ಉದ್ಯೋಗ ನೀತಿ ವಿರುದ್ಧ ಎಐಡಿಎಒ ಕಾರ್ಯಕರ್ತರ ತೀವ್ರ ಆಕ್ರೋಶ

ಅಜಾನ್‌ ಆಯ್ತು, ಇದೀಗ ಮಂದಿರ-ಮಸೀದಿ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ನಡೆಯುತ್ತಿವೆ

Team Udayavani, Jun 28, 2022, 6:17 PM IST

ಉದ್ಯೋಗ ನೀತಿ ವಿರುದ್ಧ ಎಐಡಿಎಒ ಕಾರ್ಯಕರ್ತರ ತೀವ್ರ ಆಕ್ರೋಶ

ವಿಜಯಪುರ: ಯುವಜನತೆಗೆ ಮಾರಕವಾಗುವ ರೀತಿಯಲ್ಲಿ ಉದ್ಯೋಗ ಯೋಜನೆ ಜಾರಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತವೆ ಎಂದು ಆರೋಪಿಸಿ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಿತು. ನಗರದ ಹುತಾತ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು ಉದ್ಯೋಗ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಕೇಂದ್ರ ಸರ್ಕಾರಗಳು ಬಂಡವಾಳಶಾಹಿಗಳನ್ನು ಖುಷಿ ಪಡಿಸುವ ದೃಷ್ಟಿಯಿಂದ ಯುವ ಜನರಿಗೆ ಮಾರಕವಾಗುವ ಉದ್ಯೋಗ ನೀತಿಯನ್ನು ರೂಪಿಸುತ್ತಿವೆ. ಅಗ್ನಿಪಥ ಹೆಸರಿನ ಯೋಜನೆಯನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರ ಸೈನ್ಯ ಸೇರುವ ಲಕ್ಷಾಂತರ ಯುವಕರ ಕನಸುಗಳಿಗೆ ತಣ್ಣೀರೆರೆಚುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಅನೇಕ ಅವೈಜ್ಞಾನಿಕ ನೀತಿಯಿಂದ ಆರ್ಥಿಕ ಕುಸಿತ ಕಂಡು ಗುಡಿ ಕೈಗಾರಿಕೆಗಳು ಕಣ್ಮುಚ್ಚಿವೆ, ಇದರೆಲ್ಲದರ ಪರಿಣಾಮವಾಗಿ ಲಕ್ಷಾಂತರ ಯುವಕರು ತಮ್ಮ ಕೆಲಸ ಕಳೆದುಕೊಳ್ಳುವಂತಾಗಿದೆ ಎಂದು ಅಸಮಾಧಾನ ಹೊರ ಹಾಕಿದರು. ಬೆಲೆ ಗಗನ ಚುಂಬಿಯಾದರೆ ಆದಾಯ ಪಾತಾಳಕ್ಕೆ ತಲುಪಿದೆ. ನಿರುದ್ಯೋಗಿ ಯುವಕರ ಪಾಡು ಅಯೋಮಯವಾಗಿದೆ.

ಇಂತಹ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಂಭ್ರಮ ಎನ್ನುವುದು ಕೇವಲ ಉಳ್ಳವರ ಸಂಭ್ರಮ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. 2022 ಮಾರ್ಚ್‌ನಲ್ಲಿ ನಿರುದ್ಯೋಗದ ಪ್ರಮಾಣ ಶೇಕಡ 7.60 ಇದ್ದರೆ, ಏಪ್ರಿಲ್‌ ತಿಂಗಳಿನಲ್ಲಿ ಶೇ.7.83ಕ್ಕೆ ಏರಿದ ಕುರಿತು ಸಿಎಂಐಇ ವರದಿ ಹೇಳುತ್ತದೆ. ಇನ್ನೂ ಹೊಸದಾಗಿ ಉದ್ಯೋಗ ಹುಡುಕಿ ಹೊರಡುವ ಲಕ್ಷಾಂತರ ಯುವಕರನ್ನು ಇದರಲ್ಲಿ ಪರಿಗಣನೆಗೇ ತೆಗೆದುಕೊಂಡಿಲ್ಲ. ಈ ಅಂಕಿ ಅಂಶಗಳು ನಿರುದ್ಯೋಗವು ರಾಕೆಟ್‌ ವೇಗದಲ್ಲಿ ಬೆಳೆಯುತ್ತಲೇ ಸಾಗಿರುವುದನ್ನು ತೋರಿಸುತ್ತವೆ ಎಂದರು.

ಶರಣು ಗಡ್ಡಿ ಮಾತನಾಡಿ, ಕೋವಿಡ್‌ ಸಂಕಟದ ಬಳಿಕ ಬದುಕನ್ನು ಕಟ್ಟಿಕೊಳ್ಳಲು ಪರದಾಡುವ ಜನರ ನಡುವೆ ಜಾತಿ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ವಿವಿಧ ಕೋಮುಗಳ ನಡುವೆ ಉದ್ವಿಗ್ನತೆ ಹುಟ್ಟು ಹಾಕಲಾಗುತ್ತಿದೆ. ಶಾಲಾ-ಕಾಲೇಜಿನ ಮಕ್ಕಳ ನಡುವೆ ಧರ್ಮದ ಹೆಸರಿನಲ್ಲಿ ವಿಷ ಬೀಜ ಬಿತ್ತುವ ಪ್ರಯತ್ನಗಳು ನಡೆಯುತ್ತಿವೆ. ಹಿಜಾಬ್‌, ಜಟ್ಕಾ ಕಟ್‌- ಹಲಾಲ್‌ ಕಟ್‌, ಅಜಾನ್‌ ಆಯ್ತು, ಇದೀಗ ಮಂದಿರ-ಮಸೀದಿ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ನಡೆಯುತ್ತಿವೆ ಎಂದು ದೂರಿದರು.

ಒಂದಾದ ನಂತರ ಒಂದರಂತೆ ಸಮಾಜದಲ್ಲಿ ಜನರ ಮನಸ್ಸುಗಳನ್ನು ಒಡೆಯುವ ವಿಷಯಗಳನ್ನೇ ಪ್ರಚೋದಿಸಿ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡುತ್ತಿವೆ. ಕೋಮು ದೃವೀಕರಣ ಮಾಡಿ ಚುನಾವಣೆ ಗೆಲ್ಲುವ ಹುನ್ನಾರ ನಡೆಯುತ್ತಿದೆ. ಹೀಗಾಗಿ ಜನರು ಕೋಮು ಭಾವನೆ ಕೆರಳಿಸುವ ಹುನ್ನಾರಕ್ಕೆ ಬಲಿಯಾಗದೇ ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳುವ ಮೂಲಕ ಸೂಕ್ತ ಉತ್ತರ ನೀಡಿದ್ದಾರೆ ಎಂದು ವಿಶ್ಲೇಷಿಸಿದರು. ಎಐಡಿವೈಒ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಅನುರಾಗ ಸಾಳುಂಕೆ, ಸೋಮು ಮಡ್ಡಿ, ಸಯ್ಯದ್‌, ಕಲ್ಮೇಶ, ಪ್ರದೀಪ, ದೇವರಾಜ್‌ ಕೊಪ್ಪಳ, ಸಂದೀಪ ಜಾಧವ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.