ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
Team Udayavani, May 24, 2020, 12:10 PM IST
ಮುದ್ದೇಬಿಹಾಳ: ರಾಜ್ಯದಲ್ಲಿ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದ್ದು, ಸರ್ಕಾರ ಅಂಥವರ ನೆರವಿಗೆ ಧಾವಿಸಬೇಕು ಎಂದು ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಆಗ್ರಹಿಸಿದ್ದಾರೆ.
ನಾಗರಬೆಟ್ಟದಲ್ಲಿರುವ ಅಡವಿಸೋಮನಾಳ ಮತ್ತು 30 ಹಳ್ಳಿಗಳ ಬಹುಹಳ್ಳಿ ಯೋಜನಾ ಘಟಕದಲ್ಲಿ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್
ಲಾಕಡೌನ್ ನಂತರ ಕಠಿಣ ಪರಿಸ್ಥಿತಿಯಲ್ಲೂ ಬಹುಹಳ್ಳಿ ಯೋಜನೆ ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಪ್ರತಿ ಹಳ್ಳಿಗೂ ಶುದ್ಧ ನೀರು ತಲುಪಿಸುವ ಕೆಲಸ ಮಾಡಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಸೌಲಭ್ಯವನ್ನು ಎಲ್ಲ ಬಹುಹಳ್ಳಿ ಯೋಜನೆಯ ಕಾರ್ಮಿಕರಿಗೂ ವಿಸ್ತರಿಸಬೇಕು. ಕನಿಷ್ಠವೇತನ, ಮೂಲಭೂತ ಸೌಲಭ್ಯ, ಇಪಿಎಸ್, ಇಎಸ್ಐ ಕಾರ್ಡ್, ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಕಾರ್ಮಿಕರಾದ ಪರಸಪ್ಪ ವಳಕಲದಿನ್ನಿ, ಯಲ್ಲಪ್ಪ ಚಲವಾದಿ, ಪರಮಪ್ಪ ರಕ್ಕಸಗಿ, ಬಸವರಾಜ ವಳಕಲದಿನ್ನಿ, ಸಿದ್ದಪ್ಪ ವಾಲಿಕಾರ, ಹಣಮಂತ ಚಲವಾದಿ, ಮಹಾಂತೇಶ ಹಿರೇಮಠ, ನಾಗಪ್ಪ ಮುರಾಳ, ಅಮ್ಮಪ್ಪ ಚಲವಾದಿ, ಪರಸಪ್ಪ ಮುರಾಳ, ಪರಮಣ್ಣ ವಳಕಲದಿನ್ನಿ, ಭೀಮಪ್ಪ ವಳಕಲದಿನ್ನಿ, ಶರಣಪ್ಪ ವಳಕಲದಿನ್ನಿ, ಶರಣಪ್ಪ ಕೊಂಡಗೂಳಿ, ನಿಸ್ಸಾರುದ್ದೀನ ಪಾಶಾ, ರಾಜಶೇಖರ ದೊಡಮನಿ ಇದ್ದರು. ಈ ವೇಳೆ ಗುತ್ತಿಗೆಪದ್ಧತಿ ರದ್ದುಗೊಳಿಸುವ ಬರಹದ ಬೋರ್ಡ್ ಹಿಡಿದು ಸಾಂಕೇತಿಕ ಧರಣಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ
Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು