ದೇಶಿ ಗೋವು ಉಳಿಸಿ: ಗೋಯೆಂಕಾ


Team Udayavani, Aug 5, 2018, 5:57 PM IST

poombe_0.jpg

ಆಲಮಟ್ಟಿ: ಸುಕ್ಷೇತ್ರ ಯಲಗೂರ ಗ್ರಾಮದಲ್ಲಿರುವ ಉತ್ತರಾದಿ ಮಠದ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರದಲ್ಲಿ ಬಿಜೆಪಿಯ ರಾಜ್ಯ ಗೋ ಪ್ರಕೋಷ್ಠದ ಸಂಚಾಲಕ ಸಿದ್ದಾರ್ಥ ಗೋಯೆಂಕಾ ಅವರ ನೇತೃತ್ವದಲ್ಲಿ ಸ್ವತ್ಛತಾ ಅಭಿಯಾನ
ನಡೆಯಿತು. 

ಶನಿವಾರ ಬೆಳಗ್ಗೆ ಯಲಗೂರದಲ್ಲಿರುವ ಗೋ ಸಂರಕ್ಷಣಾ ಕೇಂದ್ರಕ್ಕೆ ವಿಜಯಪುರ ಜಿಲ್ಲಾ ಘಟಕ, ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕಿನ ವಿವಿಧ ಮಂಡಲಗಳ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿ ಸ್ವತ್ಛತಾ ಕಾರ್ಯ ನಡೆಸಿ ಸರ್ಕಾರದ ವಿಶೇಷ ಯೋಜನೆಯಾದ ಪಶು ಆರೋಗ್ಯ ಚೀಟಿ-ನಕುಲ ಸ್ವಾಸ್ಥÂ ಪತ್ರವನ್ನು ಗೋ
ಸಂರಕ್ಷಣಾ ಕೇಂದ್ರದ ಮುಖ್ಯಸ್ಥರಿಗೆ ನೀಡುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದ ಗೋಯೆಂಕಾ, ಅಪರೂಪದ ದೇಶಿ ಗೋ ಸಂತತಿ ಅಳಿವನಂಚಿನಲ್ಲಿದೆ. ಇದರಿಂದ ರೈತ ವರ್ಗಕ್ಕೆ ಹಲವಾರು ತೊಂದರೆಗಳಾಗುತ್ತಿದ್ದು ಅದರ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ದೇಶಿ ಹಸುಗಳ ಹಾಲಿನಲ್ಲಿ ಡಯಾಬಿಟಿಸ್‌ ಸೇರಿದಂತೆ ಹಲವಾರು ರೋಗಗಳ ನಿಯಂತ್ರಣ ಹಾಗೂ ತೊಲಗಿಸುವ ಶಕ್ತಿಯಿದೆ. ಅಲ್ಲದೇ ಹಸುವಿನ ಹಾಲಿನಲ್ಲಿ ವಿಶೇಷ ಗುಣಗಳಿರುವುದರಿಂದ ಹಿಂದಿನಿಂದಲೂ ನಮ್ಮ ಪೂರ್ವಜರು ಗೋ ಸಾಕಣೆ ಮಾಡಿಕೊಂಡು ಅದರ ಹಾಲು, ಮೂತ್ರ, ಸೆಗಣಿ ಎಲ್ಲವುಗಳನ್ನು ವಿವಿಧ ರೀತಿಯಲ್ಲಿ ಬಳಸಿಕೊಂಡು ಬಂದಿದ್ದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿತ್ತು ಎಂದರು.

ಮುದ್ದೇಬಿಹಾಳ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮಾತನಾಡಿ, ಮುದ್ದೇಬಿಹಾಳ ಕ್ಷೇತ್ರ ನದಿ ತೀರ ಹಾಗೂ ವಿವಿಧ ಮೂಲಗಳಿಂದ ಬಹುತೇಕ ನೀರಾವರಿಗೊಳಪಟ್ಟದ್ದು ಗೋ ಸಾಕಣೆಯನ್ನು ಈ ಭಾಗದಲ್ಲಿ ರೈತರು ಮಾಡುತ್ತಿದ್ದಾರೆ. ಇನ್ನಷ್ಟು ಅವರಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮ ಹಾಕಿಕೊಂಡು ಒಂದು ವರ್ಷಕ್ಕೆ ಒಂದು ಸಾವಿರದಂತೆ ಐದು ವರ್ಷದಲ್ಲಿ ಐದು ಸಾವಿರ ಗೋ ಸಾಕಣೆಗೆ ವಿಶೇಷ ಆದ್ಯತೆ ನೀಡಲಾಗುವುದು. ಹಿಂದಿನಿಂದಲೂ ನಮ್ಮ ಜನ
ಪ್ರಯೋಜನ ಪಡೆಯುತ್ತಿದ್ದು ಇನ್ನೂ ಅದರ ಬಗ್ಗೆ ಹೆಚ್ಚು ಅಧ್ಯಯನವನ್ನು ಇತ್ತೀಚೆಗೆ ಕೆಲವರು ನಡೆಸಿದ್ದಾರೆ. ಆ ಕುರಿತೂ ಕೂಡ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಈಗಾಗಲೇ ನಮ್ಮ ಜಮೀನಿನಲ್ಲಿ 180 ಹಸು ಸಾಕಣೆ ಮಾಡಲಾಗಿದೆ. ಈ ಭಾಗದಲ್ಲಿ ಕೆಲವರು ದೇಶಿ ಹಸುಗಳನ್ನು ಸಾಕಣೆ ಮಾಡಿದ್ದಾರೆ. ಅವುಗಳ ಆರೋಗ್ಯ ರಕ್ಷಣೆಗಾಗಿ ನಕುಲ ಸ್ವಾಸ್ಥ ಪತ್ರ ನೀಡುವುದರಿಂದ ಹಸುಗಳ ಆರೋಗ್ಯದ ಬಗ್ಗೆ ಪಶು ಇಲಾಖೆ ವೈದ್ಯರು ಕಾಲ ಕಾಲಕ್ಕೆ ತಪಾಸಣೆ ನಡೆಸುತ್ತಾರೆ. ಈ ಕುರಿತು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಆದ್ದರಿಂದ ರೈತರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಈ ವೇಳೆ ಸಿದ್ದಾರ್ಥ ಗೋಯೆಂಕಾ ಅವರನ್ನು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಸನ್ಮಾನಿಸಿದರು. ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರದ ವತಿಯಿಂದ ಗೋ ಪ್ರಕೋಷ್ಠದ ಪದಾಧಿಕಾರಿಗಳನ್ನು ಹಾಗೂ ಗಣ್ಯರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಜಿಪಂ ಮಾಜಿ ಸದಸ್ಯ ಶಿವಾನಂದ ಅವಟಿ, ವಿನಯ ಶೆಟ್ಟಿ, ಸಾಬು ಮಾಶ್ಯಾಳ, ವಿನಾಯಕ ಗವಳಿ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕಾನಂದ ಡಬ್ಬಿ, ಅಜಿತ ಕುಲಕರ್ಣಿ, ಡಾ| ಅರವಿಂದ ಡಾಣಕಶಿರೂರ, ಗದ್ದೆಪ್ಪ ಮಾದರ, ಬಸವರಾಜ ಕುಂಬಾರ, ಎಸ್‌. ಎಸ್‌. ಅರಮನಿ, ವಿಜಯ ಜೋಶಿ, ಎನ್‌.ಎ. ಪಾಟೀಲ ಮೊದಲಾದವರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.