ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ ಚಾಲನೆ


Team Udayavani, Feb 4, 2020, 12:38 PM IST

vp-tdy-1

ವಿಜಯಪುರ: ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣ ನಿರ್ಮಿಸಿದ್ದು ಬೆಂಗಳೂರು ಹೊರತುಪಡಿಸಿ ವಿಜಯಪುರ ನಗರದಲ್ಲಿ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣ ಆರಂಭಿಸಲಾಗಿದೆ. ಇದಲ್ಲದೇ ಭವಿಷ್ಯದಲ್ಲಿ ವಿಜಯಪುರ-ಮುಂಬೈ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸೋಮವಾರ ನರಗದಲ್ಲಿ 1.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ಬಸ್‌ ಕಾರ್ಯಾಚರಣೆಗೆ ಚಾಲನೆ ನೀಡುವ ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜತ್‌, ಸಾತಾರಾ, ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿ ಮೂಲಕ ವಿಜಯಪುರ ನಗರದಿಂದ ನೇರವಾಗಿ ಮುಂಬೈಗೆ ತಲುಪುವ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣಕ್ಕೆ ಸಲ್ಲಿಸಿರುವ ಕೇಂದ್ರ ಸರ್ಕರದ ಪ್ರಸ್ತಾವನೆ ನೀತಿ ಆಯೋಗದ ಮುಂದಿದೆ ಎಂದು ವಿವರಿಸಿದರು.

ಹುಮನಾಬಾದ-ಚಿಕ್ಕೋಡಿ ಮತ್ತು ಚಿತ್ರದುರ್ಗ, ಸೊಲ್ಲಾಪುರ, ಮುಂಬೈ ಹಾಗೂ ವಿಜಯಪುರದಿಂದ ರಿಂಗ್‌ ರಸ್ತೆ ನಿರ್ಮಾಣದ ಪ್ರಸ್ತಾವನೆ ಕೂಡಾ ಕೇಂದ್ರ ಸರ್ಕಾರದ ಮುಂದಿದೆ. ಬರುವ ಮೂರು ವರ್ಷಗಳಲ್ಲಿ ವಿಜಯಪುರ ಆಕರ್ಷಕ ರೀತಿಯಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು. ಸದ್ಯಕ್ಕೆ ಕೇಂದ್ರ ಬಸ್‌ ನಿಲ್ದಾಣ ಒಳಗೊಂಡು 1,473 ಬಸ್‌ಗಳ ಮಾರ್ಗಸೂಚಿ ಇದ್ದು 573 ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ ಸ್ಥಳಾಂತರಗೊಳ್ಳಲಿವೆ. ಆರಂಭಿಕವಾಗಿ 233 ಬಸ್‌ಗಳು ಅಥಣಿ ಮಾರ್ಗದಲ್ಲಿ ಮಾರ್ಗಸೂಚಿಗಳನ್ನು ನಿಗದಿಪಡಿಸಿವೆ.

ನಗರದ ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ನಗರದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಣ, ಅಪಘಾತ ನಿಯಂತ್ರಣ, ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸಹಕಾರಿಯಾಗಲಿದ್ದು, ಪ್ರತಿ 5 ನಿಮಿಷಕ್ಕೊಮ್ಮೆ ಬಸ್‌ ಗಳ ವ್ಯವಸ್ಥೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ವಿಜಯಪುರಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಸುಮಾರು 500 ಕೋಟಿ ರೂ. ಕಾಮಗಾರಿಗಳಿಗೆ ವೇಗ ದೊರೆಯಲಿದೆ ಎಂದು ವಿವರಿಸಿದರು.

ಬಸ್‌ಗಳಿಗೆ ಚಾಲನೆ ನೀಡಿದ ಮೇಲ್ಮನೆ ಸದಸ್ಯ ಸುನೀಲಗೌಡ ಪಾಟೀಲ, ನಗರದಲ್ಲಿ ಸ್ಯಾಟ್‌ ಲೈಟ್‌ ಬಸ್‌ ನಿಲ್ದಾಣ ಅತ್ಯಂತ ವೇಗವಾಗಿ ನಿರ್ಮಾಣವಾಗುವಲ್ಲಿ ವಿಶೇಷ ಕಾಳಜಿ ವಹಿಸಿರುವ ಶಾಸಕ ಬಸನಗೌಡ ಪಾಟೀಲ ಅವರ ಪರಿಶ್ರಮ ದೊಡ್ಡದಿದೆ. ಮುಖ್ಯಮಂತ್ರಿಗಳ ನಿಧಿ ಯಿಂದ 1ಕೋಟಿ ರೂ., ನಗರ ಶಾಸಕರ ನಿಧಿ ಯಿಂದ 25 ಲಕ್ಷ ರೂ., ನನ್ನ ಶಾಸಕ ನಿಧಿ ಯಿಂದ 32 ಲಕ್ಷ ರೂ. ಅನುದಾನ ಪಡೆದು ಈ ಬಸ್‌ ನಿಲ್ದಾಣ ಅಭಿವೃದ್ಧಿ ಪಡಿಸಿದೆ ಎಂದು ವಿವರಿಸಿದರು.

ನಗರದಲ್ಲಿ ಐತಿಹಾಸಿಕ ಪ್ರಸಿದ್ಧವಾದ ನೂರಾರು ಸ್ಮಾರಕಗಳಿದ್ದು, ಪ್ರವಾಸೊಧ್ಯಮ ಹಾಗೂ ಉದ್ಯೋಗ ಸೃಷ್ಟಿಗಾಗಿ ನಗರದಲ್ಲಿ ಮೂಲಸೌಕರ್ಯ ಸೃಜನೆಗೆ ರಸ್ತೆ, ಸಂಚಾರ ದಟ್ಟಣೆ, ಬಸ್‌ ನಿಲ್ದಾಣಗಳ ಸುಧಾರಣೆ ಆಗುವ ತುರ್ತು ಅವಶ್ಯಕತೆ ಇದೆ. ನಿತ್ಯ ನಗರಕ್ಕೆ ಆಗಮಿಸುವ 1,500 ಬಸ್‌ಗಳಲ್ಲಿ 200 ಬಸ್‌ಗಳು ಈ ಬಸ್‌ ನಿಲ್ದಾಣದ ಮೂಲಕ ಸಂಚಾರ ನಡೆಸುವುದರಿಂದ ಸಂಚಾರ ವ್ಯವಸ್ಥೆ ಸುಧಾರಣೆಗೊಳ್ಳಲಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ, ಎಎಸ್ಪಿ ರಾಮ್‌ ಅರಿಸಿದ್ದಿ, ಕಲಬುರಗಿ ರಸ್ತೆ ಸಾರಿಗೆ ಸಂಸ್ಥೆ ಕಾರ್ಯನಿರ್ವಾಹಕ ಅಭಿಯಂತರ ಮೆಹಬೂಬ್‌, ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗೀಯ ನಿಯಂತ್ರಣಾ ಧಿಕಾರಿ ಗಂಗಾಧರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.