ವಿಲನ್ ಚಿತ್ರದ ವಿವಾದಿತ ಗೀತೆಗೆ ಕತ್ತರಿ ಹಾಕಲು ಮನವಿ
Team Udayavani, Oct 23, 2018, 3:38 PM IST
ವಿಜಯಪುರ: ದಿ ವಿಲನ್ ಚಲನ ಚಿತ್ರದಲ್ಲಿ ಅಳವಡಿರುವ ಗೀತೆಯೊಂದು ಅಂಧರನ್ನು ಅವಮಾನಿಸುತ್ತಿದ್ದು ಕೂಡಲೇ ಗೀತೆಯನ್ನು ತೆಗೆದು ಹಾಕಬೆಕು ಹಾಗೂ ಚಿತ್ರ ನಿರ್ದೇಶಕ ಪ್ರೇಮ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ವಿಕಲಚೇತನರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆ ಪ್ರಮುಖ ಭೀಮನಗೌಡ ಪಾಟೀಲ ಸಾಸನೂರ, ದಿ ವಿಲನ್ ಚಿತ್ರದಲ್ಲಿ ಗರುಡ್ನಂಗೆ ಇಧ್ದೋನ್ ನೋಡ್ಲಾ ಕುರುಡ್ನಂಗ್ ಆಗೋದೊ ಎಂಬ ಪದ ದೃಷ್ಟಿ ದೋಷಿತರನ್ನು ಅವಮಾನಿಸುವಂತಿದ್ದು ಅಂಧರ ಭಾವನೆಗೆ ಧಕ್ಕೆ ತಂದಿದೆ ಎಂದು ದೂರಿದರು.
ವಿನೋದ ಖೇಡ ಮಾತನಾಡಿ, ವಿಕಲಚೇತನರ ಕಾಯ್ದೆ ಅನ್ವಯ ಯಾವುದೇ ವಿಕಲಚೇತನರ ನ್ಯೂನ್ಯತೆ ಎತ್ತಿ ಹಿಡಿಯಬಾರದು. ಅಷ್ಟೇ ಅಲ್ಲದೇ ದೃಷ್ಟಿ ದೋಷಿತರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದವರ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುವ ಅವಕಾಶವಿದೆ. ಹೀಗಾಗಿ ಕೂಡಲೇ ಚಿತ್ರದ ಅವಮಾನಿತ ಗೀತೆಯನ್ನು ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು. ಅಶೋಕ ವಾಲೀಕಾರ, ಮಲ್ಲಿಕಾರ್ಜುನ ಉಮರಾಣಿ, ಪರಶುರಾಮ ಗಾಯಕವಾಡ, ಎ.ಎ. ಹಕೀಂ, ಅಂಬಣ್ಣ ಗುನ್ನಾಪುರ, ರಾಜು ಭುಯ್ನಾರ, ಶಂಕ್ರಮ್ಮ ಕೋರಿ, ಮಹಾದೇವಿ ಮಾನೆ, ಹೀನಾ ಚೌಧರಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!