ಶಾ, ರಾಹುಲ್ ಯಾರೇ ಬಂದ್ರೂ ಭಯವಿಲ್ಲ: HDD
Team Udayavani, Aug 21, 2017, 8:24 AM IST
ವಿಜಯಪುರ: ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾರೇ ಬಂದು ಹೋದರೂ ನಮಗೇನೂ ಭಯವಿಲ್ಲ. ಅವರ ಭೇಟಿಯಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮವಾಗದು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಾಡಿಗೆ ನಾವು ಪಕ್ಷದ ಸಂಘಟನೆ ನಡೆಸಿದ್ದು 120 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿದ್ದೇವೆ. ನಮ್ಮನ್ನು ಕಡೆಗಣಿಸಿದವರಿಗೆ ವಿಧಾನಸಭೆಯ ಕಳೆದ ಎರಡು ಚುನಾವಣೆಯಲ್ಲೇ ರಾಜ್ಯದ ಜನ ಉತ್ತರಿಸಿದ್ದಾರೆ ಎಂದರು. ಪಕ್ಷದ ಸಂಘಟನೆಗಾಗಿ ಈಗಾಗಲೇ ತಲಾ ಐದು ಜಿಲ್ಲೆಗಳ ಹೊಣೆ ನೀಡಿ ಆರು ತಂಡಗಳನ್ನು ರಚಿಸಿದ್ದು, ಹಾಸನ, ರಾಮನಗರ ನಮ್ಮ ಕುಟುಂಬಕ್ಕೆ
ರಾಜಕೀಯ ಜೀವನ ನೀಡಿದ ನೆಲೆಗಳು. ಈ ಹಿಂದೆ ಎರಡು ಕ್ಷೇತ್ರಗಳಲ್ಲಿ ಸ್ಪ ರ್ಧಿಸಿ ಸೋಲು ಅನುಭವಿಸಿದ ಕಹಿ ಅನುಭವ ನನಗಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸುವ ಕುರಿತು ಚಿಂತನೆ, ಚರ್ಚೆ ನಡೆದಿದ್ದರೂ ರಾಮನಗರ ಕ್ಷೇತ್ರ
ತೊರೆಯಲು ಅಲ್ಲಿನ ಜನರಿಗೆ ಕಾರಣ ಕೊಡಬೇಕಾಗುತ್ತದೆ ಎನ್ನುವ ಮೂಲಕ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದ ಸ್ಪರ್ಧೆಯನ್ನು ಅಲ್ಲಗಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್