ಸಿದ್ಧೇಶ್ವರಶ್ರೀ ಗಂಜಿ ಸೇವಿಸಿದ್ದಾರೆ, ಆರೋಗ್ಯ ಸ್ಥಿರವಾಗಿದೆ : ವೈದ್ಯರ ಸ್ಪಷ್ಟನೆ

ಅಧಿಕಾರಿಗಳ ಓಡಾಟ ಒಂದು ಸಾಮಾನ್ಯ ಪ್ರಕ್ರಿಯೆ ಅಷ್ಟೇ...

Team Udayavani, Jan 1, 2023, 4:50 PM IST

1——-dadsad.

ವಿಜಯಪುರ : ಆಹಾರ ಸೇವನೆ ನಿಲ್ಲಿಸಿರುವ ಕಾರಣ ಸಿದ್ಧೇಶ್ವರ ಶ್ರೀಗಳಿಗೆ ಸಹಜವಾಗಿ ಅಶಕ್ತತೆ ಕಾಡುತ್ತಿದೆಯೇ ಹೊರತು, ಅರೋಗ್ಯ ಮಾತ್ರ ಸ್ಥಿರವಾಗಿದೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಮಲ್ಲಣ್ಣ ಮೂಲಿಮನಿ, ಡಆ.ಅರವಿಂದ ಪಾಟೀಲ ಭಾನುವಾರ ಬೆಳಿಗ್ಗೆ ಗಂಜಿ ಸೇವಿಸಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಸಹಜ ಉಸಿರಾಟವಿದ್ದು, ನಾಡಿ ಬಡಿತ, ರಕ್ತದ ಒತ್ತಡವೆಲ್ಲ ಸಹಜವಾಗಿದೆ.ಶನಿವಾರ ಆಕ್ಸಿಜನ್ ಕಡಿಮೆಯಾಗಿತ್ತು, ಇದೀಗ ಸಹಜವಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಶ್ರೀಗಳು ಕಳೆದ ಕೆಲ ದಿನಗಳಿಂದ ಆಹಾರ ಸೇವಿಸಿಲ್ಲದ ಕಾರಣ ಕಾರಣ ಅಶಕ್ತತೆ ಇದೆ. ಈ ಕಾರಣದಿಂದ ಭಾನುವಾರ ಹೊರಗೆ ಬರಲಾಗುತ್ತಿಲ್ಲ. ಇದರ ಹೊರತಾಗಿ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಭಕ್ತರಲ್ಲಿ ಆತಂಕ ಬೇಡ

ಸಿದ್ದೇಶ್ವರ ಸ್ಚಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಭಕ್ತರು ಆತಂಕಗೊಳ್ಳುವ ಅಗತ್ಯವಿಲ್ಲ. ಜಿಲ್ಲಾಡಳಿತದ ಅಧಿಕಾರಿಗಳ ಓಡಾಟ ಸಾಮಾನ್ಯ ಪ್ರಕ್ರಿಯೆ ಅಷ್ಟೇ, ಭಕ್ತರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸುತ್ತೂರು ಶಿವರಾತ್ರಿ ದೇಶೀಕೇಂದ್ರಶ್ರೀಗಳು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಜ್ಞಾನಯೋಗಾಶ್ರಮದ ಭಕ್ತರಿಗೆ ಸಂದೇಶ ನೀಡಿರುವ ಸುತ್ತೂರು ಶ್ರೀಗಳು, ಸಿದ್ಧೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಪಲ್ಸ್‍ರೇಟ್ ಸಾಮಾನ್ಯಾಗಿದ್ದು, ರಕ್ತದ ಒತ್ತಡವೂ ಸಹಜ ಸ್ಥಿತಿಯಲ್ಲಿದೆ. ಆಹಾರ ಸೇವನೆ ನಿರಾಕರಿಸುತ್ತಿರುವ ಕಾರಣ ಸಮಸ್ಯೆ ನಿಶಕ್ತಿ ಇದೆ ಎಂದು ವಿವರಿಸಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ವೈದ್ಯಕೀಯ ಪಂಡಿತರ ಜೊತೆಗೆ ಚರ್ಚೆ ನಡೆಸಿದ್ದೇವೆ. ಆರೋಗ್ಯ ಸ್ಥಿರ ಊಹಾಪೂಹ ಬೇಡ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶ್ರೀಗಳ ಆರೋಗ್ಯ ವಿಚಾರಿಸಲು ಬಂದಿದ್ದಾಗ ಜಿಲ್ಲಾಡಳಿತಕ್ಕೆ ವಿಶೇಷ ಕಾಳಜಿ ತೋರಲು ಸೂಚಿಸಿದ್ದಾರೆ. ಪರಿಣಾಮ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಂಥ ಉನ್ನತ ಮಟ್ಟದ ಅಧಿಕಾರಿಗಳ ಓಡಾಟ ಒಂದು ಸಾಮಾನ್ಯ ಪ್ರಕ್ರಿಯೆ ಅಷ್ಟೇ ಎಂದು ಸಮಜಾಯಿಸಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಖುದ್ದು ದರ್ಶನ ಪಡೆದು, ಶ್ರೀಗಳ ಆರೋಗ್ಯ ವಿಚಾರಿಸಿದ್ದು, ಪ್ರಧಾನಿ ಮೋದಿ ಅವರೂ ಶ್ರೀಗಳ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಲು ಹೇಳಿದ್ದಾರೆ. ದರ್ಶನದ ಬಳಿಕ ಶ್ರೀಗಳ ಚೈತನ್ಯ ಕಂಡು ತಮಗೆ ಖುಷಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದರು.

ಆಹಾರ ಸೇವನೆಗೆ ನಿರಾಕರಿಸುತ್ತಿರುವ ಶ್ರೀಗಳು ಹೆಚ್ಚಿನ ಚಿಕಿತ್ಸೆಗೂ ಒಪ್ಪುತ್ತಿಲ್ಲ. ಹೀಗಾಗಿ ಸಹಜವಾಗಿ ನಿಶಕ್ತತೆ ಕಂಡು ಬಂದಿದೆ. ಇದರ ಹೊರತಾಗಿ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿವರಾತ್ರಿ ದೇಶಿಕೇಂದ್ರರು ಸ್ಪಷ್ಟಪಡಿಸಿದ್ದಾರೆ.

ಸಿಎಂ ಸೂಚನೆ ಮೇರೆಗೆ ಜಿಲ್ಲಾಡಳಿತ ನಿಗಾ : ಡಿಸಿ ಸ್ಪಷ್ಟನೆ
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲಾಡಳಿತ ಆಶ್ರಮದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲು ಆಗಮಿಸಿದ್ದಾರೆ. ಹೀಗಾಗಿ ವದಂತಿ ಹಬ್ಬಿಸಬೇಡಿ ಎಂದು ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ ಮನವಿ ಮಾಡಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ತಪ್ಪು ಸಂದೇಶ ಬಂದಿರುವುದರಿಂದ ಈ ಸ್ಪಷ್ಟೀಕರಣ ನೀಡುತ್ತಿದ್ದೇವೆ. ಶ್ರೀಗಳ ಆರೋಗ್ಯದ ವಿಷಯದಲ್ಲಿ ತಪ್ಪು ಸಂದೇಶ ಬೇಡ.ಶನಿವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶ್ರೀಗಳ ದರ್ಶನ ಪಡೆದು, ಆರೋಗ್ಯ ವಿಚಾರಿಸಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ಇರಿಸಿದ್ದು, ಸರ್ಕಾರಕ್ಕೆ ಮಾಹಿತಿ ನೀಡಲು ಆಶ್ರಮಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗಾಗಿ ಜಿಲ್ಲಾಡಳಿತದ ಅಧಿಕರಿಗಳ ಭೇಟಿಗೆ ತಪ್ಪು ಅರ್ಥ ಕಲ್ಪಿಸಿಕೊಳ್ಳಬೇಡಿ ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಸುಳ್ಳುಸುದ್ದಿ ನಂಬಬೇಡಿ: ಎಸ್ಪಿ
ಆತಂಕದಲ್ಲಿರುವ ಭಕ್ತರು ಜ್ಞಾನಯೋಗಾಶ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಹೀಗಾಗಿ ವಾಹನ ದಟ್ಟಣೆ, ಜನಸಂದಣಿಯನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಹೀಗಾಗಿ ಸುಳ್ಳುಸುದ್ದಿ ನಂಬಬೇಡಿ ಎಂದು ಎಸ್ಪಿ ಆನಂದಕುಮಾರ ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಗಳಿಂದಾಗಿ ತಪ್ಪು ಸಂದೇಶಗಳು ಹರಿದಾಡಿ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತು ಆಗಮಿಸುತ್ತಿರುವ ಕಾರಣ ಸಂಚಾರ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ನಿಯಂತ್ರಿಸಲು ಭಕ್ತರ ಅನುಕೂಲಕ್ಕಾಗಿ ಸಹಜವಾಗಿ ಪೊಲೀಸ್ ಬಲವನ್ನು ಹೆಚ್ಚಿಸಲಾಗಿದೆ. ಇದರ ಹೊರತಾಗಿ ಭಕ್ತರು ಆತಂಕ ಪಡುವ ಯಾವುದೇ ಬೆಳವಣಿಗೆ ನಡೆದಿಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.