ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ರ್ಯಾಲಿ
Team Udayavani, Sep 28, 2018, 11:53 AM IST
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಆದೇಶ ಹಿಂಪಡೆದು ವಿದ್ಯಾರ್ಥಿಗಳ ಹಿತರಕ್ಷಣೆಗೆ ಪೂರಕವಾದ ಯೋಜನೆಗಳನ್ನು ಪ್ರಕಟಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗುರುವಾರ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ನಗರದ ಡಾ| ಬಿ.ಆರ್. ಅಂಬೇಡ್ಕರ ವೃತ್ತದಿಂದ ಪ್ರಾರಂಭಗೊಂಡ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಸಂಚಾಲಕ ಸುರೇಶ ಮಣ್ಣೂರ ಮಾತನಾಡಿ, ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಸಿದಿದೆ.
ಈ ಸುತ್ತೋಲೆ ಅನ್ವಯ ಹಾಸ್ಟೆಲ್ ಪ್ರವೇಶ ಪಡೆಯಲು ಹಲವಾರು ನಿಬಂಧನೆಗಳನ್ನು ಹಾಕಲಾಗಿದೆ. ಇದು ವಿದ್ಯಾರ್ಥಿಗಳ ಹಿತರಕ್ಷಣೆಗೆ ಮಾರಕವಾಗಿದೆ. ಅದರಲ್ಲೂ ದಲಿತ ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಸುತ್ತೋಲೆಯನ್ನು ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.
ಇನ್ನೂ ಭೂ ಒಡೆತನದ ವಿಭಾಗದಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡಬೇಕು. ಎಲ್ಲಾ ಯೋಜನೆಗಳನ್ನು ಜಾರಿಗೊಳಿಸಲು ಏಕಗವಾಕ್ಷಿ ಯೋಜನೆ ಜಾರಿಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾಯಂಗೊಳಿಸಬೇಕು. ರಾಜ್ಯಾದ್ಯಂತ ಅಂಬೇಡ್ಕರ ಯೋಜನೆಯ ಮನೆಗಳಿಗೆ ಸಂಬಂಧಿ ಸಿದಂತೆ ಬಿಲ್ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ತಾಳಿಕೋಟೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ ಅವರ ಮೂರ್ತಿ ಸ್ಥಾಪನೆಗೆ ಶೀಘ್ರದಲ್ಲಿಯೇ ಮುಂದಾಗಬೇಕು ಎಂದು ಸಂಘಟನೆ ಪದಾಧಿ ಕಾರಿಗಳು ಹಕ್ಕೊತ್ತಾಯ ಮಂಡಿಸಿದರು.
ದೇವೇಂದ್ರ ಹಾದಿಮನಿ, ರಾವುತ ತಳಕೇರಿ, ಚಂದ್ರಕಾಂತ ಸಿಂಗೆ, ಸಂತೋಷ ತಳಕೇರಿ, ಗುರು ಗುಡಿಮನಿ, ರಮೇಶ
ಚಲವಾದಿ, ಹಣಮಂತ ನಾಲತವಾಡ, ಚಂದ್ರಶೇಖರ ನಡಗೇರಿ, ಭುತ್ತಣ್ಣ ಚಲವಾದಿ, ಮಹೇಶ ಚಲವಾದಿ, ನಾಗೇಶ
ಕಟ್ಟಿಮನಿ, ದುಂಡಪ್ಪ ವಾಗಮೊರೆ, ತುಳಸಪ್ಪ ಬಾಣಿಕೋಲ, ರವಿ ಅಲಹಳ್ಳಿ, ಮಲಕಪ್ಪ ಕಟ್ಟಿಮನಿ, ಪರಸರಾಮ ಕಾಂಬಳೆ,
ಪಿ.ಡಿ. ಭೂತನಾಳ, ರವಿ ಭೂತನಾಳ, ಪವಾಡೆಪ್ಪ ಹೊಲ್ದೂರ, ಈಶ್ವರ ಚಲವಾದಿ, ಇಂದೂರ ಬೈರವಾಡಗಿ, ನಂದಾ ಗುನ್ನಾಪೂರ, ಪರಶರಾಮ ಕೂಡಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು