ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ; ತನಿಖೆಗೆ ಆಗ್ರಹ


Team Udayavani, Dec 2, 2020, 4:06 PM IST

ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ; ತನಿಖೆಗೆ ಆಗ್ರಹ

ಮುದ್ದೇಬಿಹಾಳ: ಕೋವಿಡ್ ಸಂದರ್ಭ ಕೇಂದ್ರ, ರಾಜ್ಯ ಸರ್ಕಾರ ಬಿಪಿಎಲ್‌, ಅಂತ್ಯೋದಯ ಕಾರ್ಡ್‌ಗಳಿಗೆ ನೀಡಿರುವ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎನ್ನುವ ಆರೋಪಕ್ಕೆ ಮಂಗಳವಾರ ಇಲ್ಲಿನ ಎಪಿಎಂಸಿಯಲ್ಲಿ ಸಾಕ್ಷಿ ಸಮೇತ ಪುಷ್ಠಿ ದೊರಕಿದ್ದು ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಾರ್ವಜನಿಕರು ತಾಲೂಕಾಡಳಿತವನ್ನು ಆಗ್ರಹಿಸಿದ್ದಾರೆ.

ಕೋವಿಡ್ ಮಹಾಮಾರಿ ಕಾಣಿಸಿಕೊಂಡ ನಂತರ ಏಪ್ರಿಲ್‌ ತಿಂಗಳಿನಿಂದ ಕೇಂದ್ರ, ರಾಜ್ಯ ಸರ್ಕಾರಗಳು ಬಡವರಿಗೆ ಅನುಕೂಲವಾಗಲಿ ಎಂದು ಪಡಿತರ ವಿತರಣಾ ವ್ಯವಸ್ಥೆಯಡಿ ಆಯಾ ನ್ಯಾಯಬೆಲೆ ಅಂಗಡಿಗಳ ಮುಖಾಂತರ ಅಕ್ಕಿ, ಗೋಧಿ , ಕಡಲೆಯನ್ನು ಉಚಿತವಾಗಿ ನೀಡತೊಡಗಿವೆ. ಆದರೆ ಉಚಿತವಾಗಿ ದೊರಕುವ ಅಕ್ಕಿಯನ್ನು ಪಡಿತರ ಫಲಾನುಭವಿಗಳು ಸ್ವಂತಕ್ಕೆ ಬಳಸಿಕೊಳ್ಳದೆ ಅವುಗಳನ್ನು ಕಾಳಸಂತೆಯಲ್ಲಿ ಕೆಜಿಗೆ 12 ರೂ.ನಂತೆ ಮಾರಾಟ ಮಾಡುತ್ತಿರುವಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು. ಆದರೆ ಕೋವಿಡ್ ಹಿನ್ನೆಲೆ ಇದನ್ನು ಯಾವುದೆ ಅಧಿಕಾರಿ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಮಂಗಳವಾರ ಎಪಿಎಂಸಿಯ ಪ್ರವೇಶದ್ವಾರದ ಹತ್ತಿರ ಇರುವ ಡಬ್ಟಾ ಅಂಗಡಿಯೊಂದರ ಮುಂದೆ ಬಹಳಷ್ಟು ಜನರು ಅಕ್ಕಿ ತುಂಬಿದ ಪ್ಯಾಕೇಟ್‌ಗಳನ್ನು ಹಿಡಿದು ನಿಂತಿದ್ದರು. ಇವರು ಹೀಗೇಕೆ ನಿಂತಿದ್ದಾರೆ ಎಂದು ಹತ್ತಿರ ಹೋಗಿನೋಡಿದಾಗ ಗೋಲ್‌ಮಾಲ್‌ ವ್ಯವಹಾರ ಬೆಳಕಿಗೆ ಬಂದಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಪಡೆದುಕೊಳ್ಳುವ ಕಾರ್ಡ್‌ದಾರರು ಅವುಗಳನ್ನು ಆಟೋದಲ್ಲಿಟ್ಟುಕೊಂಡು ಡಬ್ಟಾ ಅಂಗಡಿ ಹತ್ತಿರ ಬರುತ್ತಾರೆ. ಅಲ್ಲಿರುವ ಕಾಳಸಂತೆವ್ಯವಹಾರದ ಏಜೆಂಟ್‌ನೋರ್ವ ಆ ಅಕ್ಕಿಯನ್ನುಕೆಜಿಗೆ 12 ರೂ.ನಂತೆ ಖರೀದಿಸುತ್ತಾನೆ ಎಂದುಅಲ್ಲಿದ್ದ ಕೆಲವರು ಹೇಳಿದ್ದು ಕಾಳಸಂತೆ ವ್ಯವಹಾರ ಸಾಬೀತು ಪಡಿಸಿದಂತಾಯಿತು. ಕಾಳಸಂತೆಕೋರ ಏಜೆಂಟರು ಹೀಗೆ ಖರೀದಿಸಿದ ಅಕ್ಕಿಯನ್ನು ತಾಳಿಕೋಟೆಗೆ ಕಳಿಸುತ್ತಾರೆ. ಅಲ್ಲಿರುವ ಮುಖ್ಯ ಏಜಂಟ್‌ನೊಬ್ಬ ಅವುಗಳನ್ನು ಲಾರಿಯಲ್ಲಿ ಲೋಡ್‌ ಮಾಡಿ ಮಹಾರಾಷ್ಟ್ರ, ಆಂಧ್ರಪ್ರದೇಶಕ್ಕೆ ರವಾನಿಸುತ್ತಾನೆ. ಆ ರಾಜ್ಯಗಳ ಅಕ್ಕಿ ಮಿಲ್‌ಗ‌ಳಲ್ಲಿ ಇವು ಪಾಲಿಶ್‌ ಆಗಿ ಮರಳಿ ಗ್ರಾಹಕರಿಗೇ ಕೆಜಿಗೆ 50-60 ರೂ.ನಂತೆ ಮಾರಾಟವಾಗುತ್ತವೆ. ರೇಷನ್‌ ಅಕ್ಕಿ ಪಾಲೀಶ್‌ ಮಾಡಿ ಹೆಚ್ಚಿನ ದರಕ್ಕೆ ಮಾರುವ ಜಾಲ ಸಕ್ರಿಯವಾಗಿರುವುದು ಇದರಿಂದ ದೃಢಪಡುತ್ತದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಏಜೆಂಟ್‌ರೊಬ್ಬರು ಹೇಳಿದ್ದು ಹಗರಣ ಬಹಿರಂಗಪಡಿಸಿದಂತಾಗಿದೆ.

ಎಪಿಎಂಸಿಯಲ್ಲಿನ ಘಟನೆ ಗಮನಕ್ಕೆ ಬಂದ ಕೂಡಲೇ ತಹಶೀಲ್ದಾರ್‌ ಜಿ.ಎಸ್‌. ಮಳಗಿ ಅವರು ಆಹಾರ ವಿಭಾಗದ ಸಿಬ್ಬಂದಿಯನ್ನು ಸ್ಥಳಕ್ಕೆ ಕಳಿಸಿ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ. ಆದರೆ ಇವರು ಸ್ಥಳಕ್ಕೆ ಬರುವುದು ತಡವಾಗಿದ್ದರಿಂದ ಪಡಿತರ ಅಕ್ಕಿ ಮಾರಲುಬಂದಿದ್ದ ಫಲಾನುಭವಿಗಳು, ಖರೀದಿಸುತ್ತಿದ್ದಏಜೆಂಟ್‌ರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಬಿಸಿ ಮುಟ್ಟಿಸಿದ್ದರೂ ನಿಲ್ಲದ ವ್ಯವಹಾರ: ಕೆಲ  ತಿಂಗಳ ಹಿಂದೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಹೊರ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು, ಆಹಾರ ಇಲಾಖೆ ಅಧಿಕಾರಿಗಳು ಹಿಡಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ಸಿಕ್ಕಿಹಾಕಿಕೊಂಡವರು ಇನ್ನೂ ಕೋರ್ಟ್ ಗೆ ಅಲೆದಾಡುತ್ತಿದ್ದಾರೆ. ಹೀಗಿದ್ದರೂ ಅಕ್ರಮ ಸಾಗಾಟ ನಿಯಂತ್ರಣಕ್ಕೆ ಬಂದಿಲ್ಲ ಎನ್ನುವುದು ಇಂದಿನ ಘಟನೆಯಿಂದ ದೃಢಪಟ್ಟಂತಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮದಲ್ಲಿ ಭಾಗಿಯಾದವರನ್ನು ಮಟ್ಟ ಹಾಕಿದರೆ ಮಾತ್ರ ಗೋಲ್‌ಮಾಲ್‌ ತಡೆಗಟ್ಟಬಹುದು ಎಂದು ಕೆಲವು ಅಂತ್ಯೋದಯ ಫಲಾನುಭವಿಗಳು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.