ರೈತರ ವೇಷದಲ್ಲಿ ಹೋಗಿ ಗಾಂಜಾ ಬೆಳೆದ ಆರೋಪಿಗಳನ್ನು ಬಂಧಿಸಿದ ಎಸ್ ಐ: 75 ಕೆಜಿ ಗಾಂಜಾ ವಶ
Team Udayavani, Sep 19, 2020, 3:07 PM IST
ವಿಜಯಪುರ: ಜಿಲ್ಲೆಯ ತಾಳಿಕೋಟೆ ಠಾಣಾ ಎಸ್ ಐ ಶಿವಾಜಿ ಪವಾರ್ ಅವರು ರೈತನಂತೆ ಮಾರುವೇಶದಲ್ಲಿ ಹೋಗಿ ಗಾಂಜಾ ಬೆಳೆದಿದ್ದ ಇಬ್ಬರನ್ನು ಬಂಧಿಸಿ 75 ಕೆಜಿ ಗಾಂಜಾ ವಶಕ್ಕೆ ಪಡೆದಿರುವ ಘಟನೆ ಜರುಗಿದೆ.
ಮುದ್ದೇಬಿಹಾಳ ತಾಲೂಕ ಚವನಭಾವಿ ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಎರಡು ಪ್ರತ್ಯೇಕ ಸ್ಥಳಗಳ ಮೇಲೆ ಎಸ್ಐ ಶಿವಾಜಿ ಪವಾರ್ ಇಂದು ನಸುಕಿನ 3-30 ರ ಸುಮಾರಿಗೆ ಮಾರುವೇಶದಲ್ಲಿ ಗ್ರಾಮಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಎರಡೂ ಪ್ರಕರಣಗಳಲ್ಲಿ ಚವನಭಾವಿ ಗ್ರಾಮದ ಭೀಮಣ್ಣ ತುರಡಗಿ ಹಾಗೂ ಕೇಶಪ್ಪ ಈಳಿಗೇರ ಎಂಬಿಬ್ಬರು ಆರೋಪಿಗಳನ್ನು ಬಂಧಿಸಿ, 75 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!
ಘಟನಾ ಸ್ಥಳಕ್ಕೆ ತೆರಳಿದ ಮುದ್ದೇಬಿಹಾಳ ತಹಸೀಲ್ದಾರ ಜಿ.ಎಸ್.ಮಳಜಿ ಪಂಚನಾಮೆ ನಡೆಸಿದ್ದಾರೆ. ಎಸ್ಐ ಶಿವಾಜಿ ಪವಾರ ಕಾರ್ಯಕ್ಕೆ ಎಸ್ಪಿ ಅನುಪಮ ಅಗರವಾಲ್, ಡಿಎಸ್ಪಿ ಶಾಂತವೀರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ