ಹೊಲದ ದಾರಿ ಸಮಸ್ಯೆ ಇತ್ಯರ್ಥಕ್ಕೆ ಕಂದಾಯ ಸಚಿವರ ಸ್ಪಂದನೆ


Team Udayavani, Apr 6, 2022, 2:39 PM IST

18land

ವಿಜಯಪುರ: ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಶೀಘ್ರದಲ್ಲಿ ತಹಶೀಲ್ದಾರರಿಗೆ ಅನುಭೋಗದ ಹಕ್ಕಿನಡಿ ದಾರಿ ಮಾಡಿ ಕೊಡುವ ಅಧಿಕಾರವನ್ನು ವಹಿಸಿಕೊಡುವುದಾಗಿ ಕಂದಾಯ ಸಚಿವ ಆರ್‌. ಅಶೋಕ ಭರವಸೆ ನೀಡಿದ್ದಾರೆ.

ಅಖಂಡ ಕರ್ನಾಟಕ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ರೈತರು ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಕಂದಾಯ ಸಚಿವ ಆರ್‌.ಅಶೋಕ, ರೈತರ ಬೇಡಿಕೆಯನ್ನು ಸಹಾನುಭೂತಿಯಂದ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರೈತರು ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ತೀವ್ರವಾಗುತ್ತಿದೆ. ದಾರಿ ಇಲ್ಲದ ಕಾರಣ ಜಮೀನುಗಳಿಗೆ ಮಳೆಯಾದರೂ ಬಿತ್ತನೆಗಾಗಿ ಹೊಲಕ್ಕೆ ಹೋಗುವುದು ತೊಂದರೆಯಾಗುತ್ತಿದೆ. ಆದ್ದರಿಂದ ಹಳ್ಳಿಗಳಲ್ಲಿ ರೈತರ ಮಧ್ಯೆ ಹೊಡೆದಾಟಗಳು, ಪೊಲೀಸ್‌ ಪ್ರಕರಣಗಳು, ಕೋರ್ಟ್‌ ಕಚೇರಿ ಅಲೆದಾಟಗಳು ನಡೆಯುತ್ತಿವೆ ಎಂದು ಸಮಸ್ಯೆಯ ಗಂಭೀರತೆಯನ್ನು ಮನವರಿಕೆ ಮಾಡಿಕೊಟ್ಟರು. ಮಳೆಯಾದರೂ ದಾರಿಯ ಸಮಸ್ಯೆಯ ಕಾರಣ ಜಮೀನು ಹೂಳು ಬಿದ್ದು ರೈತ ಕುಟುಂಬಗಳು ಬೀದಿಪಾಲಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೊಲಗಳಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ಈ ಹಿಂದೆ ತಹಶೀಲ್ದಾರರಿಗೆ ಇತ್ತು. ಹೀಗಾಗಿ ಮೊದಲಿದ್ದಂತೆ ಹೊಲದ ದಾರಿ ಸಮಸ್ಯೆ ಪರಿಹಾರದ ಅಕಾರವನ್ನು ತಹಶೀಲ್ದಾರರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಇದಲ್ಲದೇ ರಾಜ್ಯಾದ್ಯಂತ ಜಮೀನುಗಳನ್ನು ಪುನಃ ಮೋಜಣಿ ಮಾಡಿಸಿ ಹದ್ದಿ ಗುರುತಿಸಬೇಕು. ಇದರಿಂದ ಖರಾಬು ಕ್ಷೇತ್ರ ಗುರುತಿಸಿ ಅದನ್ನೇ ವಹಿವಾಟು ದಾರಿ ಎಂದು ಪರಿಗಣಿಸಬೇಕು. ಖರಾಬು ಕ್ಷೇತ್ರವಿಲ್ಲದ ಜಮೀನುಗಳಲ್ಲಿ ತಹಶೀಲ್ದಾರರು ಇಜಿಲೆಂಟ್‌ ಕಾಯ್ದೆ ಒಳಗಡೆ ದಾರಿ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ರೈತರ ಸಮಸ್ಯೆ ಆಲಿಸಿದ ಕಂದಾಯ ಸಚಿವ ಆರ್‌.ಅಶೊಕ, ರೈತರ ಜಮೀನು ದಾರಿ ಸಮಸ್ಯೆ ಸರ್ಕಾರದ ಗಮನಕ್ಕಿದ್ದು ಇದು ರಾಜ್ಯಾದ್ಯಂತ ರೈತರಿಗೆ ತೀವ್ರ ಸಮಸ್ಯೆಯಾಗಿದೆ. ಆದ್ದರಿಂದ ಶೀಘ್ರದಲ್ಲಿ ದಾರಿ ಸಮಸ್ಯೆ ಇತ್ಯರ್ಥಪಡಿಸಲು ಜಮೀನು ಮೋಜಣಿ ಮಾಡಿಸುವುದಾಗಿ ಭರವಸೆ ನೀಡಿದರು. ಸದಾಶಿವ ಬರಟಗಿ, ಹೊನಕೇರೆಪ್ಪ ತೆಲಗಿ, ಚಂದ್ರಾಪ ಹಿಪ್ಪಲಿ, ಶಕೀಲದಾರ ಕರ್ಜಗಿ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.