ಅಧಿಕಾರಿ ವಿರುದ್ಧ ದಿವ್ಯಾಂಗರ ಪ್ರತಿಭಟನೆ
Team Udayavani, May 11, 2022, 2:39 PM IST
ವಿಜಯಪುರ: ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ದಿವ್ಯಾಂಗರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಸೇರಿದಂತೆ ಅವ್ಯವಹಾರದಲ್ಲಿ ತೊಡಗಿದ್ದು, ದಿವ್ಯಾಂಗರ ಸೌಲಭ್ಯ ಪಡೆಯಲು ತೊಡಕಾರಿಗಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಿವ್ಯಾಂಗರು, ಕಳೆದ ಆರು ತಿಂಗಳ ಹಿಂದೆ ಸದರಿ ಅಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಪರಿಣಾಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದ್ದಾರೆ.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ಖೇಡ, ಸದರಿ ಅಧಿಕಾರಿ ನಡೆಸಿರುವ ಅವ್ಯವಹಾರದ ಕುರಿತು ತನಿಖೆ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳು ವಿಜಯಪುರ ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದಾರೆ.
3-4 ಭಾರಿ ವಿಚಾರಣೆ ನೋಟಿಸ್ ನೀಡಿ ಒಮ್ಮೆ ವಿಚಾರಣೆ ನಡೆಸಿದ್ದಾರೆ. ವಿಚಾರಣಾ ಸಮಯದಲ್ಲಿ ನಾವು ಸಲ್ಲಿಸಿದ ಆಕ್ಷೇಪಣೆಗಳಿಗೆ ಲಗತ್ತಿಸಿ ಸಲ್ಲಿಸಿದ ದಾಖಲೆಗಳ ದೂರಿನಲ್ಲಿ ಅಪಾದನೆ ದೃಢಪಟ್ಟಿಲ್ಲ ಎಂದಿದ್ದಾರೆ. ಕಾರಣ ಸದರಿ ಪ್ರಕರಣವನ್ನು ಮರುಪರಿಶೀಲಿಸಿ ಅಂಗವಿಕಲರ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಾಲಿಕಾರ ಮತನಾಡಿ, ಉಪ ವಿಭಾಗಾಧಿಕಾರಿಗಳು, ದಿವ್ಯಾಂಗರಿಗೆ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿರುವ ಇಲಾಖೆ ಅಕಾರಿ ವಿರುದ್ಧದ ಯಾವ ಆಪಾದನೆಗೆ ಯಾವ ದಾಖಲಾತಿಗಳನ್ನು ನೀಡಿಲ್ಲ. ನೇಮಕಾತಿ ಸಂದರ್ಭದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ. ಕಾನೂನು ಬಾಹಿರ ಕೆಸಲ ಮಾಡಿದ್ದರೂ ಸದರಿ ಅಧಿಕಾರಿಗಳ ರಕ್ಷಣೆ ಮಾಡುವ ಮೂಲಕ ದಿವ್ಯಾಂಗರ ಹಕ್ಕುಗಳನ್ನು ಕಸಿಯಾಲಗುತ್ತಿದೆ ಎಂದು ಹರಿಹಾಯ್ದರು.
ಸದರಿ ಅಧಿಕಾರಿಯ ಭ್ರಷ್ಟಾಚಾರಕ್ಕೆ ತನಿಖಾಧಿಕಾರಿಗಳು ತನಿಖೆ ನಡೆಸದೇ ಸಹಕಾರ ನೀಡುತ್ತಿದ್ದಾರೆ ಎಂಬ ಅನುಮಾನವಿದೆ. ಇದರಿಂದ ದಿವ್ಯಾಂಗರು ಕಂಗಾಲಾಗಿದ್ದು, ನಮ್ಮ ಬಾಳಿಗೆ ದಾರಿದೀಪವಾಗಬೇಕಾದ ಉನ್ನತ ಮಟ್ಟದ ಅಧಿಕಾರಿಗಳೆ ನಮ್ಮ ಭಾವನೆ ಅರ್ಥೈಸಿಕೊಳ್ಳುವಲ್ಲಿ ವಿಫಲವಾಗಿದ್ದು, ಯಾರಲ್ಲಿ ನ್ಯಾಯ ಕೇಳಬೇಕು ಎಂಬುದೇ ತಿಳಿಯದಾಗಿದೆ ಎಂದು ಅಸಹಾಯಕತೆ ತೋಡಿಕೊಂಡರು.
ಮಲ್ಲಿಕಾರ್ಜುನ ಉಮರಾಣಿ ಮಾತನಾಡಿ, ಜಿಲ್ಲೆಯಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೇಮಕಾತಿಯಲ್ಲಿ ದಿವ್ಯಾಂಗರ ನೇಮಕಕ್ಕೆ ಸರಕಾರದ ಆದೇಶವಿದ್ದರೂ ಅಂಗವಿಕಲರ ಕಲ್ಯಾಣ ಅಧಿಕಾರಿ ಗಳು ಸರ್ಕಾರದ ಆದೇಶ ಅನುಷ್ಠಾನಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ದೂರಿದರು.
ಸಂಘಟನೆಯ ಪ್ರಮುಖರಾದ ತಾಲೂಕಾಧ್ಯಕ್ಷ ಅಂಬಣ್ಣ ಗುನ್ನಾಪುರ, ಶಂಕ್ರಮ್ಮ ಕೋರಿ, ಇಂಡಿ ತಾಲೂಕಾ ಕಾರ್ಯದರ್ಶಿ ಶಿವಲಿಂಗಪ್ಪ, ಸಾವಿತ್ರಿ ಮೋರೆ, ರಮೀಜಾ ಮಕಾನಂದರ, ಸುನಿಲ ತೇಲಕರ, ಅನಿಲ ಪವಾರ, ನಿಮಿಷ ಆಚಾರ್ಯ, ನಾಗಪ್ಪ ಬೆಂಕಿ, ಅರುಣ ವಾಗದಂಡೆ, ನೂರಹ್ಮದ ಪಠಾಣ, ಅಶೋಕ ಚೋಳಕ್ಕೆ, ಎಸ್.ಜಿ.ಮೆಂಡೆಗಾರ, ಮುಸ್ತಾಕ ತಾಳಿಕೋಟಿ, ಸಂಗಮೇಶ ಉಕ್ಕಲಿ, ಉ‚ಷಾ ಮೈಲಕರ, ಸಾಗಾರ ಸಾವಳಗಿ, ಜಿ.ಆರ್ ರಾಠೊಡ ಮತ್ತು ವಿ.ಯಾ ರಾಠೊಡ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ