Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ
Team Udayavani, Apr 15, 2024, 6:41 PM IST
ವಿಜಯಪುರ: ನನ್ನ ವಿರುದ್ಧ ಶಿವಾನಂದ ಪಾಟೀಲ ಕ್ಷೇತ್ರ ಮರು ವಿಂಗಡಣೆ ಬಳಿಕ ತಾಕತ್ತಿದ್ದರೆ ಸ್ಪರ್ಧಿಸಲಿ ಎಂದು ಯತ್ನಾಳ ಹೇಳಿದ್ದಾರೆ. ಆದರೆ ಕ್ಷೇತ್ರ ಮರುವಿಂಗಡಣೆವರೆಗೆ ಕಾಯುವುದು ಬೇಡ, ತಾಕತ್ತಿದ್ದರೆ ಈಗಲೇ ನನ್ನ ವಿರುದ್ಧ ಸ್ಪರ್ಧೆಗೆ ಸಿದ್ಧವಾಗಲಿ ಎಂದು ಸಚಿವ ಶಿವಾನಂದ ಪಾಟೀಲ ಪ್ರತಿಸವಾಲು ಹಾಕಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಲೋಕಸಭಾ ಚುನಾವಣೆ ಕ್ಷೇತ್ರ ಮರುವಿಂಡಣೆ ಆಗಲಿದ್ದು, ಆಗ ನನ್ನ ವಿರುದ್ದ ಶಿವಾನಂದ ಪಾಟೀಲ ಗಂಡಸಿದ್ದರೆ ಸ್ಪರ್ಧೆ ಮಾಡಲಿ ಎಂದು ಯತ್ನಾಳ ಹಾಕಿದ ಸವಾಲಿಗೆ ತಿರುಗೇಟು ನೀಡಿದರು.
ಬಸನಗೌಡ ಪಾಟೀಲ ಯತ್ನಾಳ ಯಾವ ರೀತಿ ಬಿಸಿನೆಸ್ ಮಾಡುತ್ತಾರೆ, ಸೌಹಾರ್ದದಲ್ಲಿ ಯಾವ ಬಿಸಿನೆಸ್ ಮಾಡಿದ್ದಾರೆಂದು ಮಾಹಿತಿ ಪಡೆಯಿರಿ ಎಂದ ಸಚಿವ ಶಿವಾನಂದ, ನನ್ನ ವಿರುದ್ಧ ಮಾಡುವ ಅರೋಪಕ್ಕೆ ದಾಖಲೆ ಇದ್ದರೆ ಕೊಡಲಿ ಎಂದರು.
ವಿಜಯಪುರ ನಗರ ಶಾಸಕನಾಗಿ ಯತ್ನಾಳ ಮಾಡಿರುವ ಅಭಿವೃದ್ಧಿ ಏನು ಎಂದು ಪ್ರಶ್ನಿಸಿದ ಶಿವಾನಂದ ಪಾಟೀಲ, ಕೇಂದ್ರದಲ್ಲಿ ಸಚಿವರಾಗಿದ್ದಾಗಲೂ ಯತ್ನಾಳ ಏನೂ ಅಭಿವೃದ್ಧಿ ಮಾಡಲಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ