ಮಳೆಗೆ ಅಪಾರ ಹಾನಿ:ತೊಗರಿ, ಹತ್ತಿ ಪರಿಶೀಲಿಸಿದ ಶಾಸಕ
Team Udayavani, Nov 22, 2021, 2:12 PM IST
ಮುದ್ದೇಬಿಹಾಳ: ಅನಿರೀಕ್ಷಿತ ಭಾರಿ ಮಳೆ, ಹವಾಮಾನ ವೈಪರೀತ್ಯದಿಂದಾಗಿ ತಣ್ಣನೆಯ ಮಂಜು ಕವಿದ ವಾತಾವರಣ ಪರಿಣಾಮ ಹಾನಿಗೀಡಾದ ತೊಗರಿ ಮತ್ತು ಹತ್ತಿ ಹೊಲಗಳಿಗೆ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅದ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಕೃಷಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಸ್ತುಸ್ಥಿತಿಯ ಮಾಹಿತಿ ಪಡೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾಲೂಕಿನಲ್ಲಿ ಅಂದಾಜು 80 ಸಾವಿರ ಹೆಕ್ಟೆರ್ ತೊಗರಿ ಬೆಳೆ ಹಾನಿಗೀಡಾಗಿರುವ ಮಾಹಿತಿ ಇದೆ. ಇದರೊಟ್ಟಿಗೆ ಹತ್ತಿ ಸೇರಿದಂತೆ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮುಂತಾದವು ಹಾನಿಗೀಡಾಗಿವೆ.
ಈ ಹಾನಿಯ ಪರಿಶೀಲನೆ ಮತ್ತು ನೈಜ ವರದಿಗಾಗಿ ಕೃಷಿ ವಿಶ್ವವಿದ್ಯಾಲಯದ ತಜ್ಞ ವಿಜ್ಞಾನಿಗಳನ್ನು ಇಲ್ಲಿಗೆ ಕರೆಸುತ್ತಿದ್ದೇನೆ. ಕಂದಾಯ, ಕೃಷಿ, ತೋಟಗಾರಿಕೆ, ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳು, ಪಿಡಿಓಗಳ ಸಭೆ ನಡೆಸಿ ರೈತರ ಹಾನಿಗೆ ಸೂಕ್ತ ಪರಿಹಾರ ಕೊಡಿಸಲು ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗುವಂತೆ ನೋಡಿಕೊಳ್ಳುತ್ತೇನೆ. ರೈತನ ಮಗನಾಗಿರುವ ನನಗೆ ರೈತರ ಕಷ್ಟ ಗೊತ್ತು. ಅವರಿಗೆ ಸೂಕ್ತ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಹಾಯಕ ಕೃಷಿ ನಿರ್ದೇಶಕ ರೇವಣೆಪ್ಪ ಮನಗೂಳಿ, ಕೃಷಿ ಅಧಿಕಾರಿ ಪ್ರಭುಗೌಡ ಕಿರದಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಬಿಜೆಪಿ ದುರೀಣರಾದ ಬಸವರಾಜ ಗುಳಬಾಳ, ರಾಜೇಂದ್ರಗೌಡ ರಾಯಗೊಂಡ, ಅಪ್ಪುಗೌಡ ಮೈಲೇಶ್ವರ, ಶಿವು ಕನ್ನೊಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ