ಶೌಚಾಲಯ ಮರು ನಿರ್ಮಾಣ ಮಾಡಿ


Team Udayavani, Aug 22, 2017, 1:10 PM IST

vij 1.jpg

ಮುದ್ದೇಬಿಹಾಳ: ತಾಲೂಕಿನ ಜಟ್ಟಗಿ ಗ್ರಾಮದಲ್ಲಿರುವ ಮಹಿಳಾ ಶೌಚಾಲಯ ತೆರವುಗೊಳಿಸಿ ಗಾಂವಠಾಣಾ ಜಾಗ ಅತಿಕ್ರಮಿಸಿ ಮನೆ ಕಟ್ಟಿಸಿಕೊಳ್ಳುತ್ತಿರುವುದರಿಂದ ಅನಾನುಕೂಲ ಉಂಟಾಗಿದೆ. ತಕ್ಷಣ ಅತಿಕ್ರಮಣ ತೆರವುಗೊಳಿಸಿ ಶೌಚಾಲಯ ಮರು ನಿರ್ಮಾಣ ಮಾಡಲು ಒತ್ತಾಯಿಸಿ ಗ್ರಾಮದ ಮಾದಿಗ ಸಮುದಾಯ ಮಹಿಳೆಯರು ತಮ್ಮ ಸಮಾಜದ ಪುರುಷರ ಬೆಂಬಲದೊಂದಿಗೆ ಸೋಮವಾರ ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನಗೆ ಮನವಿ ಸಲ್ಲಿಸಿದರು. ಈಗಾಗಲೇ ಅತಿಕ್ರಮಣ ಕುರಿತು ತಾಪಂ ಮತ್ತು ತಾಲೂಕಾಡಳಿತಕ್ಕೆ ಲಿಖೀತ ಮನವಿ ಸಲ್ಲಿಸಲಾಗಿತ್ತು. ಆಗ ಅಧಿಕಾರಿಗಳು ಪರಿಶೀಲಿಸಿ ಅತಿಕ್ರಮಣ ಜಾಗದಲ್ಲಿ ಮನೆ ಕಟ್ಟಿಕೊಳ್ಳದಂತೆ ಕ್ರಮ ಕೈಗೊಂಡಿದ್ದರು. ಆದರೆ 6 ವರ್ಷಗಳ ನಂತರ ಮತ್ತೆ ಅತಿಕ್ರಮಿತ ವ್ಯಕ್ತಿಗಳು ಆ ಜಾಗದಲ್ಲಿ ಕಟ್ಟಡ ಕಟ್ಟುತ್ತಿದ್ದಾರೆ. ಸಂಬಂಧಿಸಿದ ಗ್ರಾಪಂ ಮೊದಲಿದ್ದ ಮಹಿಳೆಯರ ಶೌಚಾಲಯ ಮರು ನಿರ್ಮಾಣ ಮಾಡದೆ ನಿರ್ಲಕ್ಷಾ ತೋರಿಸಿದ್ದು ಖಾಸಗಿ ವ್ಯಕ್ತಿಗಳಿಗೆ ಕಟ್ಟಡ ಕಟ್ಟಲು ಅನುಕೂಲ ಕಲ್ಪಿಸಿದಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಮೊದಲಿದ್ದಂತೆಯೇ ಮಹಿಳೆಯರ ಶೌಚಾಲಯ ಕಟ್ಟಿಸಿಕೊಡಬೇಕು ಹಾಗೂ ಶೌಚಾಲಯ ಜಾಗ ಅತಿಕ್ರಮಿಸಿ ಕಟ್ಟಡ ಕಟ್ಟುತ್ತಿರುವುದನ್ನು ತೆರವುಗೊಳಿಸಬೇಕು. ಅತಿಕ್ರಮಣ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಗ್ರಾಪಂ ಸದಸ್ಯೆ ದ್ಯಾಮವ್ವ ಮಾದರ, ಮಾದಿಗ ಸಮುದಾಯದ ಸತ್ಯವ್ವ, ಚನ್ನವ್ವ, ಬಸವ್ವ, ಯಲ್ಲವ್ವ, ನಾಗವ್ವ, ಗೌರವ್ವ, ಮುದಕವ್ವ ಪ್ರೇಮಾ, ಭೀಮವ್ವ, ಮುಡಗಂಡೆವ್ವ, ಶೀತವ್ವ, ಹುಲಿಗೆವ್ವ, ಮಲ್ಲವ್ವ, ಯಮನವ್ವ, ಬಾಲವ್ವ, ಮಾದಿಗ ಸಮಾಜ ಸಂಘಟನೆ ಮುಖಂಡರಾದ ಹನುಮಂತ ಶಿರೋಳ, ಬಾಲಚಂದ್ರ ಹುಲ್ಲೂರ, ಬಸವರಾಜ ಪೂಜಾರಿ, ದೇವೇಂದ್ರ ಡೊಂಕಮಡು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.