ಕಿಡ್ನಾಪ್ ಆಗಿದ್ದ ಬೇಕರಿ ಮಾಲೀಕಗೆ ರಕ್ಷಣೆ ಒದಗಿಸಲು ಆಗ್ರಹಿಸಿ ಮನವಿ
Team Udayavani, Apr 21, 2022, 3:10 PM IST
ಇಂಡಿ: ಇತ್ತೀಚೆಗೆ ಕಿಡ್ನಾಪ್ ಆಗಿದ್ದ ಪಟ್ಟಣದ ಅರ್ಬುದಾ ಬೇಕರಿ ಮಾಲೀಕ ಮಾಪಸಿಂಗ್ ಪರಮಾರ್ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಸಂಜೀವ ಚವ್ಹಾಣ, ವಿಜಯ್ ರಾಠೊಡ ಮತ್ತಿತರರು ಮಾತನಾಡಿ, ಎರಡು ತಿಂಗಳ ಹಿಂದೆ ಸಿನಿಮೀಯ ಶೈಲಿಯಲ್ಲಿ ಬೇಕರಿ ಮಾಲೀಕನನ್ನು ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಕೇಸ್ ದಾಖಲಿಸಿದ್ದರು. ಆದರೆ ಆರೋಪಿಗಳು ಬೇಲ್ ಮೇಲೆ ಹೊರಗಡೆ ಬಂದಿದ್ದು ಮತ್ತೆ ಬೇಕರಿ ಹತ್ತಿರ ಅಡ್ಡಾಡುತಿದ್ದಾರೆ. ಹೀಗಾಗಿ ಬೇಕರಿ ಮಾಲೀಕನ ಪ್ರಾಣಕ್ಕೆ ಅಪಾಯವಿದೆ. ಕೂಡಲೇ ಪೊಲೀಸ್ ಇಲಾಖೆಯವರಿಗೆ ನಿರ್ದೇಶನ ನೀಡಿ ಬೇಕರಿ ಮಾಲೀಕನ ಪ್ರಾಣ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಮೋಹನ್ ಲಮಾಣಿ, ಬಾಬು ರಾಠೊಡ, ರಂಗು ಚವ್ಹಾಣ, ಧನರಾಜ ರಾಠೊಡ, ಪಂಡಿತ ರಾಠೊಡ, ವಿಲಾಸ ರಾಠೊಡ, ಅಶೋಕ ಚವ್ಹಾಣ, ಸಂತೋಶ ರಾಠೊಡ, ವಿಲಾಸ ರಾಠೊಡ, ಅವಿನಾಶ ರಾಠೊಡ, ಶಿವಲೀಲಾ ರಾಠೊಡ, ಕವಿತಾ ರಾಠೊಡ, ಶೋಭಾ ಪವಾರ, ರಾಜಶ್ರೀ ಚವ್ಹಾಣ,. ನಿಖೀತಾ ಪವಾರ, ಅಂಕಿತಾ ಪವಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ