ಶಿವಬಸವ ಯೋಗಾಶ್ರಮದ ಶಂಭುಲಿಂಗಶ್ರೀ ನಿಧನ
Team Udayavani, Dec 21, 2022, 2:46 PM IST
ವಿಜಯಪುರ: ನಗರದ ಶಿವಬಸವ ಯೋಗಾಶ್ರಮದ ಶಂಭುಲಿಂಗ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ರಾತ್ರಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಸುದ್ದಿ ತಿಳಿಯುತ್ತಲೇ ಆಶ್ರಮದ ಭಕ್ತರು ಬುಧವಾರ ಬೆಳಗ್ಗೆಯಿಂದಲೇ ಆಶ್ರಮಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದರು.
ಶ್ರೀಗಳು ವಿಶೇಷ ಅಧ್ಯಯನ ನಡೆಸಿ, ಪ್ರವಚನಗಳ ಮೂಲಕ ಅಪಾರ ಭಕ್ತರನ್ನು ಸಂಪಾದಿಸಿದ್ದರು. ಕಳೆದ ಕೆಲ ವರ್ಷಗಳಿಂದ ಚಿಂತನ ಗೋಷ್ಠಿ, ಮಾಸಿಕ ಶಿವಾನುಭವ ಗೋಷ್ಠಿ ಗಳಂತ ಕಾರ್ಯಗಳ ಮೂಲಕ ಸಮಾಜದಲ್ಲಿ ವಿಶೇಷವಾಗಿ ಯುವ ಜನರಲ್ಲಿ ನೈತಿಕ ಜೀವನ ಮೌಲ್ಯ ಬಿತ್ತುವ ಕೆಲಸದಲ್ಲಿ ತಮ್ಮನ್ನು ಸಕ್ರಿಯಗೊಳಿಸಿಕೊಂಡಿದ್ದರು.
ನಗರದಲ್ಲಿ ಭಕ್ತರಿಗೆ ಶ್ರೀಗಳ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ, ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಸೇರಿದಂತೆ ಇತರೆ ಗಣ್ಯರು ಶ್ರೀಗಳ ಅಂತಿಮ ದರ್ಶನ ಪಡೆದರು.
ಬಳಿಕ ಶ್ರೀಗಳ ಮೂಲಸ್ಥಳವಾದ ತಾಳಿಕೋಟೆಯ ಬಸವ ನಗರದ ಪೂಜ್ಯರ ಪೂರ್ವಾಶ್ರಮದ ಸ್ವಗೃಹದಲ್ಲಿ ಅಲ್ಲಿನ ಭಕ್ತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳಿಯ ಭಕ್ತರ ದರ್ಶನದ ನಂತರ ಬಳಗಾನೂರ ಕ್ರಾಸ್ ಬಳಿ ಇರುವ ಶ್ರೀಗಳ ತೋಟದಲ್ಲಿ ಅಂತಿಮ ವಿದಾಯ ಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ