ಶಾಲಾ ನೌಕರರ ಪಿಂಚಣಿಗೆ ಆಗ್ರಹ


Team Udayavani, Dec 6, 2020, 3:25 PM IST

ಶಾಲಾ ನೌಕರರ ಪಿಂಚಣಿಗೆ ಆಗ್ರಹ

ವಿಜಯಪುರ: 2021 ಜ. 4ರ ಒಳಗಾಗಿ ರಾಜ್ಯದ ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಪ್ರಧಾನ ಸಂಚಾಲಕ ಎಲ್‌.ಎಸ್‌. ಕಿರನಳ್ಳಿ, ಸರ್ಕಾರ 1-4-2006ರಿಂದಅನುದಾನಿತ ವಿದ್ಯಾಸಂಸ್ಥೆಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆಯಾಗಲಿ, ವಂತಿಗೆ ಅಧಾರಿತ ನೂತನ ಪಿಂಚಣಿ ಯೋಜನೆ ಸೌಲಭ್ಯವನ್ನು ನೀಡಿಲ್ಲ. ಆದರೆ 1-04-2006 ಕ್ಕೂ ಮೊದಲು ಪಿಂಚಣಿ ವಿಚಾರದಲ್ಲಿ ಸರ್ಕಾರಿ ಮತ್ತು ಅನುದಾನಿತ ನೌಕರರ ಮಧ್ಯೆ ಯಾವುದೇ ತಾರತಮ್ಯ ಇದ್ದಿಲ್ಲ. ಈಗಾಗಲೇ ಸಾವಿರಾರು ನೌಕರರು ಕೊನೇ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತರಾಗಿದ್ದಾರೆ.

ಕೆಲವರು ಅಕಾಲಿಕ ಮರಣವನ್ನೂ ಹೊಂದಿದ್ದಾರೆ. ಈ ಅನ್ಯಾಯವನ್ನು ಸರಿಪಡಿಸುವಂತೆ ಕಳೆದ 10 ವರ್ಷಗಳಿಂದ ನಮ್ಮ ಸಂಘಟನೆ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಬೇಡಿಕೆ ಈಡೇರಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದರಿಂದ ಮನನೊಂದು ಇದೇ ಚಳಿಗಾಲದ ಅಧಿವೇಶನದಲ್ಲಿ 7-12-2020ರಿಂದ ಅಹೋರಾತ್ರಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಸಂಘಟನೆ ತೀರ್ಮಾನಿಸಿತ್ತು. ಆದರೆ ಪ್ರಸ್ತುತ 30-11-2020ರಿಂದ ಗ್ರಾಮ ಪಂಚಾಯತ್‌ ಚುನಾವಣೆಯನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಉಗ್ರ ಹೋರಾಟವನ್ನು ಹಿಂದಕ್ಕೆ ಪಡೆದಿದ್ದು, 4-1-2021ರ ಒಳಗಾಗಿ ನ್ಯಾಯಯುತವಾದ ನಮ್ಮ ಪಿಂಚಣಿ ಬೇಡಿಕೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎಸ್‌. ಹಿರೇಮಠ ಮಾತನಾಡಿ, ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಮಾನವೀಯ ಬೇಡಿಕೆಗಳಾಗಿದ ಇವುಗಳನ್ನು ಸರ್ಕಾರ ತುರ್ತಾಗಿ ಈಡೇರಿಸಲು ಮುಂದಾಗಬೇಕು. ಬರುವ ಜ. 4 ರೊಳಗೆ ಪಿಂಚಣಿ ಸೌಲಭ್ಯ ಒದಗಿಸಿ ನಮ್ಮ ಸಂಧ್ಯಾಕಾಲದ ಊರುಗೋಲಾಗಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರಿಗೂ ಮನವಿ ಸಲ್ಲಿಸಿ, ಕೆಡಪಿ ಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಿದರು.

ಎಸ್‌.ಎಸ್‌. ಉಮ್ಮರಗಿ, ಎಂ.ಎ. ಲೋಣಿ, ಎಸ್‌.ಎನ್‌. ನಾಗೂರ, ಎಂ.ಆರ್‌.ಪಾಟೀಲ, ಪಿ.ಎಸ್‌. ಇಂಡಿ, ವಿ.ಎನ್‌. ಚವ್ಹಾಣ, ಪಿ.ಬಿ. ಕುಂಟರಡ್ಡಿ, ಎಂ.ಎನ್‌. ಮೇರೆಕೋರ, ವಿ.ಪಿ. ಮೇಲ್ಮನಿ, ಎನ್‌.ಡಿ. ಇಟಗಿ, ಎಸ್‌.ಎನ್‌. ಯಾಳವಾರ, ಅಶೋಕ ಕಟ್ಟಿ, ಬಿ.ಸಿ. ಶಿರೋಳಕರ, ಎಸ್‌.ಸಿ. ಗುಡುಗುಂಟಿ, ಟಿ.ಬಿ. ಪುಟಜಾಲಿ, ಟಿ.ಎಚ್‌. ಮುಲ್ಲಾ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.