ರಸ್ತೆ ಅಗಲೀಕರಣದಲ್ಲಿ ಮತ್ತೆ ತಾರತಮ್ಯ: ಆರೋಪ
Team Udayavani, Jan 5, 2022, 6:01 PM IST
ಮುದಗಲ್ಲ: ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಗೆ ಪಟ್ಟಣದಲ್ಲಿ ಡಿವೈಡರ್ ಕಾಮಗಾರಿ ಆರಂಭಿಸಲಾಗಿದ್ದು, ಪಟ್ಟಣದ ಮಾರುತೇಶ್ವರ ದೇವಸ್ಥಾನದ ಹತ್ತಿರ ರಸ್ತೆ ಕಾಮಗಾರಿ ಅಗಲೀಕರಣ ವೇಳೆ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಒಂದು ನ್ಯಾಯ ಮಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ಶಾಸಕ ಡಿ.ಎಸ್. ಹೂಲಗೇರಿ ನೇತೃತ್ವದಲ್ಲಿ ಪುರಸಭೆ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ 48 ಅಡಿ ರಸ್ತೆ ಅಗಲೀಕರಣ ಮಾಡಬೇಕು ಎಂದು ನಿರ್ಧಾರ ಮಾಡಲಾಗಿದೆ. ಆದರೆ, ಪುರಸಭೆ ಅಧಿಕಾರಿಗಳು ಕೆಲವು ಕಡೆ ಹೆಚ್ಚು ಕಡಿಮೆ ರಸ್ತೆ ಅಗಲೀಕರಣ ಮಾಡಿದ್ದಾರೆ. ಪಟ್ಟಣದ ಮಾರುತೇಶ್ವರ ದೇವಸ್ಥಾನ ಹತ್ತಿರ ಇರುವ ಮನೆಗಳನ್ನು ಮನಸೊ ಇಚ್ಚೆಯಂತೆ ತೆರವುಗೊಳಿಸಿದರೇ, ಪೊಲೀಸ್ ಠಾಣೆ ಮುಂಭಾಗದಲ್ಲಿ ಮಾತ್ರ ಕಡಿಮೆ ಅಳತೆಯಲ್ಲಿ ತೆರವುಗೊಳಿಸಲಾಗಿದೆ. ಅಗಲೀಕರಣ ಮಾಡುವ ವೇಳೆ ಅಳೆದು ತೂಗಿ ಬಡವರ ಮತ್ತು ಶ್ರೀಮಂತರ ಮನೆಗಳನ್ನು ಸಮಾನವಾಗಿ ತೆರವುಗೊಳಿಸಿ ಎಂದು ಸಾರ್ವಜನಿಕರ ಹಾಗೂ ಪುರಸಭೆ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.
ಈ ರಸ್ತೆ ಅಗಲೀಕರಣ ಕಾಮಗಾರಿ ವಾಗ್ವಾದ ನಂತರ ಕೆಲವರು ಕೆಲಸ ಮಾಡಲು ಅಡ್ಡಿಪಡಿಸಿದ್ದಾರೆ ಎಂದು ಮುಖ್ಯಾಧಿಕಾರಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾದರು. ಆಗ ಅಧಿಕಾರಿಗಳು ಹಾಗೂ ಸಾರ್ವಜನಿಕರ ನುವೆ ನಡುವೆ ಪೊಲೀಸರು ರಾಜಿ ಸಂಧಾನ ಮಾಡಿದರು.
ಪಟ್ಟಣದಲ್ಲಿ ಯಾವ ರೀತಿ ರಸ್ತೆ ಅಗಲೀಕರಣ ಮಾಡಿದ್ದಾರೆ. ಅದೇ ರೀತಿ ಮಾರುತೇಶ್ವರ ದೇವಸ್ಥಾನದ ಹತ್ತಿರ ಕೂಡ ರಸ್ತೆ ಅಗಲೀಕರಣ ಮಾಡಬೇಕು. ಕೆಲವರು ಎರಡು-ಮೂರು ವರ್ಷದ ಹಿಂದೆಯೇ ಮನೆ ಕಟ್ಟಲಾಗಿದೆ. ಅವುಗಳನ್ನು ತೆರವುಗೊಳಿಸಲು ಬಡವರಿಗೆ ನೋವಾಗುತ್ತದೆ. -ವೀರೇಶ ಉಪ್ಪಾರ, ಉಪಾಧ್ಯಕ್ಷ, ಹುಸೇನ್ ಆಲಂ ಕಟ್ಟಡ ಕಾರ್ಮಿಕರ ಸಂಘ ಮುದಗಲ್ ಘಟಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ