ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ-ಧರಣಿ


Team Udayavani, Mar 4, 2022, 5:53 PM IST

22protest

ವಿಜಯಪುರ: ತಮ್ಮನ್ನು ಸರ್ಕಾರಿ ನೌಕರರೆಂದು ಪ್ರಸಕ್ತ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸುವ ಜೊತೆಗೆ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿ, ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತರ ಸಂಘಟನೆ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗನವಾಡಿ ನೌಕರರು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸಿದರು.

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ತಮ್ಮ ಗೌರವಧನ ಹೆಚ್ಚಿಸಬೇಕು. ಈ ಬೇಡಿಕೆ ಪ್ರಸಕ್ತ ಬಜೆಟ್‌ನಲ್ಲೇ ಘೋಷಿಸಬೇಕು ಎಂದು ಮನವಿ ಸಲ್ಲಿಸಿದರು.

ಎಐಯುಟಿಯುಸಿ ನಾಯಕಿ ಎಂ. ಉಮಾದೇವಿ ಮಾತನಾಡಿ, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅತ್ಯಂತ ಕಡಿಮೆ ಗೌರವಧನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಲೆ ಏರಿಕೆ ಪ್ರಸಕ್ತ ಸಂದರ್ಭದಲ್ಲಿ ಕಡಿಮೆ ಗೌರವಧನದಲ್ಲಿ ಕುಟುಂಬ ನಿರ್ವಹಣೆ ಅಸಾಧ್ಯ. ಹೀಗಾಗಿ ರಾಜ್ಯ ಸರ್ಕಾರದ ಸಿ-ಡಿ ದರ್ಜೆ ನೌಕರರಿಗೆ ಸರಿಸಮನಾಗಿ ಗೌರವಧನ ಅಥವಾ ವೇತನ ನೀಡಬೇಕು. ಈ ಬೇಡಿಕೆ ಮಾ.4ರಂದು ರಾಜ್ಯ ಸರ್ಕಾರ ಮಂಡಿಸುವ ಬಜೆಟ್‌ನಲ್ಲಿ ಘೋಷಣೆ ಆಗಬೇಕು ಎಂದು ಬೇಡಿಕೆ ಮಂಡಿಸಿದರು.

ಅಂಗನವಾಡಿ ನೌಕರರು ಗಂಭೀರ ಕಾಯಿಲೆಗಳ ಚಿಕಿತ್ಸೆಗಳಿಗೆ ಇರುವ ಕ್ಷೇಮಾಭಿವೃದ್ಧಿ ನಿಧಿಯಲ್ಲಿ ಸಲ್ಲಿಸಲಾದ ಪ್ರಕರಣಗಳಿಗೆ ಸಹಾಯಧನ ಸರಿಯಾಗಿ ನೀಡಬೇಕು. ಸಲ್ಲಿಕೆಯಾಗಿರುವ ಎಲ್ಲ ಅರ್ಜಿ ಕೂಡಲೇ ವಿಲೇವಾರಿ ಮಾಡಿ ಸಹಾಯಧನ ನೀಡಬೇಕು. ಈಗಿರುವ ಮರು ಪಾವತಿ ಸಹಾಯಧನ 20 ಸಾವಿರದಿಂದ ಕನಿಷ್ಟ 50 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಮುಖಂಡರಾದ ಲಕ್ಷ್ಮೀ ಲಕ್ಷಾನಟ್ಟಿ, ಜಿಲ್ಲಾ ಕಾರ್ಯದರ್ಶಿ ನಿಂಗಮ್ಮ ಮಠ ಮಾತನಾಡಿ, ಮಾಸಿಕ ಸಭೆಯೂ ಸೇರಿದಂತೆ ಮಾತೃ ಇಲಾಖೆ, ಜಿಲ್ಲಾಧಿಕಾರಿ, ಜಿಪಂ-ತಾಪಂ, ತಹಶೀಲ್ದಾರ್‌ ಕಚೇರಿಗಳ ಅಧಿಕಾರಿಗಳ ಸಭೆ, ಇಲಾಖೆ ಕಚೇರಿ ಕೆಲಸಕ್ಕೆ ಬರುವ ಕಾರ್ಯಕರ್ತೆ-ಸಹಾಯಕಿಯರಿಗೆ ಕಡ್ಡಾಯವಾಗಿ ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ನೀಡುವಂತೆ ಬೇಡಿಕೆ ಸಲ್ಲಿಸಿದರು.

ಪ್ರಯಾಣ ಹಾಗೂ ದಿನಭತ್ಯೆ ಕನಿಷ್ಟ 500 ರೂ.ಗೆ ಹೆಚ್ಚಿಸಬೇಕು. ಮೂಲ ಮತ್ತು ಪರಿಷ್ಕೃತ ಐಸಿಡಿಎಸ್‌ ಯೋಜನೆಯಂತೆ ಅಂಗನವಾಡಿ ಕೇಂದ್ರಗಳ ಪರಿಕಲ್ಪನೆ ಮತ್ತು ಅಲ್ಲಿ ಕೆಲಸ ಮಾಡುವ ನೌಕರರ ಸೇವಾ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಯೋಜನೆ ತರುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿದರು.

ಈ ವೇಳೆ ಗುರುಬಾಯಿ ಮಲ್ಲನಗೌಡರ, ಮಹಾದೇವಿ ನಾಗೂಡ, ಶಾಂತಾ ಕಟ್ಟಾರೆ, ಬಸಮ್ಮ ಹಿರೇಮಠ, ಕಲಾವತಿ ಪಾದಗಟ್ಟಿ, ಯಲ್ಲಮ್ಮ ಜಟ್ಟಂಗಿ, ಸಾವಿತ್ರಿ ನಾಗರತ್ತಿ, ರೆಣುಕಾ ಹಡಪದ, ಉಷಾ ಕುಲಕರ್ಣಿ, ರೇಖಾ ಪತ್ತಾರ, ಭಾರತಿ ಅಂಗನಗೌಡ, ರೇಣುಕಾ ಕರ್ಜಗಿ, ಕಾಶಿಬಾಯಿ ಕುಂಬಾರ, ತಾಯಕ್ಕ ಬೂದಿಹಾಳ, ಸವಿತಾ ತೇರದಾಳ, ಗಂಗುಬಾಯಿ ಪೂಜಾರಿ, ವಿಮಲಾ ಬುಷೆಟ್ಟಿ, ಶೋಭಾ ಪತ್ತಾರ, ಗುರುದೇವಿ ಮೂಡಲಗಿ ಸೇರಿದಂತೆ ಇತರರಿದ್ದರು.

ಹಣದುಬ್ಬರ ಮತ್ತು ಬೆಲೆ ಏರಿಕೆ ಗಮನದಲ್ಲಿ ಇರಿಸಿಕೊಂಡು ಅಂಗನವಾಡಿ ಕೇಂದ್ರಗಳ ಪ್ರಭಾರ ಭತ್ಯೆ ಹಣ, ಬಾಡಿಗೆ ದರ, ಮೊಟ್ಟೆ ದರ, ಸಾದಿಲ್ವಾರು ಹಣ, ಫ್ಲೆಕ್ಸಿ ಫಂಡ್‌ ಅನುದಾನ ಇತ್ಯಾದಿ ದರ ಹೆಚ್ಚಿಸಿ. ಕಾರ್ಯಕರ್ತೆಯರಿಗೆ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 21 ಸಾವಿರ ರೂ. ಮಾಸಿಕ ವೇತನ/ಗೌರವ ಧನ ನೀಡಬೇಕು. -ಎಂ. ಉಮಾದೇವಿ, ಎಐಯುಟಿಯುಸಿ ನಾಯಕಿ

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.