ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಗೆ ಗಾಯ


Team Udayavani, Jun 11, 2022, 4:38 PM IST

21school

ಮುದ್ದೇಬಿಹಾಳ: ತಾಲೂಕಿನ ಹಡಲಗೇರಿ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಾರಿಡಾರ್‌ನ ಮೇಲ್ಛಾವಣಿಯ ಸಿಮೆಂಟ್‌ ಕಾಂಕ್ರೀಟ್‌ ಪದರು ಉದುರಿ ಬಿದ್ದು ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಇನ್ನುಳಿದ ವಿದ್ಯಾರ್ಥಿಗಳು ಆಶ್ವರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ನಡೆದಿದೆ.

ಶಾಲೆಯ ವಿಶ್ರಾಂತಿ ಸಮಯದಲ್ಲಿ ನಡೆದ ಈ ಘಟನೆಯಿಂದ 5ನೇ ತರಗತಿಯ ವಿದ್ಯಾರ್ಥಿನಿ ಗಂಗಾ ಚಲವಾದಿ ಎಂಬಾಕೆಯ ಕಾಲಿನ ಬೆರಳುಗಳ ಮೇಲೆ ಸಿಮೆಂಟ್‌ ಕಾಂಕ್ರೀಟ್‌ ಪದರು ಬಿದ್ದಿದ್ದರಿಂದ ಆಕೆಯ ಎರಡು ಕಾಲ್ಬೆರಳ ಎಲುಬಿನಲ್ಲಿ ಸ್ವಲ್ಪ ಪ್ರಮಾಣದ ಕ್ರ್ಯಾಕ್‌ ಕಂಡು ಬಂದಿದೆ. ತಕ್ಷಣವೇ ಶಿಕ್ಷಕರು ಆಕೆಯನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ದೊರಕಲು ನೆರವಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿಶ್ರಾಂತಿಗೆ ಬಿಟ್ಟ ಸಮಯ ಎಲ್ಲ ವಿದ್ಯಾರ್ಥಿಗಳು ತರಗತಿಗಳಿಂದ ಹೊರಗೆ ಬಂದಿದ್ದಾರೆ. ಛಾವಣಿಯ ಸಿಸಿ ಪದರು ಕುಸಿದು ಬಿದ್ದ ಜಾಗದಿಂದ ಎಲ್ಲರೂ ಸ್ವಲ್ಪ ದೂರ ಬಂದಾಗ ಏಕಾಏಕಿ ಧಡ್‌ ಧಡ್‌ ಸದ್ದು ಕೇಳಿಬಂದಿದೆ. ಹಿಂತಿರುಗಿ ನೋಡಿದಾಗ ಛಾವಣಿ ಸಿಸಿ ಪದರು ಗಟ್ಟಿ ತುಂಡುಗಳು ನೆಲಕ್ಕೆ ಬಿದ್ದಿರುವುದು ಕಂಡು ಬಂದಿದೆ. ವಿದ್ಯಾರ್ಥಿನಿ ಗಂಗಾ ಎಲ್ಲರಿಗಿಂತ ಹಿಂದೆ ಇದ್ದುದರಿಂದ ಆಕೆ ಸ್ಥಳದಿಂದ ಬರುವಷ್ಟರಲ್ಲಿ ಈ ಘಟನೆ ನಡೆದಿದ್ದರಿಂದ ಕಾಲಿನ ಪಾದ ಮತ್ತು ಬೆರಳುಗಳ ಮೇಲೆ ಗಟ್ಟಿ ಪದರು ಬಿದ್ದಿದೆ.

ವಿಷಯ ತಿಳಿದು ಎಸ್ಡಿಎಂಸಿ ಅಧ್ಯಕ್ಷ ಮಾಳಪ್ಪ ಹರಿಂದ್ರಾಳ, ಪಾಲಕರು, ಗ್ರಾಮಸ್ಥರು ಶಾಲೆಗೆ ಧಾವಿಸಿ ಶಿಕ್ಷಕನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಶಿಕ್ಷಕರಾದ ಎಂ.ಎಸ್‌.ಪಾಟೀಲ ಮತ್ತಿತರರು ತಕ್ಷಣ ಗಾಯಗೊಂಡಿದ್ದ ವಿದ್ಯಾರ್ಥಿನಿ ಗಂಗಾಳನ್ನು ಆಸ್ಪತ್ರೆಗೆ ಕರೆ ತಂದು ಸಕಾಲಿಕ ಚಿಕಿತ್ಸೆ ದೊರಕಲು ನೆರವಾಗಿದ್ದಾರೆ. ಒಂದು ವೇಳೆ ಸಿಸಿಯ ಗಟ್ಟಿ ಪದರುಗಳು ವಿದ್ಯಾರ್ಥಿಗಳ ತಲೆ ಮೇಲೆ ಬಿದ್ದಿದ್ದರೆ ಪ್ರಾಣಾಪಾಯ ಘಟಿಸುವ ಸಂಭವ ಹೆಚ್ಚಾಗಿತ್ತು ಎಂದು ಪ್ರತ್ಯಕ್ಷದರ್ಶಿ ಶಿಕ್ಷಕರು, ವಿದ್ಯಾರ್ಥಿಗಳು ತಿಳಿಸಿದರು.

ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಗೌಡ ಮಿರ್ಜಿ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಧಾವಿಸಿ ಬಂದರು. ಆದರೆ ಅಷ್ಟರಲ್ಲಾಗಲೇ ಗಾಯಗೊಂಡ ವಿದ್ಯಾರ್ಥಿನಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ಶಿಕ್ಷಕರು, ವೈದ್ಯರಿಂದ ವಿವರ ಪಡೆದುಕೊಂಡು ಶಾಲೆಗೆ ತೆರಳಿ ಘಟನಾ ಸ್ಥಳವನ್ನು ಪರಿಶೀಲಿಸಿದರು. ಇದರೊಟ್ಟಿಗೆ ಇಡಿ ಶಾಲೆಯ ಎಲ್ಲ ಕೊಠಡಿಗಳನ್ನು ಪರಿಶೀಲಿಸಿ ಭಾರಿ ಮಳೆಯ ಪರಿಣಾಮ ಕೆಲವೆಡೆ ಸಿಸಿ ಪದರು ಮೇಲಕ್ಕೆ ಎದ್ದಿದ್ದು ಯಾವುದೇ ಕ್ಷಣದಲ್ಲಾದರೂ ಬೀಳುವ ಸಂಭವ ಹೆಚ್ಚಾಗಿರುವುದನ್ನು ಅರಿತು ಅಂಥ ಸ್ಥಳಗಳ ಕೆಳಗೆ ವಿದ್ಯಾರ್ಥಿಗಳನ್ನು ಕೂಡ್ರಿಸಿ ಪಾಠ ಮಾಡದಂತೆ ಸಲಹೆ ನೀಡಿದರು. ಘಟನೆಯ ಸಮಗ್ರ ವಿವರವನ್ನು ಮೇಲಧಿಕಾರಿಗಳ ಗಮನಕ್ಕೆ ತಂದರು.

ಗಾಯಗೊಂಡಿರುವ ವಿದ್ಯಾರ್ಥಿನಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಇಲಾಖೆ ವತಿಯಿಂದ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವದಾಗಿ ಪಾಲಕರು, ಶಿಕ್ಷಕರಿಗೆ ಭರವಸೆ ನೀಡಿದರು.

ಶಾಲಾ ಕೊಠಡಿಗಳ ಮೇಲ್ಛಾವಣಿ ದುರಸ್ತಿ ಮಾಡುವ ಕುರಿತು ಶಾಲೆ ಮುಖ್ಯಾಧ್ಯಾಪಕರು ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಒಗೆ ಜೂ. 7ರಂದೇ ಮನವಿ ಸಲ್ಲಿಸಿದ್ದರು. ಶಾಲೆಯಲ್ಲಿ 1-8 ತರಗತಿಯವರೆಗೆ ಸುಮಾರು 350 ಮಕ್ಕಳು ಓದುತ್ತಿದ್ದಾರೆ. ಒಟ್ಟು 9 ಕೊಠಡಿಗಳು ಇವೆ. ಇವುಗಳಲ್ಲಿ 2 ಕೊಠಡಿಗಳ ಮೇಲ್ಛಾವಣಿ ಅಪಾಯದ ಅಂಚಿನಲ್ಲಿದ್ದು ಮಕ್ಕಳ ಪ್ರಾಣಕ್ಕೆ ಅಪಾಯ ಸಂಭವ ಇರುವುದರಿಂದ ಕೂಡಲೇ ಆ ಎರಡು ಕೊಠಡಿಗಳ ಮೇಲ್ಛಾವಣಿಯನ್ನು ತುರ್ತಾಗಿ ದುರಸ್ತಿ ಮಾಡಬೇಕು. ದುರಸ್ತಿ ಆಗುವತನಕ ಮಕ್ಕಳ ಕಲಿಕೆ ಕುಂಠಿತವಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಅಪೂರ್ಣ ಶೌಚಾಲಯವನ್ನೂ ನಿಯಮಾನುಸಾರ ವ್ಯವಸ್ಥಿತ ರೀತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಹೀಗಿದ್ದರೂ ಗ್ರಾಪಂನವರು ಈ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಈ ಘಟನೆಯಿಂದ ಎದ್ದು ಕಾಣುತ್ತದೆ. ಇದಕ್ಕೆ ಪಿಡಿಒ ಅವರನ್ನೇ ಹೊಣೆ ಮಾಡಿ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಗ್ರಾಮಸ್ಥರು, ಪಾಲಕರು ಆಗ್ರಹಿಸಿದ್ದಾರೆ. ಈ ಘಟನೆಯಿಂದ ಶಿಕ್ಷಕರು ಆತಂಕ್ಕೊಳಗಾಗಿದ್ದಾರೆ.

ಇದು ಮೂರನೇ ಪ್ರಕರಣ

ಶಾಲೆಯ ಮೇಲ್ಛಾವಣಿಯ ಸಿಮೆಂಟ್‌ ಕಾಂಕ್ರೀಟ್‌ ಪದರು ಕುಸಿಯುತ್ತಿರುವುದು ಇದು ಮೂರನೇ ಪ್ರಕರಣವಾಗಿದೆ. 2-3 ತಿಂಗಳ ಹಿಂದೆ ಗೆದ್ದಲಮರಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಾರಿಡಾರ್‌ನ ಮೇಲ್ಛಾವಣಿ ಪದರು ಕುಸಿದಿತ್ತು. ಶಿಕ್ಷಕರಿಗೆ ಸಣ್ಣ ಪುಟ್ಟ ಒಳ ಪೆಟ್ಟಾಗಿ ಇಬ್ಬರು ವಿದ್ಯಾರ್ಥಿಗಳ ತಲೆಗೂ ಪೆಟ್ಟಾಗಿತ್ತು. ಮುದ್ದೇಬಿಹಾಳದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಮೇಲ್ಛಾವಣಿ ಪದರು ಕುಸಿದು ಬಿದ್ದು ಅದೃಷ್ಟವಶಾತ್‌ ಮಕ್ಕಳು ಪಾರಾಗಿದ್ದರು. ಹಡಲಗೇರಿಯದ್ದು ಮೂರನೇ ಘಟನೆಯಾಗಿದೆ. ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ದುರಸ್ತಿಗೆ ಬಂದಿರುವ ಕೊಠಡಿಗಳಲ್ಲಿ ತರಗತಿ ನಡೆಸದೆ ಪರ್ಯಾಯ ಸುರಕ್ಷಿತ ಸ್ಥಳಗಳಲ್ಲಿ ತರಗತಿಗಳನ್ನು ನಡೆಸಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇದೀಗ ಮಳೆಗಾಲ ಆಗಿರುವುದರಿಂದ ಅಪಾಯ ಸಂಭವ ಹೆಚ್ಚಾಗಿರುತ್ತದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಶಾಲೆಯ ಜೀರ್ಣಗೊಂಡ ಕೊಠಡಿ ದುರಸ್ತಿಗೆ ಈಗಾಗಲೇ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಇಂಥ ಘಟನೆಗಳು ಮರುಕಳಿಸದಂತೆ ಎಲ್ಲ ಶಿಕ್ಷಕರು, ಮುಖ್ಯಾಧ್ಯಾಪಕರು ಜಾಗ್ರತೆ ವಹಿಸಬೇಕು. ಮಳೆಗಾಲ ಆಗಿರುವುದರಿಂದ ಶಿಕ್ಷಕರು ಸ್ಥಳೀಯ ಪರಿಸ್ಥಿತಿ ಅರಿತು ಮಕ್ಕಳಿಗೆ ತೊಂದರೆ ಆಗದಂತೆ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. -ಹಣಮಂತಗೌಡ ಮಿರ್ಜಿ, ಬಿಇಓ, ಮುದ್ದೇಬಿಹಾಳ

ನಾನು ಕೆಲ ದಿನಗಳ ಹಿಂದೆ ಮುಖ್ಯಾಧ್ಯಾಪಕನಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಶಾಲೆಯ ಮೇಲ್ಛಾವಣಿ ದುರಸ್ತಿ ಮಾಡುವಂತೆ ಕೋರಿ ಗ್ರಾಪಂಗೆ ಪತ್ರ ಬರೆದಿದ್ದೇನೆ. ಹಿಂದಿನ ಮುಖ್ಯಾಧ್ಯಾಪಕರು ಇದನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ನಮ್ಮ ಅದೃಷ್ಟ ಚೆನ್ನಾಗಿದೆ. ಇನ್ನುಳಿದ ಮಕ್ಕಳಿಗೆ ತೊಂದರೆ ಆಗಿಲ್ಲ. ಇನ್ನು ಮುಂದೆ ಎಚ್ಚರಿಕೆಯಿಂದ ತರಗತಿ ನಡೆಸಲು ಶಿಕ್ಷಕರಿಗೆ ಸೂಚಿಸಿದ್ದೇನೆ. -ಡಿ.ಎಸ್‌. ಚಳಗೇರಿ, ಮುಖ್ಯಾಧ್ಯಾಪಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುದ್ದೇಬಿಹಾಳ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.