ರವಿಕಾಂತ-ನಡಹಳ್ಳಿ ಪತ್ನಿಗೆ ಒಲಿಯದ ಕಮಲ


Team Udayavani, Apr 17, 2018, 4:56 PM IST

vij-1.jpg

ವಿಜಯಪುರ: ರಾಜ್ಯ ವಿಧಾಸನಸಭೆ ಚುನಾವಣೆಗಾಗಿ ಬಿಜೆಪಿ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲಿ ಮತ್ತೆ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಮಾಜಿ ಶಾಸಕ ರವಿಕಾಂತ ಪಾಟೀಲ ಹಾಗೂ ಶಾಸಕ ನಡಹಳ್ಳಿ ಪತ್ನಿ ಮಹಾದೇವಿ ಅವರಿಗೆ ಕಮಲದ ಟಿಕೆಟ್‌ ಕೈ ತಪ್ಪಿದೆ.

ಬಿಜೆಪಿ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲಿ ಇಂಡಿ ಕ್ಷೇತ್ರದಿಂದ ಕಿಸಾನ್‌ ಮೋರ್ಚಾ ಜಿಲ್ಲಾಧ್ಯಕ್ಷ ದಯಾಸಾಗರ ಪಾಟೀಲ ಅವರಿಗೆ ಮಣೆ ಹಾಕಿದ್ದು, ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರ ಹೆಸರುಗಳನ್ನು ಪ್ರಟಿಸಲಾಗಿದೆ. 

ಇದರಿಂದ ಇಂಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸತತ ಮೂರು ಬಾರಿ ಪಕ್ಷೇತರರಾಗಿ ಗೆದ್ದಿದ್ದ ಮಾಜಿ ಶಾಸಕ ರವಿಕಾಂತ ಪಾಟೀಲ ಟಿಕೆಟ್‌ ಕೈ ತಪ್ಪಿರುವುದು ನಿರಾಸೆಗೆ ದೂಡಿದೆ. ಕಳೆದ ಬಾರಿ ಕೆಜೆಪಿ ಅಭ್ಯರ್ಥಿಯಾಗಿದ್ದ ರವಿಕಾಂತ ಪಾಟೀಲ ಈ ಬಾರಿ ಯಡಿಯೂರಪ್ಪ ಅವರು ತಮಗೆ ಟಿಕೆಟ್‌ ಕೊಡಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದರು. ಇಂಡಿ ಪಟ್ಟಣದಲ್ಲಿ ನಡೆದ ಪಕ್ಷದ ಸಮಾರಂಭದಲ್ಲಿ ರವಿಕಾಂತ ಪಾಟೀಲ ಹಾಗೂ ವಿರೋಧಿ ಬಣ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಮೂಲಕ ಪ್ರತಿಷ್ಠೆಗೆ ಬಿದ್ದಿದ್ದವು. ಆದರೆ ಪಕ್ಷ ಕಟ್ಟಿರುವ ಆಕಾಂಕ್ಷಿಗಳಲ್ಲೇ ಯಾರಿಗಾದರೂ ಒಬ್ಬರಿಗೆ ಟಿಕೆಟ್‌ ಕೊಡಬೇಕು.

ಹೊರಗಿನಿಂದ ಬಂದಿರುವ ರವಿಕಾಂತ ಪಾಟೀಲ ಅವರಿಗೆ ಟಿಕೆಟ್‌ ನೀಡಿದಲ್ಲಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ಎಲ್ಲರೂ ಸೇರಿ ಒಮ್ಮತದಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಪ್ರಕಟಿಸಿದ್ದರು. ಇದರ ಬೆನ್ನ ಹಿಂದೆಯೇ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಬೆಂಬಲಿಗ ದಯಾಸಾಗರ ಅವರಿಗೆ ಕಮಲ ಒಲಿದಿದೆ. ಹೀಗಾಗಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಮಾಜಿ ಶಾಸಕ ರವಿಕಾಂತ ಪಾಟೀಲ ನಡೆ ಕುತೂಹಲ ಮೂಡಿಸಿದೆ. 

ರೌಡಿಶೀಟ್‌ ಓಪನ್‌?: ಈ ಮಧ್ಯೆ ಇಂಡಿ ಕ್ಷೇತ್ರದಿಂದ ಕಾಂಗ್ರೆಸ್‌ ಬಂಡಾಯ ಸ್ಪರ್ಧೆ ಘೋಷಿಸಿದ್ದ ಮಹಾದೇವ ಭೈರಗೊಂಡ ವಿರುದ್ಧ ರೌಡಿಶೀಟರ್‌ ಓಪನ್‌ ಮಾಡಿ ಬಂಧಿಸಲಾಗಿದೆ. ಮರಳು ಮಾಫೀಯಾ ಮೂಲಕ ಅಕ್ರಮ ಹಣ ಸಂಪಾದಿಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ಐಜಿಪಿ ಅಲೋಕಕುಮಾರ ಹೇಳಿದ್ದರು. ಇದರ ಬೆನ್ನ ಹಿಂದೆಯೇ ಮರಳು ಮಾಫಿಯಾ ವಿಷಯವಾಗಿಯೇ ವ್ಯಕ್ತಿಯೊಬ್ಬರ ವಿರುದ್ಧ ಕೊಲೆಯತ್ನದ ಆರೋಪದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ರವಿಕಾಂತ ಪಾಟೀಲ ವಿರುದ್ಧವೂ ಪೊಲೀಸರು ರೌಡಿಶೀಟರ್‌ ತೆರೆದಿದ್ದಾರೆ. ಬಿಜೆಪಿ ಟಿಕೆಟ್‌ ವಂಚಿತ ರವಿಕಾಂತ ಪಾಟೀಲ ಪಕ್ಷೇತರರಾಗಿ ಸ್ಪರ್ಧೆಗೆ ಮುಂದಾದರೆ ಅವರ ಬಂಧನಕ್ಕೆ ಪೊಲೀಸರು ಸಿದ್ಧತೆ ಮಾಡಿಕೊಂಡಿರುವ ಸುದ್ದಿ ಹರಡಿದೆ. ಇದೇ ಕಾರಣಕ್ಕೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದು ಒಂದೊಮ್ಮೆ ಪಕ್ಷೇತರ ಸ್ಪರ್ಧೆಗೆ ಮುಂದಾದಲ್ಲಿ ರವಿಕಾಂತ ಅವರನ್ನು ಪೊಲೀಸರು ಬೆನ್ನು ಬೀಳುವ ಸಾಧ್ಯತೆ ಇಲ್ಲದಿಲ್ಲ. ನಡಹಳ್ಳಿ ಪತ್ನಿಗಿಲ್ಲ ಟಿಕೆಟ್‌: ಇತ್ತ ನಿರೀಕ್ಷೆಯಂತೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರಿಗೆ ಬಿಜೆಪಿ ಮತ್ತೂಂದು ಅವಕಾಶ ಕಲ್ಪಿಸಿದೆ.

ಇದರೊಂದಿಗೆ ತಮ್ಮ ಪತ್ನಿ ಮಹಾದೇವಿ ಅವರಿಗೆ ಟಿಕೆಟ್‌ ಕೊಡದ ಕಾರಣ ಬಿಜೆಪಿ ಸಹ ಶಾಸಕ ನಡಹಳ್ಳಿಗೆ ಅವರಿಗೆ ನಿರಾಶೆ ಮೂಡಿಸಿದೆ. ಕಾಂಗ್ರೆಸ್‌ ಉಚ್ಚಾಟಿತ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮುದ್ದೇಬಿಹಾಳ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ಘೋಷಿಸಿದ್ದರೂ ತಮ್ಮ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದರು. ಇದೀಗ ಬಿಜೆಪಿಯಲ್ಲೂ ಅವರ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಟಿಕೆಟ್‌ ಕೈ ತಪ್ಪಿ ಮತ್ತದೇ ಹಿನ್ನಡೆ ಆಗಿದೆ. ಹೀಗಾಗಿ ನಡಹಳ್ಳಿ ನಡೆ ಈಗ ಹೇಗಿರುತ್ತದೆ ಎಂದು ಕುತೂಹಲ ಮೂಡಿಸಿದೆ.

ಇತ್ತ ವಿಜಯಪುರ ನಗರ ಕ್ಷೇತ್ರದಿಂದ ಮೊದಲ ಪಟ್ಟಿಯಲ್ಲಿ ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್‌ ನೀಡಿದ್ದು, ಬಿಜೆಪಿ ಟಿಕೆಟ್‌ ವಂಚಿತರಾಗಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅತೃಪ್ತಿ ಹೊರ ಹಾಕಿದ್ದಾರೆ. ಈಗಾಗಲೇ
ಬೆಂಬಲಿಗರ ಸಭೆ ನಡೆಸಿರುವ ಅವರು, ಎರಡನೇ ಪಟ್ಟಿ ಬಿಡುಗಡೆ ಬಳಿಕ ನಿರ್ಧಾರ ಪ್ರಕಟಿಸುವ ಹೇಳಿಕೆ ನೀಡಿದ್ದರು. ಇದೀಗ ಅವರ ನಿರೀಕ್ಷೆ ಹುಸಿಯಾಗಿದ್ದು ಪಟ್ಟಣಶೆಟ್ಟಿ ಬಂಡಾಯದ ಬಾವುಟ ಹಾರಿಸುವುದು ಖಚಿತವಾಗಿದೆ.

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.