ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ
Team Udayavani, Feb 8, 2022, 6:04 PM IST
ಚಡಚಣ: ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹಾವಿನಾಳ ಇಂಡಿಯನ್ ಸಕ್ಕರೆ ಕಾರ್ಖಾನೆ ಕಾರ್ಮಿಕರು ಕಾರ್ಖಾನೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಕಾರ್ಮಿಕರಿಗೆ ಎರಡು ವರ್ಷದಿಂದ ಪಿಎಫ್, ಬೋನಸ್, ಸಕ್ಕರೆ ನೀಡಿಲ್ಲ. 2014ರಿಂದ ಇಲ್ಲಿವರೆಗೆ ಹೆಚ್ಚುವರಿ ಮಾಡಿಸಿಕೊಂಡ ಕೆಲಸದ ವೇತನ ನೀಡಿಲ್ಲ. ಕಾರ್ಖಾನೆ ಆಡಳಿತ ಮಂಡಳಿವರು ಪ್ರತಿ ಕಾರ್ಮಿಕರ ಮೇಲೆ 5 ಲಕ್ಷದಿಂದ 15 ಲಕ್ಷದವರೆಗೆ ಪಡೆದ ಸಾಲವನ್ನು ಮರುಪಾವತಿಸಿದ ಕಾರಣ ಬ್ಯಾಂಕಿನವರು ನಮಗೆ ಯಾವುದೇ ಸಾಲ ನೀಡುತ್ತಿಲ್ಲ. ಇದರಿಂದ ನಮಗೆ ತೊಂದರೆ ಅನುಭವಿಸುವಂತಾಗಿದೆ ಎಂದರು.
ಇದೆಲ್ಲವನ್ನು ಸಹಿಸಿಕೊಂಡು ಬಂದರೂ ಸುಮಾರು 5 ತಿಂಗಳಿನಿಂದ ವೇತನ ಕೂಡಾ ಪಾವತಿಸಿಲ್ಲ. ಕಾರ್ಖಾನೆಯ ಎಂಡಿ, ಆಡಳಿತ ಮಂಡಳಿಯವರಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಕೂಡಲೇ ಆಡಳಿತ ಮಂಡಳಿವರು ನಮ್ಮೆಲ್ಲ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಹಿಂಪಡೆಯಲ್ಲ ಎಂದು ಎಚ್ಚರಿಸಿದರು.
ಕಾರ್ಖಾನೆಯ ಎಂಜನಿಯರ್ ರಾಹುಲ್ ಇರಸೂರ ಪ್ರತಿಭಟನಕಾರರ ಮನವೊಲಿಸಿದರೂ ಪ್ರಯೋಜನವಾಗಲಿಲ್ಲ. ಕಾರ್ಖಾನೆ ಎಂಡಿ ಸಂದೀಪ ಪಾಟೀಲ ಆಗಮಿಸಿ ಮೂರು ತಿಂಗಳ ವೇತನ ಪಾವತಿಸುವುದಾಗಿ ಹೇಳಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರೂ ಸಹ ಕಾರ್ಮಿಕರು ಮಾತ್ರ ನಮ್ಮ ಪೂರ್ಣ ಪ್ರಮಾಣದ ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆ ಹಿಂಪಡೆಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ