ಹುಬ್ಬಳ್ಳಿಗೆ ಬಸ್ ಸೌಲಭ್ಯ ಕಲ್ಪಿಸಲು ಮನವಿ
Team Udayavani, Nov 14, 2021, 3:40 PM IST
ಬಸವನಬಾಗೇವಾಡಿ: ಪಟ್ಟಣದಿಂದ ಪ್ರತಿ ದಿನ ಬೆಳಗ್ಗೆ 5:30ಕ್ಕೆ ಹುಬ್ಬಳ್ಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿ ಪಟ್ಟಣದ ನಿವಾಸಿಗಳು ಶನಿವಾರ ಬಸ್ ಘಟಕದ ವ್ಯವಸ್ಥಾಪಕ ಪಿ.ಕೆ. ಜಾಧವ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದಿಂದ ಪ್ರತಿ ದಿನ ಬೆಳಗ್ಗೆ 5:30ಕ್ಕೆ ಬಸವನಬಾಗೇವಾಡಿಯಿಂದ ಹುಬ್ಬಳ್ಳಿಗೆ ಬಸ್ ಸಂಚಾರ ಆರಂಭಿಸಬೇಕು. ತಾಲೂಕಿನ ಜನರಿಗೆ ಹಾಗೂ ವ್ಯಾಪಾರಸ್ಥರು ಸೇರಿದಂತೆ ವಿವಿಧ ಕೆಲಸಗಳಿಗಾಗಿ ಜನರು ಹುಬ್ಬಳ್ಳಿಗೆ ತೆರಳುತ್ತಾರೆ. ಹುಬ್ಬಳ್ಳಿ-ಧಾರವಾಡ ತೆರಳಲು ಅನುಕೂಲವಾಗುತ್ತದೆ. ವಿವಿಧೆಡೆ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಹುಬ್ಬಳ್ಳಿ ಮಾರ್ಗದಿಂದ ಸಂಚರಿಸುತ್ತಾರೆ. ಅಲ್ಲದೇ ರೋಗಿಗಳು ಹುಬ್ಬಳ್ಳಿ ಆಸ್ಪತ್ರೆಗೆ ತೆರಳುತ್ತಾರೆ. ಆದರೆ ಪಟ್ಟಣದಿಂದ ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲದೇ ಇರುವುದರಿಂದ ತೊಂದರೆ ಅನುಭವಿಸುವಂತಾಗಿದೆ.
ಸಂಜೆ ಹುಬ್ಬಳ್ಳಿ ಮಾರ್ಗದಿಂದ ಬಸವನಬಾಗೇವಾಡಿಗೆ ಬರಲು ಬಸ್ ಸೌಲಭ್ಯ ಇಲ್ಲದೇ ಇರುವುದರಿಂದ ವಿಜಯಪುರ ಮಾರ್ಗವಾಗಿ ಬಸವನಬಾಗೇವಾಡಿಗೆ ಬರುವಂತಹ ಪರಿಸ್ಥಿತಿ ಇದೆ. ಪಟ್ಟಣ ಸೇರಿದಂತೆ ತಾಲೂಕಿನ ಜನರಿಗೆ ಅನುಕೂಲವಾಗುವಂತೆ ಪ್ರತಿ ದಿನ ಬೆಳಗ್ಗೆ ಹುಬ್ಬಳ್ಳಿಗೆ ಬಸ್ ಸಂಚರಿಸಬೇಕು. ಅಲ್ಲದೇ ಸಂಜೆ ಹುಬ್ಬಳ್ಳಿಯಿಂದ ಪಟ್ಟಣಕ್ಕೆ ಬರಲು ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಎಪಿಎಂಸಿ ಮಾಜಿ ಅಧ್ಯಕ್ಷ ನಿರ್ದೇಶಕ ಶೇಖರ ಗೊಳಸಂಗಿ, ಮಹಾಂತೇಶ ಆದಿಗೊಂಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ