ಮೋರಟಗಿ ಪೊಲೀಸ್‌ ಠಾಣೆಗೆ ಸಿಬ್ಬಂದಿ ಕೊರತೆ


Team Udayavani, Jan 17, 2022, 6:04 PM IST

20police

ಮೋರಟಗಿ: ಗ್ರಾಮದ ಹೊರ ವಲಯದಲ್ಲಿರುವ ಹೊರ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿಂದ ಪೊಲೀಸರು ಪರದಾಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 218 ಅಪಘಾತ ವಲಯವಾಗಿದ್ದು ದಿನ ನಿತ್ಯ ಒಂದಿಲ್ಲ ಒಂದು ದುರಂತಗಳು ನಡೆಯುತ್ತಿವೆ. ಇದನ್ನು ನಿಭಾಯಿಸುವಲ್ಲಿ ಇಲ್ಲಿರುವ ಮೂವರು ಪೊಲೀಸರು ಕಷ್ಟಪಡುತ್ತಿದ್ದಾರೆ. ಹೀಗಾಗಿ ಈ ಠಾಣೆಗೆ ಇನ್ನೂ ಎರಡು ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.

ಮೋರಟಗಿ ಹೊರ ಪೊಲೀಸ್‌ ಠಾಣೆಯು ನಗಾವಿ (ಬಿಕೆ ), ಭಂಟನೂರ, ಗುತ್ತರಗಿ, ಗೊರವಗುಂಡಗಿ, ನಗಾವಿ (ಕೆಡಿ ), ಕೆರೂರ, ಗಾಬಸಾವಳಗಿ, ಹಂಚಿನಾಳ, ಜಾಟ್ನಾಳ, ಕಕ್ಕಳಮೆಲಿ, ಬಗಲೂರ್‌, ಶಿರಸಗಿ, ಕುಳೇಕುಮಟಗಿ, ಮೋರಟಗಿ ಸೇರಿದಂತೆ ಸುಮಾರು 15 ಹಳ್ಳಿಗಳಿಗೆ ಕೇಂದ್ರ ಬಿಂದುವಾಗಿದೆ. ಪ್ರತಿ ಮಂಗಳವಾರ ಇಲ್ಲಿ ಸಂತೆ ನಡೆಯುತ್ತದೆ. ಸಂತೆಯಲ್ಲಿ ಸುಮಾರು ಸಾವಿರಕ್ಕಿಂತ ಅಧಿಕ ಜನರು ವ್ಯಾಪಾರಕ್ಕೆ ಬರುತ್ತಾರೆ. ಸಂತೆಯಲ್ಲಿ ಮೊಬೈಲ್‌, ಕಿಸೆಗಳ್ಳತನ ಹೆಚ್ಚಾಗಿದೆ ಮತ್ತು ಸಂತೆಯ ದಿನದಂದು ರಾಷ್ಟ್ರೀಯ ಹೆದ್ದಾರಿಯಲ್ಲೇ ಆಟೋ ರಿಕ್ಷಾ, ಜಿಪ್‌, ದ್ವಿಚಕ್ರ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ.

ದಿನ ಬೆಳಗಾದರೆ ಸಾರ್ವಜನಿಕರು ನೂರಾರು ಸಮಸ್ಯೆ ಹೊತ್ತು ಪೊಲೀಸ್‌ ಠಾಣೆಗೆ ಬರುತ್ತಾರೆ. ಕೆಲವೊಮ್ಮೆ ಅಹವಾಲು ಸ್ವೀಕರಿಸಲು ಠಾಣೆಯಲ್ಲಿ ಸಿಬ್ಬಂದಿಗಳು ಕೂಡಾ ಇರುವುದಿಲ್ಲ. ಇರುವ ಮೂವರು ಸಿಬ್ಬಂದಿ ಕೆಲಸದ ನಿಮಿತ್ತ ಪಕ್ಕದ ಹಳ್ಳಿಗೆ ಬಂದಿದ್ದೇವೆ ಎಂದು ಹೇಳುವುದು ಸಾಮಾನ್ಯವಾಗಿದೆ.

ಅಕ್ರಮ ದಂಧೆಗಳಿಗಿಲ್ಲ ಬ್ರೇಕ್‌

ಅಕ್ರಮ ಮರಳು ಸಾಗಾಣಿಕೆಗೆ ಹೆಸರಾದ ಘತ್ತರಗಿ ಗ್ರಾಮ ಇಲ್ಲಿಂದ ಕೇವಲ 8 ಕಿ.ಮೀ ಮಾತ್ರ ದೂರವಿದೆ. ಮಧ್ಯರಾತ್ರಿ ಅಡ್ಡ ರಸ್ತೆಯಿಂದ ಮರಳು ಸಾಗಿಸುತ್ತಾರೆ. ಇದನ್ನು ತಡೆಗಟ್ಟಲು ಪೊಲೀಸರು ಹರಸಾಹಸ ಪಟ್ಟರು ವಾಹನಗಳು ಸಿಗುತ್ತಿಲ್ಲ. ಸಿಬ್ಬಂದಿ ಕೊರತೆಯಿಂದ ಅಕ್ರಮಕೋರರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಟಕಾ, ಇಸ್ಪೀಟ್‌, ಜೂಜಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಪೊಲೀಸ್‌ ಸಿಬ್ಬಂದಿಗಳು ಸಂಪೂರ್ಣ ವಿಫಲವಾಗುತ್ತಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಕೂಡಲೇ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇಲಧಿಕಾರಿಗಳು ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

ರಾತ್ರಿ ಪೊಲೀಸರು ಹಳ್ಳಿಗಳಲ್ಲಿ ಏನ್‌ ಬರತಾರೆ ಬಿಡಿ ಎಂದು ಹಳ್ಳಿ ಜನ ಕಡೆಗಣಿಸುವುದು ಸರ್ವೇ ಸಾಮಾನ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲೇ ಇಸ್ಪೀಟ್‌, ಮಟಕಾ, ಸಾರಾಯಿ ಅಕ್ರಮ ದಂಧೇಗಳು ನಡೆಯುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿವೆ. ಇದನ್ನು ತಡೆಗಟ್ಟಲು ಮೋರಟಗಿ ಠಾಣೆಗೆ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲೇಬೇಕು. -ಪ್ರಧಾನಿ ಮೂಲಿಮನಿ, ಭಂಟನೂರ ಗ್ರಾಮಸ್ಥ

ಈಗಾಗಲೇ ಮೋರಟಗಿ ಹೊರ ಠಾಣೆಗೆ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಇಷ್ಟು ದಿನ ಸಿಂದಗಿ ತಾಲೂಕಿನಲ್ಲಿ ಸಿಬ್ಬಂದಿನಗಳು ಕಡಿಮೆ ಇರುವುದರಿಂದ ಮೋರಟಗಿ ಠಾಣೆಗೆ ಸಾಕಷ್ಟು ಸಿಬ್ಬಂದಿ ನಿಯೋಜನೆ ಮಾಡಲು ಆಗಿಲ್ಲ. ಸದ್ಯಕ್ಕೆ ಒಬ್ಬ ಎಎಸೈ, ಇಬ್ಬರು ಪಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೂಡಲೇ ಎರಡು ದಿನಗಳಲ್ಲಿ ಇನ್ನೊರ್ವ ಸಿಬ್ಬಂದಿಗೆ ನಿಯೋಜನೆ ಮಾಡುತ್ತೇನೆ. -ಶ್ರೀಧರ ದಡ್ಡಿ ,ಡಿವೈಎಸ್‌ಪಿ, ಇಂಡಿ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.