ರಸ್ತೆ ಬದಿಯ ಹೋಟೆಲ್‌ನಲ್ಲಿ ಟೀ ಕುಡಿದ ರಾಹುಲ್‌


Team Udayavani, Feb 25, 2018, 3:03 PM IST

vij-2.jpg

ವಿಜಯಪುರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಜಯಪುರ ಜಿಲ್ಲೆಯ ಪ್ರವಾಸದ ವೇಳೆ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಲ್ಲದೇ, ರಸ್ತೆ ಬದಿ ಹೋಟೆಲ್‌ಗೆ ಅನಿರೀಕ್ಷಿತ ಪ್ರವೇಶಿಸಿ ಟೀ ಸವಿದು ಅಚ್ಚರಿ ಮೂಡಿಸಿದರು.

ತಿಕೋಟಾ ಕಾರ್ಯಕ್ರಮದ ಬಳಿಕ ವಿಜಯಪುರ ನಗರದಲ್ಲಿ ರೋಡ್‌ ಶೋ ಕಾರ್ಯಕ್ರಮ ಇತ್ತು. ಈ ವೇಳೆ ರಾಹುಲ್‌ ಅನಿರೀಕ್ಷಿತವಾಗಿ ಪ್ರವಾಸಿ ಮಂದಿರದ ಎದುರಿಗೆ ಇರುವ ಸಲೀಂ ಎಂಬುವರ ರಸ್ತೆ ಬದಿ ತಟ್ಟಿ ಹೋಟೆಲ್‌ಗೆ ಪ್ರವೇಶಿಸಿ ಟೀ ರುಚಿ ನೋಡಿ, ಬಿಸ್ಕತ್‌ ಸ್ವಾದ ನೋಡಿದರು.

ಟೀ ಸೇವನೆ ಬಳಿಕ ಎರಡು ಸಾವಿರ ರೂ. ನೀಡಲು ರಾಹುಲ್‌ ಮುಂದಾದರೂ “ನಿಮ್ಮಂಥ ನಾಯಕ ನನ್ನ ಹೋಟೆಲ್‌ ಪ್ರವೇಶಿಸಿ ಟೀ ಸೇವನೆ ಮಾಡಿದ್ದೇ ನನ್ನ ಅದೃಷ್ಟ ‘ ಎಂದ ಹೋಟೆಲ್‌ ಮಾಲೀಕ ಸಲೀಂ ಹಣ ಪಡೆಯಲು ನಿರಾಕರಿಸಿದರು. ಈ ಹಂತದಲ್ಲಿ ಜತೆಗಿದ್ದ ಜಲಸಂಪನ್ಮೂಲ ಸಚಿವ ಡಾ|ಎಂ.ಬಿ.ಪಾಟೀಲ ಅವರು ಸರ್‌ ನೀವು ಹಣ ಕೊಡುವುದು ಬೇಡ ನಾನು ಕೊಡುತ್ತೇನೆ ಎಂದು ಅವರು ಕೂಡ ಎರಡು ಸಾವಿರ ರೂ. ನೋಟು ನೀಡಿದರು. ರಾಹುಲ್‌ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ|
ಜಿ.ಪರಮೇಶ್ವರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಇತರರು ಸಾಥ್‌ ನೀಡಿದರು.

ಮತ್ತೂಂದೆಡೆ ರಾಹುಲ್‌ ಗಾಂಧಿ ಅವರು ವಿಜಯಪುರ ರೋಡ್‌ ಶೋ ಬಳಿಕ ನಗರದ ಗಾಂಧೀಜಿ ವೃತ್ತದಲ್ಲಿ ಸಣ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇದಿಕೆ ಏರುವ ಮುನ್ನ ರಾಹುಲ್‌ ಅವರು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹೂಮಾಲೆ ಹಾಕಿ ನಮನ ಸಲ್ಲಿಸಿದರು.

ತಿಕೋಟಾ ಸಮಾವೇಶದ ಬಳಿಕ ತೊರವಿ ಗ್ರಾಮಕ್ಕೆ ಆಗಮಿಸುತ್ತಲೇ ರಸ್ತೆಯ ಇಕ್ಕೆಲದಲ್ಲಿ ನಿಂತಿದ್ದ ಜನರು ರಾಹುಲ್‌ ಅವರನ್ನು ಸ್ವಾಗತಿಸಿದರು. ಬಳಿಕ ಅಲ್‌ ಅಮೀನ್‌ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಸ್ತೆಗಳಲ್ಲಿ ನಿಂತು ರಾಹುಲ್‌ ಅವರತ್ತ ಕೈ ಬೀಸಿದಾಗ, ಕೆಲವು ವಿದ್ಯಾರ್ಥಿಗಳು ರಾಹುಲ್‌ ಅವರ ಕೈ ಕುಲುಕಿ ಪುಳಕಗೊಂಡರು. ಪಕ್ಕದಲ್ಲೇ ಹಮ್ಮಿಕೊಂಡಿದ್ದ ಸಣ್ಣ ಕಾರ್ಯಕ್ರಮದಲ್ಲಿ ಸೇರಿದ್ದ ಬಂಜಾರಾ ಸಮುದಾಯದ ಜನರು ಹೂಗುಚ್ಚ ನೀಡಿ ಸಂಭ್ರಮಿಸಿದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.