ಶರಣರ ವಚನ ಸಾಹಿತ್ಯ ವಿಶ್ವಮಾನ್ಯ

ಶರಣರ ವಚನಗಳು ಹಾಗೂ ಅವರ ಬದುಕಿನ ಹಾದಿ ಮಾದರಿಯಾಗಿದೆ.

Team Udayavani, Mar 5, 2021, 6:29 PM IST

ಶರಣರ ವಚನ ಸಾಹಿತ್ಯ ವಿಶ್ವಮಾನ್ಯ

ವಿಜಯಪುರ: ಜಗತ್ತಿನ ಎಲ್ಲ ವಯಸ್ಕರ ಭೌತಿಕ, ಆಧ್ಯಾತ್ಮಿಕ ಜೀವನದ ವೃತ್ತಿ ರೂಪಿಸುವ ಅತ್ಯಮೂಲ್ಯ ಸಂದೇಶ ಹೊಂದಿರುವ ಶರಣ ಸಾಹಿತ್ಯ ವಿಶ್ವ ಸಾಹಿತ್ಯವಾಗಿದೆ ಎಂದು ಬಬಲೇಶ್ವರ ಬೃಹನ್ಮಠದ ಡಾ| ಮಹಾದೇವ ಶ್ರೀಗಳು ಅಭಿಪ್ರಾಯಪಟ್ಟರು. ಬಬಲೇಶ್ವರ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಯುವ ಘಟಕ ಮತ್ತು ಕದಳಿ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀಗಳು ತೃಪ್ತಿಯೊಂದಿಗೆ ಪ್ರಗತಿ ಸಾಧಿಸುವ ಹಾಗೂ ಸನ್ಮಾರ್ಗ ಬೋಧಿಸುವ ಏಕೈಕ ಸಾಹಿತ್ಯವೇ ವಚನ ಸಾಹಿತ್ಯ. ಜಾಗತಿಕ ಇತಿಹಾಸ ಪರಂಪರೆಯಲ್ಲಿ
ಶ್ರೇಷ್ಠವಾದ ಸಾರ್ಥಕ ಬದುಕನ್ನು ಬಾಳಿ ಬದುಕಿದವರು ಬಸವಾದಿ ಪ್ರಮಥರು. ನಿತ್ಯ ಸತ್ಯದ ಗುರಿಯನ್ನಿಟ್ಟುಕೊಂಡು ಅರ್ಥಪೂರ್ಣ ಬಾಳಿನ ರಹಸ್ಯ ತಮ್ಮ ಬದುಕಿನ ಮೂಲಕ ವಿಶ್ವಕ್ಕೆ ದಾರಿ ತೋರಿದವರು ಶರಣರು ಎಂದರು.

ಶ್ರೀ ಶಾಂತವೀರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಪ್ರೊ| ಮಲ್ಲಿಕಾರ್ಜುನ ಅವಟಿ ಮಾತನಾಡಿ, ಶರಣರು ಅಂದು ನುಡಿದಂತೆ ನಡೆದರು. ಅನುಭವದಿಂದ ಆಡಿದ ಮಾತುಗಳು ವಚನಗಳಾಗಿ ಅಮೃತದಂತ ವಚನ ವಾಣಿಗಳಾದವು. ಶರಣರ ಅನುಭವದ ಮೂಸೆಯಿಂದ ಮೂಡಿ ಬಂದ ಅನುಭಾವದ ರಚನೆಗಳೇ ವಚನ ಸಾಹಿತ್ಯವಾಗಿ ರೂಪುಗೊಂಡಿದೆ. ಸಾತ್ವಿಕ ಜೀವನ ನಡೆಸಿ ಜಗತ್ತಿಗೆ ಮಾದರಿಯಾದ ಶರಣರ ತತ್ವೋಪದೇಶಗಳ ಚಿಂತನ-ಮಂಥನ ಮಾಡುವುದು ಪ್ರಸ್ತುತ ಅಗತ್ಯವಾಗಿದೆ. ವಚನ ಸಾಹಿತ್ಯ ಯುವ ಜನಾಂಗದವರು ಮನ-ಮನೆಗಳಿಗೆ ತಲುಪಿಸುವ ಹೊಣೆ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಅತಿಥಿಗಳಾದ ವಿ.ಎಸ್‌. ಪಾಟೀಲ ಮಾತನಾಡಿ, ವರ್ಣಭೇದ, ವರ್ಗಭೇದ, ಲಿಂಗಭೇದವಿಲ್ಲದ ಸರ್ವಸಮಾನತೆ ಸಮಾಜ ಕಟ್ಟಲು ಪ್ರಯತ್ನಿಸಿದ ಶರಣರು ಕಾಯಕವೇ ಕೈಲಾಸ ಎಂದರು. ಎಲ್ಲ ಕಾರ್ಯಗಳಿಗೂ ಸಮಾನ ಗೌರವ ನೀಡುವ ಅನುಭವ ಮಂಟಪದಲ್ಲಿ ನೂರೊಂದು ವೃತ್ತಿ ಮೂಲದವರನ್ನು ಕೂಡಿಸಿ ಜಾತಿ, ಭೇದ ಅಲ್ಲಗಳೆದವರು. ವ್ಯಕ್ತಿ ಕಲ್ಯಾಣದ ಜೊತೆ ಸಮಾಜ ಕಲ್ಯಾಣ ಶರಣರಿಗೆ ಮುಖ್ಯವಾಗಿತ್ತು ಎಂದರು.

ಸಮಾಜ ಸೇವಕ ಅರ್ಜುನಗೌಡ ದೇವಕ್ಕಿ ಮಾತನಾಡಿ, ಸರಳ ಜೀವನಕ್ಕೆ, ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮವನ್ನು ಸುಲಭವಾಗಿ ಅರ್ಥೈಸಿಕೊಂಡು ಅಳವಡಿಸಿಕೊಳ್ಳಲು ಶರಣರ ವಚನಗಳು ಹಾಗೂ ಅವರ ಬದುಕಿನ ಹಾದಿ ಮಾದರಿಯಾಗಿದೆ. ಇಂತಹ ತತ್ವಗಳನ್ನು ನಿತ್ಯ ಜೀವನದಲ್ಲಿ ರೂಢಿಸಿಕೊಂಡು ಬದುಕು ಸಾರ್ಥಕಗೊಳಿಸಬೇಕು ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್‌ ಯುವ ಘಟಕದ ವೇದಿಕೆ ಅಧ್ಯಕ್ಷರಾಗಿ ಸುರೇಶ ಗೌಡಪ್ಪಗೋಳ ಹಾಗೂ ಕದಳಿ ವೇದಿಕೆ ಅಧ್ಯಕ್ಷರಾಗಿ ಜಯಶ್ರೀ ವೀರನಗೌಡ ಪಾಟೀಲ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಕಾರ್ಯದರ್ಶಿ ರಾಜಶೇಖರ ಉಮರಾಣಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಶರಣ ಸಾಹಿತ್ಯ ಪರಿಷತ್‌ ಬಬಲೇಶ್ವರ ತಾಲೂಕು ಅಧ್ಯಕ್ಷ ಎಲ್‌.ಪಿ. ಬಿರಾದಾರ, ಗ್ರಾಪಂ ಅಧ್ಯಕ್ಷೆ ಬೌರಮ್ಮ ಬೂದಿಹಾಳ, ನಿವೇದಿತಾ ಮರ್ಯಾಣಿ, ಮಲ್ಲು ಕನ್ನೂರ, ಅಮರೇಶ ಸಾಲಕ್ಕಿ, ಎಸ್‌.ಆರ್‌. ತಮಗೊಂಡ, ಕೆ.ಆರ್‌. ಅರಕೇರಿಮಠ, ಎಂ.ಎಸ್‌. ಬಿರಾದಾರ, ಅಪ್ಪಾಸಾಬ ಬಿರಾದಾರ, ಸದಾಶಿವ ಹವಾಲ್ದಾರ, ಗೂಳಪ್ಪ ಯರನಾಳ, ನೀಲಕಮಲ ಪಾಟೀಲ, ಮಹಾದೇವಿ ಜಂಗಮಶೆಟ್ಟಿ ಇತರರು ಇದ್ದರು. ಬಸನಗೌಡ ಬಿರಾದಾರ ಸ್ವಾಗತಿಸಿದರು. ವಜೀರ ಆಲಗೂರ ನಿರೂಪಿಸಿದರು. ಮಲ್ಲಿಕಾರ್ಜುನ ತೊದಲಬಾಗಿ ವಂದಿಸಿದರು.

ಮನಕ್ಕೆ ಮುದ ನೀಡುವ ಸತ್ವಭರಿತ ತತ್ವಗಳು ಇತಿಹಾಸದಲ್ಲಿ ಅತ್ಯಂತ ಸುಲಭದಲ್ಲಿ ಪಚನವಾಗುವ ಶರಣರ ವಚನಗಳು ಅಂದು ಇಂದು ಹಾಗೂ ಎಂದೆಂದಿಗೂ ಪ್ರಸ್ತುತ. ಇದು ಎಲ್ಲರೂ ಒಪ್ಪಿಕೊಳ್ಳಲೇಬೇಕಾದ ವಿಚಾರವಾಗಿದೆ.

ಅಭಿನವ ಮುರುಘೇಂದ್ರ ಶ್ರೀ, ಮಮದಾಪುರ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.