ಬಿರುಗಾಳಿ ಸಹಿತ ಮಳೆಗೆ ದ್ರಾಕ್ಷಿ ಹಾನಿ

ಬೆಳೆಗಾರರಿಗೆ ಲಕ್ಷಾಂತರ ರೂ. ನಷ್ಟ ಅಕಾಲಿಕ ಮಳೆಗೆ ರೈತ ಕಂಗಾಲು

Team Udayavani, Mar 20, 2020, 12:03 PM IST

20-March-6

ಸೊಲ್ಲಾಪುರ: ಅಕ್ಕಲಕೋಟ ತಾಲೂಕಿನ ನಾಗಣಸೂರ ಗ್ರಾಮದ ಭಾಗದಲ್ಲಿ ಬುಧವಾರ ರಾತ್ರಿ ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ದ್ರಾಕ್ಷಿ ಬೆಳೆ ನೆಲಕ್ಕುರುಳಿದ್ದು, ಲಕ್ಷಾಂತರ ರೂ. ಬೆಳೆ ಹಾನಿಯಾಗಿದೆ.

ಅಕ್ಕಲಕೋಟ ತಾಲೂಕಿನ ನಾಗಣಸೂರ ಗ್ರಾಮದ ಭಾಗದಲ್ಲಿ ಬುಧವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಸುರಿಯಿತು. ಆಕಸ್ಮಿಕವಾಗಿ ಸುರಿದ ಈ ಅಕಾಲಿಕ ಮಳೆಯಿಂದ ನಾಗಣಸೂರ ಭಾಗದ ಹೊಲ ಗದ್ದೆಗಳಲ್ಲಿದ್ದ ಜೋಳ, ದ್ರಾಕ್ಷಿ, ಗೋಧಿ  ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಇದರಿಂದ ಲಕ್ಷಾಂತರ ರೂ. ಖರ್ಚು ಮಾಡಿ ದ್ರಾಕ್ಷಿ ಬೆಳೆದ ರೈತರಿಗೆ ಅಪಾರ ನಷ್ಟವಾಗಿದೆ.

ನಾಗಣಸೂರ ಗ್ರಾಮದ ಭಾಗದಲ್ಲಿ ಸುಮಾರು 300 ರಿಂದ 400 ಎಕರೆಯಲ್ಲಿ ದ್ರಾಕ್ಷಿ ಬೆಳೆಯಿದೆ. ಸುಮಾರು 60 ರಿಂದ 70 ರೈತರು ದ್ರಾಕ್ಷಿ ಬೆಳೆದಿದ್ದಾರೆ. ಇದರಲ್ಲಿ ಗ್ರಾಮದ ಗುಲಾಬ ಪ್ರಚಂಡೆ, ಧನರಾಜ ಧನಶೆಟ್ಟಿ, ಶಾಂತಪ್ಪ ಗಂಗೋಂಡಾ, ಶಿವಾನಂದ ಖೋನಾಪುರೆ, ಶಿವಾನಂದ ಕಲ್ಯಾಣ, ಪ್ರಕಾಶ ಕಲಶೆಟ್ಟಿ ಸೇರಿದಂತೆ ಸುಮಾರು 25ರಿಂದ 30 ರೈತರ ಗದ್ದೆಗಳಲ್ಲಿ ಬೆಳೆದಿದ್ದ ದ್ರಾಕ್ಷಿ ಬೆಳೆ ಸಂಪೂರ್ಣ ನೆಲಕ್ಕುರುಳಿವೆ.

ಅಕಾಲಿಕ ಮಳೆ, ಬಿರುಗಾಳಿಯಿಂದ 12 ಎಕರೆಯಲ್ಲಿ ಸುಮಾರು ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ. ಅಲ್ಲದೇ ಎಕರೆಗೆ ನಾಲ್ಕು ಟನ್‌ ಒಣ ದ್ರಾಕ್ಷಿ ಬರುತಿತ್ತು. ಈಗ ಅದು ಕೂಡ ಹಾಳಾಗಿವೆ. ಈ ಕುರಿತು ಶಾಸಕರಿಗೆ ಮತ್ತು ತಹಶೀಲ್ದಾರ್‌ಗೆ ತಿಳಿಸಿದ್ದೇನೆ. ಸರಕಾರದಿಂದ ಬೆಳೆ ಹಾನಿ ಪರಿಹಾರ ಒದಗಿಸಬೇಕು.
ಬಸವರಾಜ ಖೇಡ,
ರೈತ, ನಾಗಣಸೂರ

ಅಕ್ಕಲಕೋಟ ತಾಲೂಕಿನ ನಾಗಣಸೂರ ಭಾಗದಲ್ಲಿ ಬುಧವಾರ ರಾತ್ರಿ ಅಕಾಲಿಕ ಮಳೆಯಿಂದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ಈ ಕುರಿತು ತಹಶೀಲ್ದಾರ್‌ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಹೇಳಿದ್ದೇನೆ. ನಿಸರ್ಗದಿಂದ ರೈತರಿಗೆ ಹಾನಿಯಾಗಿದೆ. ಕೂಡಲೇ ಅವರಿಗೆ ಬೆಳೆ ಹಾನಿ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಒತ್ತಾಯಿಸುತ್ತೇನೆ.
. ಸಚಿನ್‌ ಕಲ್ಯಾಣಶೆಟ್ಟಿ,
ಶಾಸಕ, ಅಕ್ಕಲಕೋಟ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.