ಇಟಂಗಿಹಾಳ ಬಳಿ ಫುಡ್ಪಾರ್ಕ್ ನಿರ್ಮಾಣಕೆ r ಮನವಿ
Team Udayavani, Dec 27, 2020, 5:22 PM IST
ವಿಜಯಪುರ: ವಿಜಯಪುರ ಹೊರ ವಲದಯದ ಇಟ್ಟಂಗಿಹಾಳ ಹತ್ತಿರ ಫುಡ್ಪಾರ್ಕ್ ನಿರ್ಮಿಸಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ರೈತರು-ಉದ್ಯಮಿಗಳ ನಿಯೋಗ ಶನಿವಾರ ಬೆಂಗಳೂರಿನಲ್ಲಿ ಕೃಷಿ ಸಚಿವಬಿ.ಸಿ. ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ವಿಜಯಪುರ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಅದರಲ್ಲೂ ಲಿಂಬೆ, ದ್ರಾಕ್ಷಿ, ದಾಳಿಂಬೆ, ಮಾವು, ಬಾರೆ, ಪೇರಲ ಸೇರಿದಂತೆ ಉತ್ಕೃಷ್ಠ ಗುಣಮಟ್ಟದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ಈ ರೈತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ, ಸಂಸ್ಕರಣೆ, ತಯಾರಿಕೆಗೆ ಸೌಲಭ್ಯಕಲ್ಪಿಸಿದರೆ ಜಿಲ್ಲೆಯ ರೈತರು ಆರ್ಥಿಕ ಅಭಿವೃದ್ಧಿಗೆಸಹಕಾರಿ ಆಗಲಿದ್ದು, ಸಣ್ಣ ಉದ್ಯಮಿಗಳು ಆರಂಭಕ್ಕೆ ಅವಕಾಶ ದೊರೆಯಲಿವೆ. ಈ ಕುರಿತು ಜಿಲ್ಲೆಯ ಶಾಸಕರಾದ ಮಾಜಿ ಸಚಿವ ಎಂ.ಬಿ. ಪಾಟೀಲ ಅವರುನವೆಂಬರ್ 30ರಂದೇ ಕೃಷಿ ಸಚಿವ ಬಿ.ಸಿ. ಪಾಟೀಲಅವರಿಗೆ ಪತ್ರ ಬರೆದುದನ್ನು ರೈತರ ನಿಯೋಗ ನೆನಪಿಸಿತು.
ವಿಜಯಪುರ ನಗರಕ್ಕೆ ಹೊಂದಿಕೊಂಡಿರುವ ಇಟ್ಟಂಗಿಹಾಳ ಗ್ರಾಮದ ಬಳಿ ಫುಡ್ಪಾರ್ಕ್ ನಿರ್ಮಿಸಲು 72 ಎಕರೆ ಜಮೀನು ಮೀಸಲಿರಿಸಲಾಗಿದೆ.ಇದೇ ಸ್ಥಳದಲ್ಲಿ ಫುಡ್ಪಾರ್ಕ್ ಆರಂಭಿಸಿದರೆ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಅಲ್ಲದೇ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಸಾಕಷ್ಟುಅವಕಾಶಗಳು ದೊರೆಯುತ್ತದೆ ಎಂದು ಕೃಷಿ ಸಚಿವ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಟ್ಟಿತು.
ಜಿಲ್ಲೆಯಲ್ಲಿ ಬಹುತೇಕ ಪ್ರದೇಶ ನೀರಾವರಿಗೆ ಒಳಪಟ್ಟಿರುವುದರಿಂದ ಮುಂದಿನ ವರ್ಷಗಳಲ್ಲಿಇನ್ನೂ ಹೆಚ್ಚಿನ ತೋಟಗಾರಿಕಾ ಪ್ರದೇಶಬೆಳವಣಿಗೆ ಆಗಲಿದೆ. ಈ ನಿಟ್ಟಿನಲ್ಲಿ ವಿಜಯಪುರಫುಡ್ಪಾರ್ಕ್ಗೆ ಕೃಷಿ ಸಚಿವರು ಹೆಚ್ಚು ಒತ್ತುನೀಡಬೇಕು ಎಂದು ಸವಿವರವಾಗಿ ತಿಳಿಸಲಾಯಿತು. ರೈತರ ನಿಯೋಗದ ಮನವಿಗೆ ಸ್ಪಂ ದಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ, ಶೀಘ್ರದಲ್ಲೇ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಮಾಡಿ, ಫುಡ್ಪಾರ್ಕ್ ಸ್ಥಾಪನೆಗೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ| ಕೆ.ಎಸ್. ಮುಂಬಾರೆಡ್ಡಿ, ವಿಜಯಪುರ ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ, ಬಿಎಲ್ಡಿಇ ನಿರ್ದೇಶಕ ಬಸನಗೌಡ ಪಾಟೀಲ, ಪ್ರಗತಿಪರ ರೈತರಾದ ದುಂಡಪ್ಪ ಬಡ್ರಿ, ಅಜೇಯ ಪಾಟೀಲ ಹನುಮಾಪುರ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…