ಮುದ್ದೇಬಿಹಾಳ: SSLC ಪ್ರಶ್ನೆಪತ್ರಿಕೆ ಬಹಿರಂಗ: ಹಲವರ ತಲೆದಂಡ, ಕ್ರಿಮಿನಲ್ ಮೊಕದ್ದಮೆ ದಾಖಲು


Team Udayavani, Apr 7, 2022, 8:05 PM IST

ಮುದ್ದೇಬಿಹಾಳ: SSLC ಪ್ರಶ್ನೆಪತ್ರಿಕೆ ಬಹಿರಂಗ: ಹಲವರ ತಲೆದಂಡ, ಕ್ರಿಮಿನಲ್ ಮೊಕದ್ದಮೆ ದಾಖಲು

ಮುದ್ದೇಬಿಹಾಳ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿರುವ ಪ್ರಕರಣ ಹಿನ್ನೆಲೆ ಮುದ್ದೇಬಿಹಾಳ ತಾಲೂಕು ಢವಳಗಿಯ ಎಂಬಿಪಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದ ಹಲವರ ತಲೆದಂಡವಾಗಿದ್ದು ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆಯಾಗಲು ಸಹಕರಿಸಿರುವ ರೂಢಗಿ ಗ್ರಾಮದ ಸರ್ಕಾರಿ ಆರ್ ಎಂಎಸ್ಎ ಪ್ರೌಢಶಾಲೆಯ ವಿದ್ಯಾರ್ಥಿ ಬಸವರಾಜ ಕುಂದರಗಿಯನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದ್ದು,ಅವನ  ಪ್ರಶ್ನೆಪತ್ರಿಕೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡ ವ್ಯಕ್ತಿಯ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಶಿಕ್ಷಣ ಕಾಯ್ದೆ 1983 ಮತ್ತು 2017ರ ತಿದ್ದುಪಡಿ ಕಾಯ್ದೆ ಅನ್ವಯ ಬಿಇಓ ಎಚ್.ಜಿ.ಮಿರ್ಜಿ ಅವರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಕೊಠಡಿಯ ಮೇಲ್ವಿಚಾರಕರಾಗಿದ್ದ ಮಡಿಕೇಶ್ವರ ಗ್ರಾಮದ ಸತ್ ಸಂಸ್ಕಾರ ಖಾಸಗಿ ಅನುದಾನಿತ ಶಾಲೆಯ ಶಿಕ್ಷಕ ಬಿ.ಎಸ್.ಪೋಲೇಸಿ ಅವರನ್ನು ವಿಜಯಪುರ ಡಿಡಿಪಿಐ ಎನ್.ವಿ.ಹೊಸೂರ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆ ಕುರಿತ ಪತ್ರವನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಿಗೆ ನೀಡಿ ಅವರನ್ನು ಬಿಡುಗಡೆಗೊಳಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಬಲಮುರಿ ದೇವಾಲಯದ ಹುಂಡಿ ಮತ್ತೆ ಕಳ್ಳತನ : ಮೂರು ತಿಂಗಳ ಹಿಂದಷ್ಟೇ ಕಳ್ಳತನವಾಗಿತ್ತು…

ಸ್ಥಾನಿಕ ಜಾಗೃತ ದಳದ ಅಧಿಕಾರಿಯಾಗಿದ್ದ ಬಿದರಕುಂದಿ ಆರ್ ಎಂಎಸ್ಎ ಆದರ್ಶ ಶಾಲೆಯ ಶಿಕ್ಷಕಿ ಎಸ್.ಎಲ್.ಸೋಂಪೂರ ಅವರನ್ನು ಪರೀಕ್ಷಾ ಕರ್ತವ್ಯದಿಂದ ಬಿಡುಗಡೆಗೊಳಿಸಿ ನೋಟಿಸ್ ಜಾರಿ ಮಾಡಲಾಗಿದೆ.

ಮುಖ್ಯ ಅಧೀಕ್ಷಕ ಎಂಬಿಪಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಬಿ.ಎಸ್.ಪಾಟೀಲ ಮತ್ತು ಪ್ರಶ್ನೆಪತ್ರಿಕೆ ಅಭಿರಕ್ಷಕ ಜಮ್ಮಲದಿನ್ನಿ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ ಶಿಕ್ಷಕ ವೈ.ವಿ.ಕನ್ನೂರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಅವರ ಜಾಗದಲ್ಲಿ ಕ್ರಮವಾಗಿ ಜಮ್ಮಲದಿನ್ನಿ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ಬಿ.ಎಂ.ಬಸವಂತಪುರ ಮತ್ತು ಕೋಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಸ್.ಎನ್.ರಾಠೋಡ ಅವರನ್ನು ನೇಮಿಸಲಾಗಿದೆ. ಕರ್ತವ್ಯದಿಂದ ಬಿಡುಗಡೆಗೊಳಿಸಿದ ಇಬ್ಬರಿಗೂ ಕಾರಣ ಕೇಳುವ ನೋಟಿಸ್ ಜಾರಿಗೊಳಿಸಲಾಗಿದೆ.

ಸದರಿ ಪರೀಕ್ಷಾ ಕರ್ತವ್ಯಕ್ಕೆ ನೇಮಕಗೊಂಡಿದ್ದ ಎಲ್ಲ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬದಲಾಯಿಸಿ ಅವರ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಜಿಟಿ, ಟಿಜಿಟಿ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದೆ ಎಂದು ಬಿಇಓ ಎಚ್.ಜಿ.ಮಿರ್ಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬುಧವಾರ ನಡೆದಿದ್ದ ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಪರೀಕ್ಷೆಯ ವೇಳೆ ಪರೀಕ್ಷೆ ಪ್ರಾರಂಭಗೊಂಡ ಒಂದು ಗಂಟೆಯಲ್ಲೇ ಪ್ರಶ್ನೆಪತ್ರಿಕೆ ರಾಯಚೂರು ಜಿಲ್ಲೆ ಮುದಗಲ್ಲಿನಲ್ಲಿ ಬಹಿರಂಗಗೊಂಡು ಶಿಕ್ಷಣ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದುದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.