ಹಿಂದುಳಿದ‌ ವರ್ಗಕ್ಕೆ ಮೀಸಲು-ಬಿಜೆಪಿ ಸಂಭ್ರಮಾಚರಣೆ


Team Udayavani, Jan 12, 2019, 11:38 AM IST

bid-4.jpg

ವಿಜಯಪುರ: ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನೀತಿ ಬೆಂಬಲಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದೇಶ್ವರ ದೇವಸ್ಥಾನದ ಎದುರು ಸಿಹಿ ಹಂಚಿ ಸಂಭ್ರಮ ಅಚರಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ದೇಶದಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಪರಿಣಾಮ ಹಲವು ವರ್ಷಗಳಿಂದ ದೇಶದ ಅರ್ಥಿಕ ಹಿಂದುಳಿದ ವರ್ಗಗಳ ಬಡ ಯುವಕರು ಮೀಸಲಾತಿ ಸೌಲಭ್ಯ ಇಲ್ಲದೇ ಆವಕಾಶ ವಂಚಿತರಾಗುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಹಿಂದುಳಿದ ವರ್ಗಗಳ ಜನರ ಸಂಕಷ್ಟ ಅರಿತು ಪ್ರಸಕ್ತ ಸಂಸತ್‌ ಅಧಿವೇಶನದಲ್ಲೇ ಹಿಂದುಳಿದ ವರ್ಗಗಳಿಗೆ ಶೇ. 10 ಮೀಸಲಾತಿ ಮಸೂದೆ ಮಂಡಿಸಿ ಆನುಮೋದನೆ ಪಡೆಯುವ ಮೂಲಕ ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ. ಅ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನರ ಆಭಿನಂದನೆಗೆ ಪಾತ್ರರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ವಾಲಿ ಮಾತನಾಡಿ, 1947ರ ನಂತರ ದೇಶದಲ್ಲಿ ಬಹುಪಾಲು ಕಾಂಗ್ರೆಸ್‌ ಪಕ್ಷ ಆಡಳಿತ ನಡೆಸಿದ್ದರೂ ಸ್ವಾತಂತ್ರ್ಯ ನಂತರದ 72 ವರ್ಷಗಳಾದರು ಅರ್ಥಿಕ ಹಿಂದುಳಿದ ವರ್ಗಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿರಲಿಲ್ಲ. ತಮ್ಮ ಓಟ್ ಬ್ಯಾಂಕ್‌ ರಾಜಕಾರಣಕ್ಕಾಗಿ ಕೆಲವು ಜಾತಿಗಳಿಗೆ ಮಾತ್ರ ಮೀಸಲಾತಿ ನೀಡಿ ತುಷ್ಟೀಕರಣ ರಾಜಕಾರಣ ಮಾಡುತ್ತಿತ್ತು. ಅ ಮೂಲಕ ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಸಮಾಜ, ಜಾತಿಗಳನ್ನು ಒಡೆದಾಳುವ ನೀತಿ ಅನುಸರಿಸುತ್ತಿತ್ತು.

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಇರುವ ಮೀಸಲಾತಿ ಪದ್ಧತಿ ಮತ್ತು ಜಾತಿ ಸಮೀಕರಣ ಬದಲಿಸದೆ, ಈಗಿರುವ ಯಾವ ಮೀಸಲು ಸಮುದಾಯಕ್ಕೂ ಆನ್ಯಾಯವಾಗದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿ ಇತಿಹಾಸ ಬರೆದಿದ್ದಾರೆ ಎಂದು ಬಣ್ಣಿಸಿದರು.

ಯಾವ ಜಾತಿ ಹಾಗೂ ರಾಜಕೀಯ ಪಕ್ಷಗಳು ವಿರೋಧ ಮಾಡದ ಮೀಸಲಾತಿ ಪದ್ಧತಿ ಇದಾಗಿದ್ದು, ಲೋಕಸಭೆ, ರಾಜ್ಯಸಭೆ ಎರಡರಲ್ಲೂ ಅಂಗೀಕಾರ ಪಡೆದಿದೆ. ಇದರಿಂದ ದೇಶದ ಬಹುಪಾಲು ಜನರಿಗೆ ಸಂತಸವಾಗಿದ್ದು, ಸಾಮಾನ್ಯ ವರ್ಗದಲ್ಲಿ ಬರುವ ಅರ್ಥಿಕ ಹಿಂದುಳಿದ ಜಾತಿಗಳಿಗೆ ಯುವ ಸಮೂಹಕ್ಕೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಅನುಕೂಲವಾಗಲಿದೆ. ಐತಿಹಾಸಿಕವಾದ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ದೇಶದ ಜನರ ಹಲವು ದಶಕಗಳ ಕನಸು ನನಸಾಗಿದ್ದಾರೆ ಎಂದು ಶ್ಲಾ ಸಿದರು.

ಯುವ ಮೋರ್ಚಾ ಪದಾಧಿಕಾರಿಗಳಾದ ಕಾಂತು ಶಿಂಧೆ, ಮಹೇಳ ಒಡೆಯರ್‌, ರಾಜು ಹುನ್ನೂರ, ಸಚೀನ ಪಾಟೀಲ, ಪ್ರಶಾಂತ ಅಗಸರ, ಅನೀಲ ಉಪ್ಪಾರ, ಬಸಯ್ನಾ ಗೊಳಸಂಗಿಮಠ, ಕೃಷ್ಣಾ ಗುನ್ನಾಳಕರ, ಗುರುರಾಜ ರಾವ್‌, ಸತೀಶ ಪೀರನಾಯಕ್‌, ವಿನಾಯಕ ದಹಿಂದೆ, ಶಿವಾಜಿ ಪಾಟೀಲ, ಸನ್ನಿ ಗವಿಮಠ, ಶರಣು ಲಾಳಸಂಗಿ, ಶರತಸಿಂಗ್‌ ರಜಪೂತ, ವಿಜಯ ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.