ಸೇವೆ ಕಾಯಂಗೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ


Team Udayavani, Jul 3, 2022, 5:37 PM IST

20-job

ವಿಜಯಪುರ: ತಮ್ಮ ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮುನ್ಸಿಪಲ್‌ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪೌರಕಾರ್ಮಿಕರು ಜಿಲ್ಲಾ ಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶನಿವಾರ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಪೌರ ಕಾರ್ಮಿಕರು, ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾ ಧಿಕಾರಿಗಳ ಕಚೇರಿ ಆವರಣಕ್ಕೆ ತೆರಳಿ ಧರಣಿ ನಡೆಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಲಕ್ಷ್ಮಣ ಹಂದ್ರಾಳ ಮಾತನಾಡಿ, ಪೌರಕಾರ್ಮಿಕರು ಅತ್ಯಂತ ಗುಣಮಟ್ಟದಿಂದ ಕಡಿಮೆ ಸಂಬಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬದುಕು ಸಹ ಇನ್ನೂ ಹಸನಾಗಿಲ್ಲ. ಸಫಾಯಿ ಕರ್ಮಾಚಾರಿ, ಸ್ವೀಪರ್‌ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14 ಸಾವಿರ ರೂ. ಅಲ್ಪ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸುವುದೇ ದುಸ್ತರವಾಗಿ ಪರಿಣಮಿಸಿದೆ ಎಂದರು.

ಉದ್ಯಾನವನ, ಸ್ಮಶಾನ, ಘನ ತ್ಯಾಜ್ಯ ಘಟಕ , ಯುಜಿಡಿ ನೀರು ಸಂಸ್ಕರಣಾ ಘಟಕದ ಕಾರ್ಮಿಕರನ್ನು ನೀರು ಸರಬರಾಜು ನೌಕರರನ್ನು ಒಂದೇ ಬಾರಿಗೆ ಕಾಯಂಗೊಳಸಬೇಕು. ನೇರ ಪಾವತಿಯಡಿ 60 ವರ್ಷಗಳವರೆಗೂ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗುತ್ತಾರೆ. ಸೇವೆಯಲ್ಲಿರುವಾಗ ಮರಣ ಹೊಂದಿದಾಗ ಸೇವೆಗೆ ತಕ್ಕ ಸೌಲಭ್ಯ ಸಿಗದೇ ಅವರನ್ನು ಅವಲಂಬಿತರು ಬೀದಿಗೆ ಬೀಳುತ್ತಿದ್ದಾರೆ. ಸೇವೆ ಸಲ್ಲಿಸಿ ನಿವೃತ್ತಿಯಾದರೆ ಸ್ವಚ್ಛತಾ, ಪೌರಕಾರ್ಮಿಕರು ಯಾವ ನಿವೃತ್ತಿ ಸೌಕರ್ಯಗಳಿಲ್ಲದೆ ಬರಿಗೈಯಲ್ಲಿ ಹೋಗುತ್ತಿದ್ದಾರೆ ಎಂದು ಸಮಸ್ಯೆ ನಿವೇದಿಸಿದರು.

ರೈತ ಮುಖಂಡ ಭೀಮಶಿ ಕಲಾದಗಿ ಮಾತನಾಡಿ, ಕಾರ್ಮಿಕರನ್ನು ಅಪಾರವಾಗಿ ಶೋಷಿಸುವ ಗುತ್ತಿಗೆ ಪದ್ಧತಿ ಸರ್ಕಾರವೇ ನಡೆಸುತ್ತಿರುವ ಗುಲಾಮಿ ಪದ್ಧತಿ. ಈ ಗುಲಾಮಿ ಪದ್ಧತಿ ರದ್ದುಪಡಿಸಿ ಎಲ್ಲ ಕಾರ್ಮಿಕರನ್ನು ಕಾಯಂ ಮಾಡಬೇಕು. ಪೌರಕಾರ್ಮಿಕರ ಮಕ್ಕಳು ಖಾಸಗಿ ಶಾಲೆ-ಕಾಲೇಜುಗಳಲ್ಲಿ ಶಿಕ್ಷಣಕ್ಕಾಗಿ ಹಣಕಾಸಿನ ನೆರವು ನೀಡಲು ಸೂಕ್ತ ಆದೇಶ ಹೊರಡಿಸುವಂತೆ ಆಗ್ರಹಿಸಿದರು.

ಶಂಕರ ಚಲವಾದಿ, ಸಂಜು ಕಂಬಾಗಿ, ಸೋಮು ರಣದೇವಿ, ಅಲ್ಪಾ ಅತ್ತಾರ, ಮೋಹಸಿನ್‌, ದಯಾನಂದ ಅಲ್ಲಿಬಾದಿ, ಭಾಸ್ಕರ್‌ ಬೋರಗಿ, ರವಿ ಲೋಣಾರಿ, ಸುರೇಶ ಡಂಬಳ, ರಫೀಕ್‌ ಲಷ್ಕರಿ, ಸುಂದರಾಬಾಯಿ ವಾಘಮೋರೆ, ಶಾಂತಾಬಾಯಿ ವಾಘಮೋರೆ, ಮೀನಾಕ್ಷಿ ಪರಪ್ಪಗೋಳ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.