Ram Mandir; ಅಯೋಧ್ಯೆಯಲ್ಲಿ ಸ್ವರ್ಗ ಸೃಷ್ಟಿಯಾಗಿತ್ತು: ಗೋಪಾಲ ಮಹಾರಾಜ
Team Udayavani, Jan 22, 2024, 8:00 PM IST
ವಿಜಯಪುರ ; ಅಯೋಧ್ಯೆಯ ರಾಮ ಮಂದಿರ ಲೋರ್ಕಾಣೆಯ ಐತಿಹಾಸಿಕ ಸ್ಮರಣೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ನನ್ನ ಸುಕೃತ. ಅಯೋಧ್ಯೆಯಲ್ಲಿನ ಪ್ರಸ್ತುತ ಸ್ಥಿತಿ ಅವಲೋಕಿಸಿದರೆ ಸ್ವರ್ಗವೇ ಸೃಷ್ಟಿಯಾಗಿದೆ.ಸತ್ತು ಸ್ವರ್ಗ ನೋಡಬೇಕು, ಇದ್ದು ಅಯೋಧ್ಯೆ ನೋಡಬೇಕು.
ಇದು ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆ, ಬಾಲರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನಿತರಾಗಿ ತೆರಳಿರುವ ವಿಜಯಪುರದ ತೊರವಿ ತಾಂಡಾ ಗೋಪಾಲ ಮಹಾರಾಜರ ಅನುಭವದ ಪ್ರತಿಕ್ರಿಯೆ.
ರಾಮ ಮಂದಿರ ಟ್ರಸ್ಟ್ ನ ಅಧಿಕೃತ ಆಹ್ವಾನದ ಮೇರೆಗೆ ಅಯೋಧ್ಯೆಗೆ ಆಗಮಿಸಿದ್ದ ನಮಗೆ ಇಲ್ಲಿ ಅತ್ಯಂತ ಗೌರಯುತ ಆದರಾತಿಥ್ಯ ಸಿಕ್ಕಿದೆ. ಐದು ವರ್ಷದ ಹಿಂದೆ ಬಂದಿದ್ದಾಗ ಇಲ್ಲಿ ಏನೂ ಇರಲಿಲ್ಲ. ಇದೀಗ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಸ್ವರ್ಗವೇ ಮರು ಸೃಷ್ಟಿಯಾಗಿದೆ. ಉತ್ತರ ಪ್ರದೇಶ ಸರ್ಕಾರ ಇಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ಎಲ್ಲ ಸಂತರು, ಶರಣರು, ಮಠಾಧೀಶರಿಗೆ ವಸತಿ, ಪೂಜಾ ಕೈಂಕರ್ಯಗಳಿಗೆ ವ್ಯವಸ್ಥೆ, ಪೊಲೀಸ್ ಭದ್ರತೆ, ಆತಿಥ್ಯ ಹೀಗೆ ಎಲ್ಲವನ್ನೂ ಅತ್ಯಂತ ಅಚ್ಚಕಟ್ಟಾಗಿ ನೆರವೇರಿಸಿದ್ದಾರೆ.
ಹಿಂದೂ ಸನಾತನ ಹಿಂದೂ ಧರ್ಮದ ಸಂರಕ್ಷಣೆಗೆ ಆಯೋಧ್ಯೆಯ ರಾಮ ಮಂದಿರ ಪ್ರೇರಕ ಶಕ್ತಿಯಾಗಿ ಭಾರತೀಯರಲ್ಲಿ ಧಾರ್ಮಿಕ ಭಾವನೆಗಳನ್ನು ಜಾಗೃತಿ ಮೂಡಿಸುವಲ್ಲಿ ಅತ್ಯಂತ ಯಶಸ್ವಿಯಾಗಿದೆ. ನಾಸ್ತಿಕರಲ್ಲೂ ಕೂಡ ಆಸ್ತಿಕ ಭಾವ ಸೃಷ್ಟಿಸುವಲ್ಲಿ ಅಯೋಧ್ಯೆ ಆಕರ್ಷಕ ಶಕ್ತಿ ಹೊಂದಿದೆ ಎಂದು ಬಣ್ಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ