ನ್ಯಾಯಬೆಲೆ ಅಂಗಡಿಕಾರರ ಪ್ರತಿಭಟನೆ


Team Udayavani, Oct 13, 2020, 5:27 PM IST

vp-tdy-2

ವಿಜಯಪುರ: ನ್ಯಾಯಬೆಲೆ ಅಂಗಡಿ ಲೈಸೆನ್ಸ್‌ ಹೊಂದಿದವರನ್ನು ಕೋವಿಡ್ ವಾರಿಯರ್ಸ್‌ ಎಂದು ಪರಿಗಣಿಸುವಂತೆ ಆಗ್ರಹಿಸಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಕಾರರ ಸಂಘ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷಜ್ಯೋತಿರಾಮ ಪವಾರ, ನ್ಯಾಯಬೆಲೆ ಅಂಗಡಿಕಾರರು ಕೂಡ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ನ್ಯಾಯಬೆಲೆ ಅಂಗಡಿಕಾರರಿಗೆ ಸರ್ಕಾರದಿಂದ ಕಳೆದ 4 ತಿಂಗಳಿಂದ ಕಮಿಷನ್‌ ಹಣ ಬಂದಿಲ್ಲ. ಕಮಿಷನ್‌ ನಂಬಿಯೇ ಜೀವನ ನಡೆಸುವ ನ್ಯಾಯಬೆಲೆ ಅಂಗಡಿಕಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅಂಗಡಿ ಬಾಡಿಗೆ ಭರಿಸುವುದ, ವಿದ್ಯುತ್‌ ಬಿಲ್‌ ಪಾವತಿ, ಸಹಾಯಕರ ವೇತನ ಪಾವತಿಯಂಥ ಸಮಸ್ಯೆ ನೀಗುವಲ್ಲಿ ಸಹಕಾರಿ ಆಗಲಿದೆ. 32 ಜನ ನ್ಯಾಯಬೆಲೆ ಅಂಗಡಿಕಾರರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಧನ ನೀಡಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಸರ್ಕಾರ ಪೌರ ಕಾರ್ಮಿಕರು, ಆರೋಗ್ಯ, ಪೊಲೀಸ್‌ ಇಲಾಖೆ ಸಿಬ್ಬಂದಿ ಸೇರಿದಂತೆ ಇತರರನ್ನು ಕೋವಿಡ್‌ ವಾರಿಯರ್ಸ್‌ ಎಂದು ಪರಿಗಣಿಸಿದಂತೆ ನ್ಯಾಯ ಬೆಲೆ ಅಂಗಡಿಗಳನ್ನು ನಡೆಸುವ ಮಾಲೀಕರನ್ನು ಕೋವಿಡ್‌ ವಾರಿಯರ್‌ ಎಂದು ಪರಿಗಣಿಸುವಂತೆ ಆಗ್ರಹಿಸಿದರು. ಕೆ.ಎನ್‌. ಮೂಲಿಮನಿ. ಬಿ.ಜಿ. ತಿಕೋಟಿ. ಸತೀಶ ಬಿಜ್ಜರಗಿ, ಐ.ಎಂ. ಆಸಂಗಿ, ಬಿ.ವಿ. ಸಾಖರೆ, ಮಹೇಶ, ಪಿ.ಎಸ್‌. ಪಾಟೀಲ, ಎಸ್‌.ಎಸ್‌. ಕೊಪ್ಪದ ಪಾಲ್ಗೊಂಡಿದ್ದರು.

 

ಜನತಾ ಕಾಲೋನಿಗೆ ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ :

ವಿಜಯಪುರ: ರಾಷ್ಟ್ರೀಯ ಹೆದ್ದಾರಿ 218ರ ಪಕ್ಕಕ್ಕೆ ಹೊಂದಿಕೊಂಡಿರುವ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಜನತಾ ಕಾಲೋನಿಗೆ ರಸ್ತೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕರವೇ ಹೊನಗನಹಳ್ಳಿ ಗ್ರಾಮ ಘಟಕದ ಅಧ್ಯಕ್ಷ ಶರಣಗೌಡ ಬಿರಾದಾರ ಮಾತನಾಡಿ, ಜನತಾ ಕಾಲೋನಿಗೆ ಆರು ರಸ್ತೆಗಳು ಸಾರ್ವಜನಿಕರಿಗೆ ಓಡಾಡಲು ಬಹಳ ಅನುಕೂಲಕರವಾಗಿತ್ತು. ರಾಷ್ಟ್ರೀಯ ಹೆದ್ದಾರಿ ಇಲಾಖೆ ರಸ್ತೆ ನೆಪದಲ್ಲಿ ರಸ್ತೆಗಳನ್ನು ಬಂದ್‌ ಮಾಡಿ ಚರಂಡಿ ನಿರ್ಮಿಸುತ್ತಿದೆ. ಹೀಗಾದರೆ ಜನಸಂಚಾರಕ್ಕೆ ರಸ್ತೆಯೇ ಇಲ್ಲದಂತಾಗಿ ಅನೇಕ ಬಡಾವಣೆ ನಿವಾಸಿಗಳಿಗೆ ತೀವ್ರ ತರ ಸಮಸ್ಯೆ ಎದುರಾಗುತ್ತದೆ ಎಂದರು.

ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ಹೂಗಾರ ಮಾತನಾಡಿ, ಶಾಲಾ ಮಕ್ಕಳಿಗೆ ಈ ಹಿಂದೆ ಸಂಪರ್ಕ ರಸ್ತೆಯಿಂದಾಗಿ ರೈತರು ತಮ್ಮ ಹೊಲಗದ್ದೆಗಳಿಗೆ ಹೋಗಲು ಅನುಕೂಲವಾಗಿತ್ತು. ಈಗ ದಾರಿ ಮೇಲೆ ಮಣ್ಣು ಕಲ್ಲು ಎಸೆದು ಗಲೀಜು ಮಾಡಿ ಕಲ್ಮಷ ವಾತಾವರಣ ನಿರ್ಮಾಣ ಮಾಡಿ ಸಾಂಕ್ರಾಮಿಕ  ರೋಗ ಹರಡಲು ಅನುವು ಮಾಡಿಕೊಟ್ಟಂತಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳು ಸ್ಥಾನಿಕ ಚೌಕಾಶಿ ಮಾಡಿಸಿ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕೆಂದು ಕೋರಿದರು.

ಮುತ್ತು ಕಿರಸೂರ, ರಮೇಶ ಜಮಖಂಡಿ, ಬಸವರಾಜ ಜಮಖಂಡಿ, ಮಹಾದೇವ ಹಾಲಪ್ಪಗೋಳ, ಯಲಗೂರ ಹಾಲಪ್ಪಗೋಳ, ಸುರೇಶ ಕೊಂಚೂರ, ಗಂಗಪ್ಪ ಜಿಗರಿ, ಬಿ.ಬಿ. ನಾವಿ, ನಿಂಗಪ್ಪ ಹೂಗಾರ, ಎಸ್‌.ಎಸ್‌. ಕವಟಗಿ, ಎಸ್‌.ಆರ್‌. ಹಿರೇಮಠ, ಮೀನಾಕ್ಷಿ ನಾಗರಳ್ಳಿ, ಮಂಜುಳಾ ಹಿರೇಮಠ, ಚಂದ್ರವ್ವ ಹಾಲಪ್ಪಗೋಳ,ಪಾರವ್ವ ಕುರಿ, ಹನುಮಂತ ಶೇಲಿಕೇರಿ ಡಾಕಪ್ಪ, ಶರಣಪ್ಪ ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.