ಟಿಕೆಟ್‌ ಸಿಗುವ ಮುನ್ನವೇ ಮತದಾರರ ಮನವೋಲಿಕೆ ಕಸರತ್ತು

ರಂಗೇರಿದೆ ಸಿಂದಗಿ ಉಪ ಚುನಾವಣಾ ಕಣ

Team Udayavani, Mar 18, 2021, 8:10 PM IST

congress

ಸಿಂದಗಿ: ಸಿಂದಗಿ ವಿಧಾನಸಭಾ ಉಪ ಚುನಾವಣೆಯ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ರಾಜಕೀಯ ಪಕ್ಷಗಳು ತಮ್ಮ ಅಸಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಆದರೂ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳು ನನಗೆ ಟಿಕೆಟ್‌ ಗ್ಯಾರಂಟಿ ಎಂದು ಕ್ಷೇತ್ರದ ಹಳ್ಳಿ ಹಳ್ಳಿಗಳಿಗೆ ಹೋಗಿ ಮತದಾರರ ಮನವೊಲಿಕೆ ಕಸರತ್ತಿನಲ್ಲಿ ತೊಡಗಿದ್ದಾರೆ.

ಚುನಾವಣಾ ಕಣ ಅಕ್ಷರಶಃ ಕಾವೇರಿದ್ದು ಪ್ರಚಾರದ ಅಬ್ಬರ ಮುಗಿಲು ಮುಟ್ಟಿದೆ. ಪಟ್ಟಣದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಚುನಾವಣೆಗೆ ಸಂಬಂಧಿಸಿದ ಸಭೆ, ಸಮಾರಂಭ, ರೋಡ್‌ ಶೋ, ಮತಯಾಚನೆ ಕಾರ್ಯ ನಡೆಸಿ ತಮ್ಮ ಪಕ್ಷದ ಬಲ ಪ್ರದರ್ಶನ ನಡೆಸಿವೆ. ರಾಜ್ಯ ನಾಯಕರನ್ನು ಕರೆಸಿ ಪಕ್ಷದ ಸಂಘಟನೆ ಪ್ರದರ್ಶನ ಮಾಡಬೇಕು ಎಂದು ಕನಸು ಹೊತ್ತ ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಕನಸು ಕೊರೊನಾ ಮಾಹಾಮಾರಿ ಕಸಿದುಕೊಂಡಿದೆ.

ಬಿಜೆಪಿ, ಕಾಂಗ್ರೆಸ್‌ ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳು ಬೆಳಗ್ಗೆ 8ರ ವೇಳೆಗೆ ಹಳ್ಳಿಗಳಲ್ಲಿರುತ್ತಿದ್ದಾರೆ. ನನಗೆ ಟಿಕೆಟ್‌ ಸಿಗೋದು ಗ್ಯಾರಂಟಿ, ನೀವು ನಮಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತ ಕಾಲಿಗೆ ಚಕ್ರ ಕಟ್ಟಿಕೊಂಡವರ ರೀತಿಯಲ್ಲಿ ಹಗಲು-ರಾತ್ರಿಗಳ ಪರಿವೆ ಇಲ್ಲದೆ ಓಡಾಡುತ್ತ ತಂತ್ರಗಾರಿಕೆ ನಡೆಸುತ್ತಿದ್ದಾರೆ.

ಪ್ರಸ್ತುತ ತಾಲೂಕಿನಲ್ಲಿ ಬೇಸಿಗೆ ಬಿಸಿಲು ನೆತ್ತಿ ಸುಡುತ್ತಿದೆ. ತಾಪಮಾನದ ಪ್ರಮಾಣ ಗರಿಷ್ಠ 35 ಡಿಗ್ರಿವರೆಗೂ ದಾಖಲಾಗುತ್ತಿದೆ. ಮಧ್ಯಾಹ್ನದ ವೇಳೆಯಲ್ಲಂತೂ ಮನೆ ಹೊರಗೆ ಕಾಲಿಡಲು ಆಗದಷ್ಟು ಬಿಸಿಲು ಕಂಡು ಬರುತ್ತದೆ. ಇಂತಹ ಸನ್ನಿವೇಶದಲ್ಲೂ ಟಿಕೆಟ್‌ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಮತದಾರರ ಮನೆ ಬಾಗಿಲುಗಳಿಗೆ ಎಡತಾಕುತ್ತಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ ಪ್ರಮುಖ ಆಕಾಂಕ್ಷಿಗಳು ತಮ್ಮ ವರಿಷ್ಠರ ಬಳಿ ಹೋಗಿ ತಮ್ಮ ಸ್ವ ಪಕ್ಷದ ಟೀಕೆ ಆಕಾಂಕ್ಷಿಗಳ ಬಗ್ಗೆ ಆರೋಪ-ಪ್ರತ್ಯಾರೋಪಗಳ ಕೆಸರೆರಚಾಟ ತಾರಕಕ್ಕೇರಿದೆ. ಟಿಕೆಟ್‌ ಆಕಾಂಕ್ಷಿಗಳು ಟಿಕೆಟ್‌ ಸಿಗದಿದ್ದರೂ ಕ್ಷೇತ್ರದ ಹಳ್ಳಿ ಹಳ್ಳಿ ಗಳಲ್ಲಿನ ಮನೆ ಮನೆ ಬಾಗಲಿಗೆ ಹೋಗುತ್ತಿದ್ದಾರೆ. ತಮ್ಮ ಸಮುದಾಯದ ಮತದಾರರನ್ನು ಗೌಪ್ಯ ಸ್ಥಳದಲ್ಲಿ ಸೇರಿಸಿ ಜಾತಿ ಒಗ್ಗಟ್ಟಿನ ಬಗ್ಗೆ ಹೇಳುವ ಮೂಲಕ ಮತ ಯಾಚಿಸುವ ಜಾತಿ ತಂತ್ರಗಾರಿಗೆ ನಡೆದಿವೆ.

ಕ್ಷೇತ್ರದ ಹಲವೆಡೆ ಕೆಲ ರಾಜಕೀಯ ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳು ಚುನಾವಣೆ ಘೋಷಣೆ ಮುಂಚೆಯೇ ಅತ್ಯಂತ ಗುಪ್ತವಾಗಿ ಮತದಾರರಿಗೆ ನಾನಾ ರೀತಿಯ ಆಮಿಷವೊಡ್ಡುತ್ತಿರುವ ಮಾಹಿತಿಗಳು ಸಾರ್ವಜನಿಕ ವಲಯದಿಂದ ಕೇಳಿ ಬರಲಾರಂಭಿಸಿದೆ. ಚುನಾವಣೆ ದಿನಾಂಕ ಮತ್ತು ಪಕ್ಷಗಳ ಅಭ್ಯರ್ಥಿಗಳ ಹೆಸರುಗಳು ಘೋಷಣೆಯಾದಲ್ಲಿ ಆಮಿಷದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ರಮೇಶ ಪೂಜಾರ   

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.