ಸಿಂದಗಿ ಸಮಗ್ರ ಅಭಿವೃದ್ದಿಗೆ ಸಚಿವ ಸ್ಥಾನ ನೀಡಲು ಆಗ್ರಹ
Team Udayavani, Nov 6, 2021, 2:41 PM IST
ಮೋರಟಗಿ: ಸಿಂದಗಿ ಕ್ಷೇತ್ರದ ಜನ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಎಲ್ಲ ಸಚಿವರು ಇಟ್ಟಿರುವ ನಿರೀಕ್ಷೆಗಿಂತಲೂ ಹೆಚ್ಚು ಮತ ನೀಡಿ ಬಿಜೆಪಿ ಗೆಲ್ಲಿಸಿದ್ದಾರೆ. ಸಿಂದಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹ್ಯಾಟ್ರಿಕ್ ಸರದಾರ ಶಾಸಕ ರಮೇಶ್ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಿಜೆಪಿ ಓಬಿಸಿ ತಾಲೂಕ ಅಧ್ಯಕ್ಷ ರವಿಕಾಂತ ನಯ್ಕೋಡಿ ಸರಕಾರಕ್ಕೆ ಮನವಿ ಮಾಡಿದರು.
ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಅವರ ಅಧಿಕಾರದ ಅವಧಿಯಲ್ಲಿ ಶಾಸಕ ರಮೇಶ ಭೂಸನೂರ ಅವರು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಲವಾರು ಯೋಜನೆಯಡಿ ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕಳೆದ 2018 ರ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಪರಾಭವಗೊಂಡ ರಮೇಶ ಭೂಸನೂರ ಅವರು ಸೋತರು ಜನಪರ ಕೆಲಸ ಮಾಡಿದ್ದಾರೆ. ಕ್ಷೇತ್ರದ ಜನ ಎಲ್ಲ ಸಚಿವರ ಮತ್ತು ಮುಖ್ಯಮಂತ್ರಿಗಳ ಮೇಲೆ ಅಪಾರ ನಂಬಿಕೆ ಇಟ್ಟು ಬಿಜೆಪಿ ನಿರೀಕ್ಷೆಕಿಂತಲೂ ಹೆಚ್ಚು ಮತ ನೀಡಿ ಗೆಲ್ಲಿಸಿದ್ದಾರೆ. ಅಭಿವೃದ್ಧಿ ಹರಿಕಾರ ಬಡ ಜನರ ನೇತಾರ ಶಾಸಕ ರಮೇಶ ಭೂಸನೂರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ