ಸಿಂದಗಿ ಉಪ ಕದನ: ಶೇ.69.41 ಮತದಾನ
Team Udayavani, Oct 31, 2021, 10:48 AM IST
ಸಿಂದಗಿ: ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಶನಿವಾರ ಶೇ.69.41 ಮತದಾನವಾಗಿದೆ. ಕೆಲವೆಡೆ ಮತಯಂತ್ರದ ತಾಂತ್ರಿಕ ಲೋಪ ಕಂಡು ಬಂದ ಹಿನ್ನೆಲೆ ಚುನಾವಣಾ ಅಧಿ ಕಾರಿಗಳು ತ್ವರಿತವಾಗಿ ಸಮಸ್ಯೆ ಬಗೆಹರಿಸಿದ್ದು, ಎಲ್ಲೆಡೆ ಶಾಂತರೀತಿಯ ಮತದಾನವಾಗಿದೆ.
ಕ್ಷೇತ್ರದ ಮತದಾರ ಗುಟ್ಟು ಬಿಟ್ಟು ಕೊಡದೇ ತನ್ನ ಹಕ್ಕು ಚಲಾಯಿಸಿದ್ದು, ಕ್ಷೇತ್ರದ ಶಾಸಕ ಯಾರು ಎಂಬ ಷರಾ ಮತಯಂತ್ರದಲ್ಲಿ ಭದ್ರವಾಗಿದೆ. ಜೆಡಿಎಸ್ ಶಾಸಕರಾಗಿದ್ದ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದ ಹಿನ್ನೆಲೆ ಉಪಚುನಾವಣೆ ನಡೆದಿದೆ. ಶನಿವಾರ ಬೆಳಗ್ಗೆ ನೀರಸ ಹಾಗೂ ಮಂದಗತಿಯಲ್ಲಿ ಸಾಗಿದ್ದ ಮತದಾನ ಮಧ್ಯಾಹ್ನ ವೇಳೆಗೆ ಬಿರುಸು ಪಡೆಯಿತು.
ಮತದಾನ ಆರಂಭಕ್ಕೆ ಮುನ್ನವೇ ಆಲಮೇಲ ಪಟ್ಟಣದ ಮತಗಟ್ಟೆಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ಸಂಬಂಧಿ ಪದ್ಮಾವತಿ ಎಂಬುವರು ಮತಗಟ್ಟೆ ಕೇಂದ್ರದ ಬಾಗಿಲು, ಹೊಸ್ತಿಲಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಸ್ಥಳೀಯ ಮುಸ್ಲಿಂ ಮಹಿಳೆಯರು ಸಾಥ್ ನೀಡಿದರು.
ಅಭ್ಯರ್ಥಿಗಳ ಮತದಾನ
ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪತ್ನಿ ನಾಗರತ್ನ ಜತೆ ಮಲಘಾಣ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಕುಟುಂಬದ ಮಹಿಳೆಯರು ಮತಗಟ್ಟೆಗೆ ಪೂಜೆ ಸಲ್ಲಿಸಿ ಮತದಾನ ಮಾಡಿದರೆ, ಗಣಿಹಾರ ಗ್ರಾಮದ ಮತಗಟ್ಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಸಿಂದಗಿ ಕ್ಷೇತ್ರದ ತಾಂಬಾ ಗ್ರಾಮದ ಮತಗಟ್ಟೆಯಲ್ಲಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಪತ್ನಿ ಅನಿತಾ ಜತೆ ಆಗಮಿಸಿ ಮತದಾನ ಮಾಡಿದರು.
ಕೈಕೊಟ್ಟ ಮತಯಂತ್ರಗಳು
ಸಿಂದಗಿ ಪಟ್ಟಣದ ಬಾಲಕಿಯರ ಶಾಲೆಯ ಮತಗಟ್ಟೆ ಸಂಖ್ಯೆ 172ರ ಮತಯಂತ್ರದಲ್ಲಿ ದೋಷ ಕಂಡು ಬಂದಿದ್ದು, ತ್ವರಿತವಾಗಿ ಪರ್ಯಾಯ ವ್ಯವಸ್ಥೆ ಮಾಡಲಾಯಿತು. ತಾಂಬಾ ಗ್ರಾಮದ ಮತಗಟ್ಟೆ ಸಂಖ್ಯೆ 92ರಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಯಂತ್ರವನ್ನು ಬದಲಿಸಲಾಯಿತು. ದೇವಣಗಾಂವ ಬಾಲಕರ ಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 12, ಕುಳೆ ಕುಮಟಗಿ ಗ್ರಾಮದ ಮತಗಟ್ಟೆ ಸಂಖ್ಯೆ 56 ಹಾಗೂ ಸುರಗಿಹಳ್ಳಿಯ ಮತಗಟ್ಟೆ ಸಂಖ್ಯೆ 99 ವಿವಿ ಪ್ಯಾಟ್ ಯಂತ್ರದಲ್ಲಿ ಲೋಪ ಕಂಡು ಬಂದ ಹಿನ್ನೆಲೆ ಕೂಡಲೇ ಯಂತ್ರಗಳನ್ನು ಬದಲಿಸಿ ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಯಿತು.
ಇದನ್ನೂ ಓದಿ: ಡೆತ್ ನೋಟ್ ನಲ್ಲಿ ಪೊಲೀಸರಿಬ್ಬರ ಹೆಸರು ಬರೆದಿಟ್ಟು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ!
ಸಮಯವಾರು ಮತದಾನ
ಬೆಳಗ್ಗೆ 7ರಿಂದ 9ರವರೆಗೆ ಶೇ.8.08 ಮತದಾನವಾಗಿದ್ದು, ಬೆಳಗ್ಗೆ 11ರವರೆಗೆ ಶೇ. 26.75 ಮತದಾರರು ಹಕ್ಕು ಚಲಾಯಿಸಿದ್ದರು. ಮಧ್ಯಾಹ್ನ 1ರ ವೇಳೆಗೆ ಶೇ. 32.49ರಷ್ಟಾಗಿದ್ದ ಮತದಾನ, ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 51.60 ಹಾಗೂ ಸಂಜೆ 5ಕ್ಕೆ ಶೇ. 64.54 ಏರಿಕೆ ಕಂಡಿತ್ತು. ಅಂತಿಮವಾಗಿ ಶೇ. 68.12 ಮತದಾನವಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
MUST WATCH
ಹೊಸ ಸೇರ್ಪಡೆ
ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ
Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?
Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ