ಸಾತಪುರ: ಕಲುಷಿತ ನೀರು ಕುಡಿದು 35 ಜನರು ಅಸ್ವಸ್ಥ
Team Udayavani, Jul 4, 2022, 5:50 PM IST
ಇಂಡಿ: ಪಟ್ಟಣದ ಪುರಸಭೆ ಅಧೀನದಲ್ಲಿರುವ ಸಾತಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಸುಮಾರು 35ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ರವಿವಾರ ನಡೆದಿದೆ.
ಬಹುತೇಕರು ಅಶಕ್ತಿ, ವಾಂತಿ, ಭೇದಿಯಿಂದ ಬಳಲುತ್ತಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪುರಸಭೆ ನೀರು ಸರಬರಾಜು ಮಂಡಳಿಯವರು ಗ್ರಾಮಕ್ಕೆ ಭೇಟಿ ನೀಡಿದ್ದು ಇಂಡಿ ಪಟ್ಟಣಕ್ಕೆ ಮತ್ತು ಸಾತಪುರ ಗ್ರಾಮಕ್ಕೆ ಒಂದೇ ನೀರು ಸರಬರಾಜು ಆಗುತ್ತದೆ. ಅದಲ್ಲದೆ ಕೆಲವೇ ದಿನಗಳ ಹಿಂದೆ ಸಾತಪುರದಲ್ಲಿರುವ ನೀರಿನ ಓವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾತಪುರ ಗ್ರಾಮಕ್ಕೆ ಆಂಬ್ಯುಲೆನ್ಸ್ ಕಳುಹಿಸಿ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾದೆ ಎಂದು ಆಸ್ಪತ್ರೆ ವೈದ್ಯಾ ಧಿಕಾರಿ ಡಾ| ರಾಜೇಶ ಕೋಳೆಕರ ತಿಳಿಸಿದ್ದಾರೆ. ಶಾಸಕ ಯಶವಂತರಾಯಗೌಡ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಡಾ| ಕಲ್ಲೇಶಿ ಭಜಂತ್ರಿ, ಡಾ| ಪವಾರ, ಡಾ| ಬಾಗವಾನ, ಡಾ| ವಿಫುಲ್ ಕೋಳೆಕರ ರೋಗಿಗಳ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. 35 ಜನರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ರಾಜೇಶ ಕೋಳೆಕರ ತಿಳಿಸಿದ್ದಾರೆ. ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪುರಸಭೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ