ಜೀವಜಲಕ್ಕಾಗಿ ಪ್ರತಿಭಟನೆ

•ಖಾಲಿ ಕೊಡಗಳನ್ನಿಟ್ಟು ಹಂಜಗಿ ಗ್ರಾಮಸ್ಥರ ಆಕ್ರೋಶ •ಟ್ಯಾಂಕರ್‌ ನೀರು ಪೂರೈಸಲು ಆಗ್ರಹ

Team Udayavani, May 23, 2019, 1:20 PM IST

vp-tdy-1..

ಇಂಡಿ: ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಹಂಜಗಿ ಗ್ರಾಮಸ್ಥರು ಖಾಲಿ ಕೊಡಗಳೊಂದಿಗೆ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಇಂಡಿ: ತಾಲೂಕಿನ ಹಂಜಗಿ ಗ್ರಾಮದ ವಾರ್ಡ್‌ ನಂ. 5ರ ಅಂಬೇಡ್ಕರ್‌ ಕಾಲೋನಿ ಮತ್ತು ಪಂಚಶೀಲ ನಗರ ತಾಂಡಾದಲ್ಲಿ ನೀರು ಪೂರೈಸಬೇಕೆಂದು ಆಗ್ರಹಿಸಿ ಹಂಜಗಿ ಗ್ರಾಮಸ್ಥರು ಬುಧವಾರ ಪಟ್ಟಣದ ಮಿನಿ ವಿಧಾನಸೌಧ ಎದುರು ಖಾಲಿ ಕೊಡಗಳನ್ನಿಟ್ಟು ಪ್ರತಿಭಟಿಸಿದರು.

ಹಂಜಗಿ ಗ್ರಾಮಸ್ಥರು, ಮಹಿಳೆಯರು ಖಾಲಿ ಕೊಡ ಹಿಡಿದು ಪಟ್ಟಣದ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧಕ್ಕೆ ಜಾಥಾ ನಡೆಸಿ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯಕ್ಕೆ ಹಾಗೂ ತಾಪಂ ಇಒ ಡಾ| ವಿಜಯಕುಮಾರ ಅಜೂರ ಅವರಿಗೆ ನೀರು ಪೂರೈಸುವಂತೆ ಮನವಿ ಸಲ್ಲಿಸಿದರು.

ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗುತ್ತಿದ್ದು ಈ ಕೂಡಲೆ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು. ಭೀಕರ ಬಿರು ಬಿಸಿಲಿನಲ್ಲಿ ಗ್ರಾಮದ ಅಂಬೇಡ್ಕರ್‌ ಕಾಲೋನಿಯಲ್ಲಿ ಕಳೆದ ಮೇ 18 ತಾರೀಖೀನಿಂದ ಇಲ್ಲಿವರೆಗೂ ಟ್ಯಾಂಕರ್‌ ಮೂಲಕ ನೀರು ಪೂರೈಸುವುದನ್ನು ನಿಲ್ಲಿಸಿದ್ದಾರೆ. ಟ್ಯಾಂಕರ್‌ ಮಾಲೀಕರಿಗೆ ನೀರು ಒದಗಿಸಿ ಎಂದು ಕೇಳಿದಾಗ ಟ್ಯಾಂಕರ್‌ ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ.

ತಾಲೂಕಾಡಳಿತ ಟ್ಯಾಂಕರ ಮಾಲೀಕರಿಗೆ ಯಾವುದೇ ಹಣ ನಿಂತಿಲ್ಲ ಎಂದು ಹೇಳುತ್ತಾರೆ. ಉಳ್ಳವರು ಹಣ ಕೊಟ್ಟು ನೀರು ಹಾಕಿಸಿಕೊಳ್ಳುತ್ತಾರೆ. ಬಡ ಜನತೆ ಹೇಗೆ ಎಂಬುದು ಚಿಂತೆಗೀಡು ಮಾಡಿದೆ. ಕೂಡಲೆ ತಾಲೂಕಾ ಆಡಳಿತ ಎಚ್ಚೆತ್ತು ನೀರು ಪೂರೈಸಬೇಕು ಒಂದು ವೇಳೆ ವಿಳಂಬ ಮಾಡಿದರೆ ಉಗ್ರ ಹೋರಾಟ ಮಾಡಲಾಗುವದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಈ ವೇಳೆ ತಾಪಂ ಅಧಿಕಾರಿ ಡಾ| ವಿಜಯಕುಮಾರ ಅಜೂರ ಹಾಗೂ ಗ್ರಾಮದ ಮುಖಂಡ ಮುತ್ತಪ್ಪ ಪೋತೆ, ತಹಶೀಲ್ದಾರ್‌ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಇನ್ನೊಮ್ಮೆ ಹೀಗಾಗದಂತೆ ನೋಡಿಕೊಳ್ಳಲಾಗುವದು. ತ್ವರಿತವಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆಯಲಾಯಿತು.

ಬಿ.ಡಿ. ಪಾಟೀಲ, ಪ್ರಕಾಶ ಪೋತೆ, ರೇವಪ್ಪ ಕಾಂಬಳೆ, ರಜಾಕ್‌ ಕಮಾಲಕರ, ಅಜೀತ ಕಾಂಬಳೆ, ಪ್ರಲಾದ ಕಟ್ಟಿಮನಿ, ಮಲ್ಲು ಕಾಂಬಳೆ, ಬಾಳು ಹರಿಜನ, ಬಸು ಸಿಂಧೆ, ವಿಠಾಬಾಯಿ ತಾಂದಳವಾಡಿ, ನಾಗವ್ವ ಬಂಡಾರಿ, ಬಂಗಾರೆವ್ವ ಕಾಂಬಳೆ, ಮಹಾದೇವ ಕಾಂಬಳೆ, ಜಯಮಲಾ ಬಗಲಿ, ಮಲ್ಲವ್ವ ಕಾಂಬಳೆ, ಮಲ್ಲಿಕಾರ್ಜುನ ಕಾಂಬಳೆ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.