ಕುಟುಂಬಕ್ಕೆ
25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬಂಜಾರಾ ಸಮಾಜದ ಮುಖಂಡರಾದ ರಾಜಪಾಲ ಚವ್ಹಾಣ, ಡಿ.ಎಲ್. ಚವ್ಹಾಣ, ಬಿ.ಬಿ. ನಾಯಕ, ಶಂಕರ ಚವ್ಹಾಣ, ವಾಮನ್ ಚವ್ಹಾಣ, ಸಂತೋಷ ನಾಯಕ, ಬಿ.ಎಲ್. ನಾಯಕ, ರಘುವೀರ ನಾಯಕ, ಸಂತು ರಾಠೊಡ, ಹೀರಾ ರಾಠೊಡ, ಸಂತೋಷ ರಾಠೊಡ, ಅಶೋಕ ರಾಠೊಡ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…