ನಿಸ್ವಾರ್ಥ ಪೌರ ಸೈನಿಕರಿಗೊಂದು ಸಲಾಮ್‌


Team Udayavani, Mar 29, 2020, 2:47 PM IST

ನಿಸ್ವಾರ್ಥ ಪೌರ ಸೈನಿಕರಿಗೊಂದು ಸಲಾಮ್‌

ಸಾಂದರ್ಭಿಕ ಚಿತ್ರ

ವಿಜಯಪುರ: ಜಗತ್ತನ್ನೇ ತಳ್ಳಣಗೊಳಿಸಿರುವ ಕೋವಿಡ್‌-19 ಹೆಸರಿನ ವೈರಸ್‌ ನಿಗ್ರಹಕ್ಕಾಗಿ ರವಿವಾರದಿಂದ ದೇಶವೇ ಸ್ತಬ್ಧವಾಗಿದೆ.

ಈ ಹಂತದಲ್ಲಿ ಐತಿಹಾಸಿಕ ಪ್ರವಾಸಿಗರ ತಾಣ ಎನಿಸಿರುವ ವಿಜಯಪುರ ಮಹಾನಗರದಲ್ಲಿ ಕೋವಿಡ್‌-19 ರೋಗದ ವಿರುದ್ಧದ ಹೋರಾಟದಲ್ಲಿ ಪಾಲಿಕೆ ಪೌರ ಕಾರ್ಮಿಕರು ಸೈನಿಕರಂತೆ ಜೀವದ ಹಂಗುತೊರೆದು ಸ್ವಚ್ಛತೆಗೆ ಮುಂದಾಗಿದ್ದಾರೆ.

ಕೋವಿಡ್‌-19  ಹರಡದಂತೆ ತಡೆಯಲು ದೇಶದ ಜನರು 21 ದಿನ ತಾವು ಇದ್ದ ಸ್ಥಳದಿಂದ ಹೊರ ಬರದೇ ಅಲ್ಲಿಯೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ “ಲಾಕ್‌ಡೌನ್‌’ ಆದೇಶ ಹೊರಡಿಸಿದ್ದಾರೆ. ಸಹಜವಾಗಿ ಈ ಆದೇಶ ಜಿಲ್ಲೆಯಲ್ಲೂ ಜಾರಿಯಲ್ಲಿದೆ. ಜಿಲ್ಲೆಯ ಜನರು ಮನೆಗಳಿಂದ ಹೊರ ಬಂದು ರಸ್ತೆಗೆ ಇಳಿಯದಂತೆ ಪೊಲೀಸರು ಕಣ್ಗಾವಲು ಕಾಯಲು ಕಾಯುತ್ತಿದ್ದಾರೆ. ಮತ್ತೂಂದೆಡೆ ರೋಗ ಬಾಧೆ ಹರಡದಂತೆ ತಡೆಯಲು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಮಲೀನ ಇರುವ ಪ್ರದೇಶಗಳಿಗೆ ನುಗ್ಗಿ ಸ್ವಚ್ಛತೆಗೆ ಮುಂದಾಗಿದ್ದಾರೆ.

ದೇಶದಲ್ಲಿ ಎಂಥದ್ದೇ ಕಠಿಣ ಸಂದರ್ಭದಲ್ಲಿ ಸೈನಿಕರು ದೇಶದ ಗಡಿಯಲ್ಲಿ ವೈರಿಗಳ ವಿರುದ್ಧ ಹೋರಾಟಕ್ಕೆ ಮಾತ್ರವಲ್ಲ ದೇಶದೊಳಗೂ ಜನರ ರಕ್ಷಣೆಗೆ ಮುಂದಾಗುತ್ತಾರೆ. ಪೌರ ಕಾರ್ಮಿಕರು ಕೂಡ ಎಷ್ಟೇ ಮಾರಕ ಸಾಂಕ್ರಾಮಿಕ ರೋಗ ಹರಡಿಕೊಂಡರೂ ತಮ್ಮ ಜೀವದ ಹಂಗು ತೊರೆದು ರೋಗ ತವರು ಎನಿಸಿದ ಕೊಳಕು ಪ್ರದೇಶಗಳಿಗೆ ತೆರಳಿ ಸ್ವತ್ಛತೆಗೆ ಮುಂದಾಗುತ್ತಾರೆ.

ನಗರದ ಬೀದಿಬದಿ ಗೂಡಿಸುವ ಜತೆಗೆ ಮನೆ ಮನೆಗೆ ತೆರಳಿ ಟಂಟಂ ಮೂಲಕ ಕಸ ಸಂಗ್ರಹದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹ್ಯಾಂಡ್‌ಗ್ಲೌಸ್‌, ವಿಶೇಷ ಮಾಸ್ಕ್, ಜಾಕೆಟ್‌ ಹೊರತಾಗಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಇಂಥ ಕೊರತೆಗಳ ಮಧ್ಯೆ, ಅಲ್ಪ ಸಂಬಳ ಪಡೆದರೂ ಮಹಾನಗರ ಪಾಲಿಕೆಯ 530 ಪೌರಕಾರ್ಮಿಕರು ಸೈನಿಕರಂತೆ ದೇಶದ ವೈರಿ ಎನಿಸಿರುವ ಕೋವಿಡ್‌-19  ವಿರುದ್ಧ ಹೋರಾಟದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ.

ಇನ್ನು ರೋಗ ಸೋಂಕು ಹರಡದಂತೆ ಕಳೆದ ಎರಡು ದಿನಗಳಿಂದ ನಗರ ಸಾರ್ವಜನಿಕ ಸ್ಥಳಗಳಲ್ಲಿ ರಸಾಯನಿಕ ಮಿಶ್ರಣದ ಕ್ರಿಮಿನಾಶಕ ಸಿಂಪರಣೆಗೆ ಮುಂದಾಗಿದ್ದಾರೆ. ಈ ಮಹತ್ಕಾರ್ಯದ ಮುಂಚೂಣಿಯಲ್ಲಿ ನಿಂತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗೂ ಪೌರ ಕಾರ್ಮಿಕರು ಸಹಕಾರ ನೀಡುತ್ತಿದ್ದಾರೆ. ಬಸ್‌ ನಿಲ್ದಾಣ, ಜಿಲ್ಲಾ ಧಿಕಾರಿ ಕಚೇರಿ, ಮಹಾತ್ಮಾ ಗಾಂಧಿಧೀಜಿ ವೃತ್ತ, ಎಲ್‌.ಬಿ.ಶಾಸ್ತ್ರೀ ಮಾರುಕಟ್ಟೆ ಪ್ರದೇಶ, ಶ್ರೀ ಸಿದ್ದೇಶ್ವರ ದೇವಾಲಯ ಮಾರ್ಗ ಹಾಗೂ ವಿವಿಧ ಮಾರ್ಗಗಳಲ್ಲಿ ಇರುವ ಖಾಸಗಿ ವಾಣಿಜ್ಯ ಸಂಕಿರಣಗಳಿಗೆ ಕ್ರಿಮಿನಾಶಕ ಸಿಂಪಡಣೆಗೆ ಮುಂದಾಗಿದ್ದಾರೆ.

ನಮ್ಮ ಜೀವಕ್ಕಿಂತ ಜನರ ಜೀವ ಮುಖ್ಯ ಎಂದು ರೋಗಕಾರಕ ಪ್ರದೇಶದಲ್ಲಿ ಕೆಲಸ ಮಾಡುವ ನಮ್ಮ ಬದುಕು ದುಸ್ತರವಾಗಿದೆ. ಸರ್ಕಾರ ಪೌರ ಕಾರ್ಮಿಕರ ಗೌರಯುತ ಬದುಕಿಗೆ ಆಸರೆಯಾಗಲಿ. –ಹೆಸರು ಹೇಳಲು ಇಚ್ಛಿಸದ,ಪೌರಕಾರ್ಮಿಕ

 

 

-ಜಿ.ಎಸ್‌.ಕಮತರ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.