![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಮಕ್ಕಳ ಕಳ್ಳರ ವದಂತಿ: ಕಂಬಕ್ಕೆ ಕಟ್ಟಿ ಮತ್ತೊಬ್ಬನಿಗೆ ಥಳಿತ
Team Udayavani, Sep 26, 2022, 11:57 AM IST
![ಮಕ್ಕಳ ಕಳ್ಳರ ವದಂತಿ: ಕಂಬಕ್ಕೆ ಕಟ್ಟಿ ಮತ್ತೊಬ್ಬನಿಗೆ ಥಳಿತ](https://www.udayavani.com/wp-content/uploads/2022/09/makkal-620x342.jpg)
ವಿಜಯಪುರ: ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ದಿನೇ ದಿನ ಹೆಚ್ಚುತ್ತಿದೆ. ಉತ್ತರ ಭಾರತ ಮೂಲದವರು ಹಾಗೂ ಅಪರಿಚಿತರನ್ನು ಮಕ್ಕಳ ಕಳ್ಳರೆಂದು ಶಂಕಿಸಿ ಥಳಿಸುವ, ಹಲ್ಲೆ ಮಾಡುವ ಘಟನೆಗಳು ಮುಂದುವರೆದಿವೆ.
ಮಕ್ಕಳ ಕಳ್ಳನೆಂಬ ಶಂಕೆಯಿಂದ ಓರ್ವ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ, ಥಳಿಸಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ಜರುಗಿದೆ.
ಇಟ್ಟಂಗಿಹಾಳ ಗ್ರಾಮದ ಪೂಜಾರ ವಸ್ತಿ ಬಳಿ ಅಪರಿಚಿತ ಯುವಕ ಓಡಾಡುವುದನ್ನು ಗಮನಿಸಿದ ಸ್ಥಳೀಯರು, ಮಕ್ಕಳ ಕಳ್ಳನೆಂಬ ಶಂಕೆಯಿಂದ ಯುವಕನನ್ನು ಹಿಡಿದು ಥಳಿಸಿದ್ದಾರೆ.
ಎಲ್ಲಿಂದ ಬಂದಿದ್ದೀಯಾ? ಎಷ್ಟು ಜನ ಬಂದಿದ್ದೀರಿ ಎಂದು ವಿಚಾರಿಸಿದ ಗ್ರಾಮಸ್ಥರು ಗ್ರಾಮದ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಶಿರಸಿ ನಗರದಲ್ಲಿ ಪ್ರಥಮ ಬಾರಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗಳಿಂದ ರಾತ್ರಿ ಗಸ್ತು!
ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ಓಡಾಡುತ್ತಿದ್ದ ಉತ್ತರ ಭಾರತ ಮೂಲದ ಇಬ್ಬರು ಬರ್ಕಾಧಾರಿ ಮಹಿಳೆಯರು ಸೇರಿದಂತೆ ನಾಲ್ವರನ್ನು ಸೆರೆ ಹಿಡಿದು, ಥಳಿಸಿದ್ದರು.
ಈ ಘಟನೆ ಹಸಿರಾಗಿರುವಾಗಲೇ ಇದೀಗ ಇಟ್ಟಂಗಿಹಾಳ ವಸ್ತಿಯಲ್ಲಿ ವದಂತಿಯ ಥಳಿತದ ಮತ್ತೊಂದು ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.