ಮುದಾಳ ಕೆರೆ ರಕ್ನಿಸಲು ಆಗ್ರಹಿಸಿ ಮನವಿ
Team Udayavani, Aug 31, 2017, 2:47 PM IST
ಮುದ್ದೇಬಿಹಾಳ: ತಾಲೂಕಿನ ಮುದ್ನಾಳ ಗ್ರಾಮದ ಕೆರೆಯನ್ನು ಒಳಚರಂಡಿ ಡ್ರೈನೇಜ್ಗೆ ಬಳಕೆ ಮಾಡದಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಎಂ.ಎ.ಎಸ್. ಬಾಗವಾನ್ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮಸ್ಥರು ಹಾಗೂ ರೈತರ ದನಕರುಗಳಿಗೆ ಉಪಯುಕ್ತವಾಗುವ ಕೆರೆ ಒಳಚರಂಡಿಯ ಡ್ರೈನೇಜ್ಗೆ ಬಳಸುವ ಹುನ್ನಾರ ನಡೆದಿದೆ. ಇದನ್ನು ನಿಲ್ಲಿಸಿ ಕೆರೆ ರಕ್ಷಿಸುವಂತೆ ಆಗ್ರಹಿಸಿದರು.
ಸುಮಾರು 6 ಸಾವಿರ ಸಂಖ್ಯೆಯುಳ್ಳ ಮುದ್ನಾಳ ಗ್ರಾಮಕ್ಕೆ ಕೆರೆ ಉಪಯುಕ್ತವಾಗಿದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಕಳೆದ ವರ್ಷದಿಂದ ಆರಂಭಗೊಂಡಿರುವ ಒಳ ಚರಂಡಿಯ ಡ್ರೈನೇಜ್ಗಾಗಿ ಮುದ್ನಾಳ ಕೆರೆ ಉಪಯೋಗಿಸಲು ಮುಂದಾಗಿದ್ದು, ಕೆರೆಯಲ್ಲಿ ಸಂಗ್ರಹಣೆಗೊಂಡ ನೀರನ್ನು ಗುತ್ತಿಗೆದಾರರು ಹೊರಹಾಕುತ್ತಿದ್ದಾರೆ. ಕೆರೆಯಲ್ಲಿ ನೀರು ಇಲ್ಲದಿದ್ದರೆ ದನ ಕರುಗಳಿಗೆ ನೀರು ಇಲ್ಲದಂತಾಗುತ್ತದೆ. ಈ ಕುರಿತು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿ ಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರೈತರು, ಮುದ್ನಾಳ ಕೆರೆಯನ್ನು ಮುಚ್ಚಿ ಡ್ರೈನೇಜ್ ಮಾಡುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಜಿಲ್ಲಾದ್ಯಂತ ಕೆರೆ ತುಂಬುವ
ಯೋಜನೆ ಜಾರಿ ಮಾಡುತ್ತಿದ್ದಾರೆ. ಆದರೆ, ಮುದ್ದೇಬಿಹಾಳ ತಾಲೂಕಿನಲ್ಲಿ ಕೆರೆ ಮುಚ್ಚುವ ಕೆಲಸ ಮಾಡಲಾಗುತ್ತಿದ್ದು, ವಿಪರ್ಯಾಸದ ಸಂಗತಿ. ಇದನ್ನು ನಿಲ್ಲಿಸಿ ರೈತರಿಗೆ ಅನುಕೂಲ
ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ರಸ್ತೆಗಿಳಿದು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.
ಸಂಗನಗೌಡ ಪಾಟೀಲ, ಎಪಿಎಂಸಿ ಸದಸ್ಯ ಬಿ.ಆರ್. ಯರಝರಿ, ಅಬ್ದುಲ ಮೊಕಾಶಿ, ಎಂ.ಎಸ್. ದೋರನಹಳ್ಳಿ, ಲೋಕನಾಥ ಲಮಾಣಿ, ಎಸ್.ಜೆ. ವಾಲಿಕಾರ, ಹಣಮಂತ ಅಮರಗೋಳ, ಪಿ.ಯು. ವಾಲಿಕಾರ, ಸಿದ್ದಣ್ಣ ದೋತಿಹಾಳ, ರಾಮಣ್ಣ ಹುಣಸಗಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ