ಸಂಸದ ಓವೈಸಿ ವಿಜಯಪುರ ಪ್ರವೇಶಕ್ಕೆ ನಿರ್ಬಂಧ
ವಿಜಯಪುರಕ್ಕೆ ಓವೈಸಿ ಎಂಟ್ರಿ ಇಲ್ಲ
Team Udayavani, Mar 5, 2021, 8:17 PM IST
ವಿಜಯಪುರ : ಪಕ್ಷದ ಸಂಘಟನೆಗಾಗಿ ಮಾ.6 ರಂದು ಜಿಲ್ಲೆಗೆ ಆಗಮಿಲಿದ್ದ ಹೈದ್ರಾಬಾದ್ ನ ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಐಪಿಸಿ 1973 ರ ಕಲಂ 144 (1) (2), (3) ಪ್ರಕಾರ ತಮಗೆ ಪ್ರದತ್ತವಾದ ಅಧಿಕಾರ ಬಳಸಿ ಜಿಲ್ಲಾಧಿಕಾರಿ ಓವೈಸಿ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ವಿಜಯಪುರ ಜಿಲ್ಲೆಗೆ ಪ್ರವೇಶಿಸಿದಂತೆ ಓವೈಸಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದು, ಇದು ಮಾ.6 ರಿಂದ ಒಂದು ವಾರ ಜಾರಿಯಲ್ಲಿರುತ್ತದೆ. ಅಗತ್ಯ ಎನಿಸಿದಲ್ಲಿ ಈ ಅವಧಿಯನ್ನು ವಿಸ್ತರಿಸುವುದಾಗಿ ಜಿಲ್ಲಾಧಿಕಾರಿ ಸುನಿಲಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.