ರವಿಕಾಂತ-ನಡಹಳ್ಳಿ ಪತ್ನಿಗೆ ಒಲಿಯದ ಕಮಲ


Team Udayavani, Apr 17, 2018, 4:56 PM IST

vij-1.jpg

ವಿಜಯಪುರ: ರಾಜ್ಯ ವಿಧಾಸನಸಭೆ ಚುನಾವಣೆಗಾಗಿ ಬಿಜೆಪಿ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲಿ ಮತ್ತೆ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಮಾಜಿ ಶಾಸಕ ರವಿಕಾಂತ ಪಾಟೀಲ ಹಾಗೂ ಶಾಸಕ ನಡಹಳ್ಳಿ ಪತ್ನಿ ಮಹಾದೇವಿ ಅವರಿಗೆ ಕಮಲದ ಟಿಕೆಟ್‌ ಕೈ ತಪ್ಪಿದೆ.

ಬಿಜೆಪಿ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲಿ ಇಂಡಿ ಕ್ಷೇತ್ರದಿಂದ ಕಿಸಾನ್‌ ಮೋರ್ಚಾ ಜಿಲ್ಲಾಧ್ಯಕ್ಷ ದಯಾಸಾಗರ ಪಾಟೀಲ ಅವರಿಗೆ ಮಣೆ ಹಾಕಿದ್ದು, ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರ ಹೆಸರುಗಳನ್ನು ಪ್ರಟಿಸಲಾಗಿದೆ. 

ಇದರಿಂದ ಇಂಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸತತ ಮೂರು ಬಾರಿ ಪಕ್ಷೇತರರಾಗಿ ಗೆದ್ದಿದ್ದ ಮಾಜಿ ಶಾಸಕ ರವಿಕಾಂತ ಪಾಟೀಲ ಟಿಕೆಟ್‌ ಕೈ ತಪ್ಪಿರುವುದು ನಿರಾಸೆಗೆ ದೂಡಿದೆ. ಕಳೆದ ಬಾರಿ ಕೆಜೆಪಿ ಅಭ್ಯರ್ಥಿಯಾಗಿದ್ದ ರವಿಕಾಂತ ಪಾಟೀಲ ಈ ಬಾರಿ ಯಡಿಯೂರಪ್ಪ ಅವರು ತಮಗೆ ಟಿಕೆಟ್‌ ಕೊಡಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದರು. ಇಂಡಿ ಪಟ್ಟಣದಲ್ಲಿ ನಡೆದ ಪಕ್ಷದ ಸಮಾರಂಭದಲ್ಲಿ ರವಿಕಾಂತ ಪಾಟೀಲ ಹಾಗೂ ವಿರೋಧಿ ಬಣ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಮೂಲಕ ಪ್ರತಿಷ್ಠೆಗೆ ಬಿದ್ದಿದ್ದವು. ಆದರೆ ಪಕ್ಷ ಕಟ್ಟಿರುವ ಆಕಾಂಕ್ಷಿಗಳಲ್ಲೇ ಯಾರಿಗಾದರೂ ಒಬ್ಬರಿಗೆ ಟಿಕೆಟ್‌ ಕೊಡಬೇಕು.

ಹೊರಗಿನಿಂದ ಬಂದಿರುವ ರವಿಕಾಂತ ಪಾಟೀಲ ಅವರಿಗೆ ಟಿಕೆಟ್‌ ನೀಡಿದಲ್ಲಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ಎಲ್ಲರೂ ಸೇರಿ ಒಮ್ಮತದಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಪ್ರಕಟಿಸಿದ್ದರು. ಇದರ ಬೆನ್ನ ಹಿಂದೆಯೇ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಬೆಂಬಲಿಗ ದಯಾಸಾಗರ ಅವರಿಗೆ ಕಮಲ ಒಲಿದಿದೆ. ಹೀಗಾಗಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಮಾಜಿ ಶಾಸಕ ರವಿಕಾಂತ ಪಾಟೀಲ ನಡೆ ಕುತೂಹಲ ಮೂಡಿಸಿದೆ. 

ರೌಡಿಶೀಟ್‌ ಓಪನ್‌?: ಈ ಮಧ್ಯೆ ಇಂಡಿ ಕ್ಷೇತ್ರದಿಂದ ಕಾಂಗ್ರೆಸ್‌ ಬಂಡಾಯ ಸ್ಪರ್ಧೆ ಘೋಷಿಸಿದ್ದ ಮಹಾದೇವ ಭೈರಗೊಂಡ ವಿರುದ್ಧ ರೌಡಿಶೀಟರ್‌ ಓಪನ್‌ ಮಾಡಿ ಬಂಧಿಸಲಾಗಿದೆ. ಮರಳು ಮಾಫೀಯಾ ಮೂಲಕ ಅಕ್ರಮ ಹಣ ಸಂಪಾದಿಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ಐಜಿಪಿ ಅಲೋಕಕುಮಾರ ಹೇಳಿದ್ದರು. ಇದರ ಬೆನ್ನ ಹಿಂದೆಯೇ ಮರಳು ಮಾಫಿಯಾ ವಿಷಯವಾಗಿಯೇ ವ್ಯಕ್ತಿಯೊಬ್ಬರ ವಿರುದ್ಧ ಕೊಲೆಯತ್ನದ ಆರೋಪದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ರವಿಕಾಂತ ಪಾಟೀಲ ವಿರುದ್ಧವೂ ಪೊಲೀಸರು ರೌಡಿಶೀಟರ್‌ ತೆರೆದಿದ್ದಾರೆ. ಬಿಜೆಪಿ ಟಿಕೆಟ್‌ ವಂಚಿತ ರವಿಕಾಂತ ಪಾಟೀಲ ಪಕ್ಷೇತರರಾಗಿ ಸ್ಪರ್ಧೆಗೆ ಮುಂದಾದರೆ ಅವರ ಬಂಧನಕ್ಕೆ ಪೊಲೀಸರು ಸಿದ್ಧತೆ ಮಾಡಿಕೊಂಡಿರುವ ಸುದ್ದಿ ಹರಡಿದೆ. ಇದೇ ಕಾರಣಕ್ಕೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದು ಒಂದೊಮ್ಮೆ ಪಕ್ಷೇತರ ಸ್ಪರ್ಧೆಗೆ ಮುಂದಾದಲ್ಲಿ ರವಿಕಾಂತ ಅವರನ್ನು ಪೊಲೀಸರು ಬೆನ್ನು ಬೀಳುವ ಸಾಧ್ಯತೆ ಇಲ್ಲದಿಲ್ಲ. ನಡಹಳ್ಳಿ ಪತ್ನಿಗಿಲ್ಲ ಟಿಕೆಟ್‌: ಇತ್ತ ನಿರೀಕ್ಷೆಯಂತೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರಿಗೆ ಬಿಜೆಪಿ ಮತ್ತೂಂದು ಅವಕಾಶ ಕಲ್ಪಿಸಿದೆ.

ಇದರೊಂದಿಗೆ ತಮ್ಮ ಪತ್ನಿ ಮಹಾದೇವಿ ಅವರಿಗೆ ಟಿಕೆಟ್‌ ಕೊಡದ ಕಾರಣ ಬಿಜೆಪಿ ಸಹ ಶಾಸಕ ನಡಹಳ್ಳಿಗೆ ಅವರಿಗೆ ನಿರಾಶೆ ಮೂಡಿಸಿದೆ. ಕಾಂಗ್ರೆಸ್‌ ಉಚ್ಚಾಟಿತ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮುದ್ದೇಬಿಹಾಳ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ಘೋಷಿಸಿದ್ದರೂ ತಮ್ಮ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದರು. ಇದೀಗ ಬಿಜೆಪಿಯಲ್ಲೂ ಅವರ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಟಿಕೆಟ್‌ ಕೈ ತಪ್ಪಿ ಮತ್ತದೇ ಹಿನ್ನಡೆ ಆಗಿದೆ. ಹೀಗಾಗಿ ನಡಹಳ್ಳಿ ನಡೆ ಈಗ ಹೇಗಿರುತ್ತದೆ ಎಂದು ಕುತೂಹಲ ಮೂಡಿಸಿದೆ.

ಇತ್ತ ವಿಜಯಪುರ ನಗರ ಕ್ಷೇತ್ರದಿಂದ ಮೊದಲ ಪಟ್ಟಿಯಲ್ಲಿ ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್‌ ನೀಡಿದ್ದು, ಬಿಜೆಪಿ ಟಿಕೆಟ್‌ ವಂಚಿತರಾಗಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅತೃಪ್ತಿ ಹೊರ ಹಾಕಿದ್ದಾರೆ. ಈಗಾಗಲೇ
ಬೆಂಬಲಿಗರ ಸಭೆ ನಡೆಸಿರುವ ಅವರು, ಎರಡನೇ ಪಟ್ಟಿ ಬಿಡುಗಡೆ ಬಳಿಕ ನಿರ್ಧಾರ ಪ್ರಕಟಿಸುವ ಹೇಳಿಕೆ ನೀಡಿದ್ದರು. ಇದೀಗ ಅವರ ನಿರೀಕ್ಷೆ ಹುಸಿಯಾಗಿದ್ದು ಪಟ್ಟಣಶೆಟ್ಟಿ ಬಂಡಾಯದ ಬಾವುಟ ಹಾರಿಸುವುದು ಖಚಿತವಾಗಿದೆ.

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.